Homeಮುಖಪುಟಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಟಿ.ವಿ9 ತೆಲುಗು ಚಾನೆಲ್ ನ ಮಾಜಿ ಸಿಈಓ ರವಿಪ್ರಕಾಶ್ ಹೊರಕ್ಕೆ: ಕಾರಣವೇನು? ಇಲ್ಲಿದೆ ಶಾಕಿಂಗ್ ಸ್ಟೋರಿ

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಇತ್ತಿಚಿಗೆ ರಾಜಕೀಯ ವಲಯಕ್ಕಿಂತ ಅತಿ ಭ್ರಷ್ಟವಾಗಿರುವುದು ಮಾಧ್ಯಮ ಎಂದು ನೇರವಾದ ಆರೋಪವನ್ನು ಒಬ್ಬ ಹಿರಿಯ ರಾಜಕಾರಣಿ ಮಾಡಿದ್ದರು. ಅದಕ್ಕೆ ಪೂರಕವೆಂಬಂತೆ ನಮ್ಮ ರಾಜ್ಯದಲ್ಲೂ ಹಲವು ಬ್ಲಾಕ್ ಮೈಲ್ ಮಾದ್ಯಮ ಮುಖ್ಯಸ್ಥರು ಜೈಲಿಗೆ ಹೋಗಿ ಬಂದ ನಿರ್ದಶನಗಳು ನಮ್ಮ ಕಣ್ಣ ಮುಂದೆ ಕಾಣಿಸುತ್ತಿವೆ. ದುಡ್ಡಿಗಾಗಿಯೇ ಸುದ್ದಿ ಎನ್ನುಂತಹ ಕಾಲ ಬಂದು ಬಹಳ ವರ್ಷವೇ ಆಗಿ ಹೋಗಿವೆ. 24/7 ಸುಧ್ಧಿವಾಹಿನಿಗಳೂ ಬಂದ ನಂತರವಂತು ನೈಜ ಸುದ್ಧಿಯ ಜಾಗದಲ್ಲಿ ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಪ್ರೊಪಗಂಡ ಹರಡುವ ಸುದ್ಧಿ ಮನೆಗಳಾಗಿ ಬದಲಾಗಿವೆ. ಎಷ್ಟೋ ಸಲ ತನ್ನ ಮಾಲೀಕನ ಹಿತ ಕಾಪಾಡುವ ನಾಯಿಯಂತಿರುವವರನ್ನು ಮಾತ್ರ ಉಳಿಸಿಕೊಂಡು ಉಳಿದವರನ್ನು ಆಚೆ ತಳ್ಳುವ ಸುದ್ದಿ ಮಾಧ್ಯಮಗಳು ಇವೆ. ಅಂತಹ ಒಂದು ಸ್ಟೋರಿ ಓದಿ.

ಇತ್ತಿಚಿಗೆ ಸುದ್ಧಿವಾಹಿನಿಗಳ ಸಾಲಿನಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ಟಿ.ವಿ9 ತೆಲುಗು ವಾಹಿನಿಯಲ್ಲಿ ಸಾಕಷ್ಟು ಜಗಳಗಳು ನಡೆದು ಹೋಗಿವೆ. ಬಹಳ ತಿಂಗಳುಗಳಿಂದ ನಡೆಯುತ್ತಿದ್ದ ಜಗಳ ಬಹಳ ವರ್ಷಗಳ ಕಾಲ ಟಿ.ವಿ 9 ಸಿ.ಈ.ಓ ಆಗಿದ್ದ ರವಿಪ್ರಕಾಶ್ ರನ್ನು ಸಂಸ್ಥೆ ದಿಢೀರನೆ ತೆಗೆದು ಹಾಕಿ ಅವರ ಮೇಲೆ ಕೇಸ್ ಹಾಕಿದ್ದು ಈಗ ದೊಡ್ಡ ವಿವಾದವಾಗಿದೆ. ಆದ ನಂತರ ಟಿ.ವಿ9 ಪಾಲುಧಾರಿಕೆ ಮಾರಟದ ವಿವಾದ ಹೊರಬಂದ ನಂತರ ತೆಲುಗು ಮಾಧ್ಯಮ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ದುಡ್ಡಿಗಾಗಿ ಬೀದಿ ಜಗಳ ಮಾಡಿಕೊಳ್ಳುತ್ತಿರುವ ಮಾಧ್ಯಮ ಮಂದಿಯನ್ನು ನೋಡಿ ಜನ ಸಿಟ್ಟಿಗೆದ್ದಿದ್ದಾರೆ.

ಟಿ.ವಿ.9 ಸಂಸ್ಥೆಯ ಆಡಳಿತ ಮಂಡಳಿ ಮತ್ತು ರವಿ ಪ್ರಕಾಶ್ ನಡುವಿನ ವಿವಾದ

ಟಿ.ವಿ.9 ಮುಖ್ಯ ಕಾರ್ಯನಿರ್ವಹಣಧಿಕಾರಿಯಾಗಿದ್ದ ರವಿಪ್ರಕಾಶ್ ರನ್ನು ಮೇ ತೀಂಗಳಲ್ಲಿ ಏಕಾಏಕಿ ಕೆಳಗಿಳಿಸಿತು. ಅಸೋಸಿಯೇಟೆಡ್ ಬ್ರಾಡ್‍ಕಾಸಟಿಂಗ್ ಕಂಪನಿ ಪ್ರೈ.ಲಿಮಿಟೆಡ್ (ಎ.ಬಿ.ಸಿ.ಬಿ.ಪಿ.ಎಲ್ – ಟಿವಿ9) ಸಂಸ್ಥೆಯ ಲೆಕ್ಕಪತ್ರಗಳನ್ನು ತಿರುಚಿದ್ದು ಮತ್ತು ಸಂಸ್ಥೆಯನ್ನು ಮೋಸಗೊಳಿಸಿದ್ದಾರೆಂದು ರವಿಪ್ರಕಾಶ್ ಮೇಲೆ ಹೊಸ ಆಡಳೀತ ಮಂಡಳಿ ‘ಅಳಂದಾ ಮೀಡಿಯಾ ಸಂಸ್ಥೆ’ಯ ಕೌಶಿಕ್ ರಾವ್ ರವರು ಸೈಬಾರ್ ಬಾದ್ ಪೋಲೀಸರಿಗೆ ದೂರನ್ನು ನೀಡಿದ್ದರು. ಟಿ.ವಿ9 ಸಂಸ್ಥೆಯ ತನ್ನ ಆಸ್ತಿ ಒಡೆತನದ, ಪಾಲುಗಳ ಮಾರಟದ ಬಗ್ಗೆ ರವಿಪ್ರಕಾಶ್ ಸುಳ್ಳು ಪತ್ರಗಳನ್ನು ಸೃಷ್ಟಿಮಾಡಿದ್ದಾರೆ ಮತ್ತು ತೆಲುಗು ಸಿನಿಮಾ ನಟ ಶಿವಾಜಿ, ಟಿವಿ9 ಸಂಸ್ಥೆಯ ಒಡೆತನದ ಹಕ್ಕುಗಳು ರವಿಪ್ರಕಾಶ್ ನಿಂದ ಖರೀದಿಮಾಡಿದ ರೀತಿಯ ನಕಲಿಪತ್ರಗಳು ಸೃಷ್ಟಿ ಮಾಡಿದ್ದಾರೆ ಇದಕ್ಕೆ ಅವರಿಬ್ಬರ ನಡುವೆ ನಡೆದ ಈಮೈಲ್ ವ್ಯವಹಾರಗಳೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

ರವಿ ಪ್ರಕಾಶ್

ದೂರು ನೀಡಿದ ದಿನವೇ ಬಂಜಾರಾ ಹಿಲ್ಸ್ ನಲ್ಲಿರುವ ರವಿಪ್ರಕಾಶ್ ಮನೆ ಮತ್ತು ಟಿವಿ9 ಕಛೇರಿಯಲ್ಲಿದ್ದ ಕೆಲವು ಹಾರ್ಡಗ ಡಿಸ್ಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕುರಿತು ಪೋಲಿಸರು ಸೆಕ್ಷನ್ 160, 41 ಅಡಿಯಲ್ಲಿ ಎರಡು ಭಾರಿ ಆತ ಮತ್ತು ಆತನ ಜೊತೆಗಾರ ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಉತ್ತರಿಸದ ಇವರಿಬ್ಬರು ಬಹಳ ದಿನಗಳ ವರೆಗೆ ಅಜ್ಞಾತವಾಸದಲ್ಲಿದ್ದರು. ಹೈಕೋರ್ಟ್‍ಗೆ ಬೇಲ್ ಗಾಗಿ ಹೋದ ರವಿಪ್ರಕಾಶ್ ಗೆ ಬೇಲ್ ಸಿಕ್ಕಿಲ್ಲ ಮತ್ತೆ ಈತ ಸುಪ್ರೀಂಕೋರ್ಟ್‍ನಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ ಹೈಕೋರ್ಟ್‍ಗೆ ಹೋಗಿ ಎಂದ ನಂತರ ಹೈಕೋರ್ಟಿನಲ್ಲಿಯೇ ಮಧ್ಯಂತರ ಬೇಲ್ ಸಿಕ್ಕಕಾರಣ ಸೈಬಾರಾಬಾದ್ ಸೈಬರ್ ಪೋಲಿಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಐದು ಘಂಟೆಗಳ ಕಾಲ ಸುಧೀರ್ಘವಾಗಿ ರವಿಪ್ರಕಾಶ್‍ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ .

ಕೌಶಿಕ್ ರಾವ್

ಈ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ರವಿಪ್ರಕಾಶ್ ಟಿ.ವಿ9ನನ್ನು ಇಬ್ಬರು ದೊಡ್ಡ ಬಂಡವಾಳಿಗರು ಅಕ್ರಮವಾಗಿ ಕೊಂಡುಕೊಂಡಿದ್ದಾರೆ ಮತ್ತು ನನ್ನ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿದ್ದಾರೆ. ನಿಯಮಗಳನ್ನು ಮೀರಿ ಮಂಡಳಿ ಸಭೆ ನಡೆಸಿ ನನ್ನನ್ನು ಹೊರಗೆ ಕಳುಹಿಸಿದ್ದಾರೆ. ಇದು ಮಾಫೀಯಾಗೂ, ಮಾಧ್ಯಮಕ್ಕು ಮಧ್ಯೆ ನಡೆಯುತ್ತಿರುವ ಧರ್ಮಯುಧ್ಧ, ಕೊನೆಗೆ ಪತ್ರಿಕೋಧ್ಯಮವೇ ಗೆಲ್ಲಲಿದೆ ಎಂದಿದ್ದಾರೆ. ನಾನು ಸಂಪೂರ್ಣವಾಗಿ ತನಿಖೆಗೆ ಪೋಲಿಸರಿಗೆ ಸಹಕರಿಸುತ್ತಿದ್ದೇನೆ ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ಹೇಳಿದ್ದಾರೆ. ಈಗ ಪ್ರಸ್ತುತ ಟಿ.ವಿ9 ಕನ್ನಡದ ಸಿ.ಈ.ಓ ನೇ ತೆಲುಗು ಟಿ.ವಿ.9 ವಾಹಿನಿಯ ಸಿ.ಈ.ಓ ಆಗಿ ನೇಮಕಗೊಂಡಿದ್ದಾರೆ.

ನಟ ಶಿವಾಜಿ

ಯಾರು ಈ ರವಿಪ್ರಕಾಶ್ ?

ಹಾರ್ವಡ್ ಬ್ಯುಸಿನೆಸ್ ಸ್ಕೂಲ್‍ನಲ್ಲಿ ಮೀಡಿಯಾ ಸ್ಟಾಟಜಿ ವಿಭಾಗದಲ್ಲಿ ಹಿಡಿತ ಸಾಧಿಸಿಬಂದ ರವಿಪ್ರಕಾಶ್, ತೇಜಾ ಟಿವಿಯಲ್ಲಿ ನ್ಯೂಸ್ ಹೆಡ್ಡ್ ಆಗಿ ಕೆಲಸಕ್ಕೆ ಸೇರಿದ ಸಮಯದಲ್ಲಿ ತನ್ನ ವಿಭಿನ್ನ ಶೈಲಿಯ ಕೆಲಸದಿಂದ ಮಾಧ್ಯಮಲೋಕದ ಮಂದಿಗೆ ಪರಿಚಿತನಾದ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಒಂದೋ ಎರಡೋ ಇಪ್ಪತ್ತನಾಲ್ಕು ಗಂಟೆ ಸುದ್ಧಿ ಮಾಧ್ಯಮಗಳಿದ್ದ ಸಮಯಕ್ಕೆ ಮೊದಲನೇ ಭಾರಿಗೆ ತೆಲುಗಿನಲ್ಲಿ ಟಿವಿ9 ಪ್ರಾರಂಭಿಸಿ ಸಂಚಲನ ಮೂಡಿಸಿದ್ದ. ಟಿವಿ9 ಅನ್ನು ನಂಬರ್ 1 ಮಾಡಲು ಸುದ್ಧಿಯಲ್ಲದ ಸುದ್ದಿಗಳನ್ನು ಡಿಬೇಟ್ ನಡೆಸಿದ ಬಗ್ಗೆ ಮತ್ತು TRP ಹುಚ್ಚು ಹತ್ತಿಸಿದವ ಎಂದು ಈತನ ಬಗ್ಗೆ ಆರೋಪವಿದೆ. ಆದರೆ ಅತಿವೇಗವಾಗಿ ಬೆಳೆದ ಈತ ಈಗ ನೆಲಕ್ಕೆ ಬಿದ್ದಿದ್ದು ಮೀಡೀಯಾ ಮಾಫೀಯಾವೇ ಕಾರಣವಾ? ಅಥವಾ ತನ್ನ ಕೆಡುಕುಬುದ್ದಿ ಕಾರಣವಾ ಎಂಬುದನ್ನು ಕೋರ್ಟ್ ತೀರ್ಮಾನಿಸಲಿದೆ.

ಮೀಡಿಯಾ ಹೌಸ್ ಗಳಲ್ಲಿ ನಿಜವಾಗಲೂ ಏನು ನಡೆಯುತ್ತಿದೆ?

ಸುದ್ಧಿಗಾಗಿ ನಿರಂತರ ಇಪ್ಪತ್ತನಾಲ್ಕು ಗಂಟೆ ತೋರಿಸುವ ಚಾನೆಲ್ ಗಳು ಬಂದಾಗಿನಿಂದ ಜನರು ಬಿಸಿ ಬಿಸಿ ಸುದ್ಧಿಗಳನ್ನು ನೋಡಲು ಶುರುಮಾಡಿದ ನಂತರ ಟಿ.ಆರ್.ಪಿ ಮತ್ತು ರಾಜಕೀಯ ಹಿಡತ ಇದನ್ನು ನಿಯಂತ್ರಿಸಲು ಶುರು ಮಾಡಿತ್ತು. ಈ ಮಾಧ್ಯಮಗಳು ಕೇವಲ ರಾಜಕೀಯ ಪಕ್ಷಗಳ ಬಾಲಗಳಾಗಿ ಕೆಲಸ ಮಾಡಿತ್ತಿರುವುದನ್ನು ಕಾಣಬಹುದಾಗಿದೆ. ಇದರ ನಡುವೆ ಸುದ್ದಿಮಾಧ್ಯಮಗಳನ್ನು ಅಡ್ಡ ಇಟ್ಟಕೊಂಡು ದೊಡ್ಡ ವ್ಯಾಪಾರಗಳೇ ನಡೆಯುತ್ತಿವೆ. ಕೆಲವು ಚಾನೆಲ್ ಗಳಂತು ಟಿ.ಆರ್.ಪಿಯನ್ನು ತೋರಿಸಿ ತಮಗೆ ಬೇಕಾದ ಸುದ್ಧಿಗಳನ್ನು ತೋರಿಸಿ ಪ್ರಪೊಗಂಡ ಮಾಡಲು ಪ್ಯಾಕೇಜ್ ತೆಗೆದುಕೊಳ್ಳುತ್ತಿದ್ದಾರೆ. ಈ ಸುದ್ಧಿ ವಾಹಿನಿಗಳ ಒಳಗಡೆ ಇರುವಂತಹ ಮುಖ್ಯಸ್ಥರು ಲಾಭದ ವಿಚಾರದಲ್ಲಿ ದೊಡ್ಡ ಜಗಳಗಳನ್ನೆ ಮಾಡಿಕೊಂಡಿದ್ದಾರೆ. ಆದರೆ ಈ ಗಲಾಟೆ ಮಾತ್ರ ಹೊರಬಂದು ಸಂಚಲನ ಉಂಟುಮಾಡಿದೆ. ಇನ್ನುಳಿದವರು ಯಾವಾಗ ಹೊರಬರುತ್ತವೊ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...