Homeಮುಖಪುಟಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ ಜಿಲ್ಲೆಯ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ವಿಜಯ್ ತಿಳಿಸಿದ್ದಾರೆ.

ಭಾನುವಾರ (ಮಾ.29) ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ ವಿಜಯ್, “ಚೊಚ್ಚಲ ಚುನಾವಣೆಯಲ್ಲಿ ನಮಗೊಂದು ಅವಕಾಶ ನೀಡಿ” ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

“ವಿಸಿಲ್‌ಗೆ ಮತ ಚಲಾಯಿಸಿ, ಇದು ವಿಸಿಲ್ ಕ್ರಾಂತಿಯ ಚುನಾವಣೆ” ಎಂದು ವಿಜಯ್ ತಮ್ಮ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರದರ್ಶಿಸುತ್ತಾ ಹೇಳಿದ್ದಾರೆ. “ಮತದಾರರು ನನ್ನ ಮತ್ತು ಇತರ ಟಿವಿಕೆ ಅಭ್ಯರ್ಥಿಗಳ ನಡುವೆ ವ್ಯತ್ಯಾಸವನ್ನು ತೋರಿಸಬಾರದು, ನಾವೆಲ್ಲರೂ ಒಂದೇ” ಎಂದಿದ್ದಾರೆ.

“ಇದು ಕೇವಲ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಕಾರ್ಯಕ್ರಮವಲ್ಲ, ಬದಲಿಗೆ ಜನರ ರಕ್ಷಕರ ಹೆಸರುಗಳನ್ನು ಘೋಷಿಸುವ ಸಭೆಯಾಗಿದೆ. ನಮ್ಮ ಅಭ್ಯರ್ಥಿಗಳು ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದಾರೆಯೇ ಹೊರತು, ಯಾವುದೇ ಪ್ರಭಾವಿ ವ್ಯಕ್ತಿಗಳಲ್ಲ. ನಮ್ಮ ಶಾಸಕರು ಲೂಟಿ ಹೊಡೆಯುವ, ಅಕ್ರಮ ಗಣಿಗಾರಿಕೆ ನಡೆಸುವ ಅಥವಾ ಪ್ರಶ್ನಿಸುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವಂತಹ ಅನುಭವ ಹೊಂದಿರಬಾರದು. ಡಿಎಂಕೆ ಅಭ್ಯರ್ಥಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಯಾರೆಂದು ನೀವೇ ಯೋಚಿಸಿ” ಎಂದು ಹೇಳಿದ್ದಾರೆ.

ಟಿವಿಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತಾವು ಶ್ರಮವಹಿಸಿರುವುದಾಗಿ ತಿಳಿಸಿದ ವಿಜಯ್, “ಈ ಚುನಾವಣೆಯು ನಮ್ಮ ಜನರ ಮೈತ್ರಿಕೂಟ ಮತ್ತು ಎಂ.ಕೆ ಸ್ಟಾಲಿನ್ ಸರ್ ಅವರ ಮೈತ್ರಿಕೂಟದ ನಡುವಿನ ನೇರ ಹಣಾಹಣಿಯಾಗಿದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ ತಮಿಳುನಾಡನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ವಿಜಯ್ ಭರವಸೆ ನೀಡಿದ್ದಾರೆ. ಅಲ್ಲದೆ, 29 ವರ್ಷದ ನಂತರವೂ ಉದ್ಯೋಗ ಸಿಗದವರಿಗೆ ಮಾಸಿಕ ಆರ್ಥಿಕ ನೆರವು ನೀಡುವುದಾಗಿ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಲು ಹೊಸ ಕಾನೂನು ತರುವುದಾಗಿ ಅವರು ಘೋಷಿಸಿದ್ದಾರೆ.

ವಿಜಯ್ ಹೊರತು ಟಿವಿಕೆಯಿಂದ ಸ್ಪರ್ಧಿಸುತ್ತಿರುವ ಇತರ ಅಭ್ಯರ್ಥಿಗಳನ್ನು ನೋಡುವುದಾದರೆ..ತಮಿಳುನಾಡು ಚುನಾವಣೆಯ ಹೈ-ವೋಲ್ಟೇಜ್ ಕ್ಷೇತ್ರ ಕೊಳತ್ತೂರಿನಲ್ಲಿ ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ಟಿವಿಕೆಯ ವಿ.ಎಸ್. ಬಾಬು ಸ್ಪರ್ಧೆಗಿಳಿದಿದ್ದಾರೆ.

ಚೇಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಕಾಂಗ್ರೆಸ್ ತೊರೆದು ಟಿವಿಕೆ ಸೇರಿರುವ ಸೆಲ್ವಂ ಅವರನ್ನು ವಿಜಯ್ ಕಣಕ್ಕಿಳಿಸಿದ್ದಾರೆ.

ವಿಲ್ಲಿವಾಕ್ಕಂನಲ್ಲಿ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆದವ್ ಅರ್ಜುನಾ ಸ್ಪರ್ಧಿಸುತ್ತಿದ್ದಾರೆ. ಗೋಪಿಚೆಟ್ಟಿಪಾಳ್ಯಂನಲ್ಲಿ ಟಿವಿಕೆ ಪರವಾಗಿ ಸೆಂಗೊಟ್ಟಯ್ಯನ್ ಅವರು ಸ್ಪರ್ಧೆಯಲ್ಲಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಐದು ಕೋನಗಳ ಸ್ಪರ್ಧೆಯನ್ನು ಎದುರಿಸುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿಯ ಎನ್‌ಡಿಎ ಬಣವು ಮತ್ತೆ ಅಧಿಕಾರಕ್ಕೆ ಬರಲು ಎದುರು ನೋಡುತ್ತಿದೆ. ವಿಜಯ್ ಅವರ ಟಿವಿಕೆ ದೊಡ್ಡ ಚೊಚ್ಚಲ ಪ್ರವೇಶಕ್ಕೆ ಸಜ್ಜಾಗಿದೆ. ಎಸ್. ರಾಮದಾಸ್ ನೇತೃತ್ವದ ಪಿಎಂಕೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸಹಾಯಕಿ ಶಶಿಕಲಾ ಸ್ಥಾಪಿಸಿದ ಪಕ್ಷದ ಮೈತ್ರಿ ನಾಲ್ಕನೇ ರಂಗವನ್ನು ತೆರೆದಿದೆ. ಸೀಮನ್ ನೇತೃತ್ವದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ವಿಜಯ್ ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಎರಡೂ ಸ್ಥಾನಗಳು ಪ್ರಸ್ತುತ ಡಿಎಂಕೆ ಪ್ರತಿನಿಧಿಸುತ್ತಿವೆ. ಆರ್‌ಡಿ ಶೇಖರ್ ಪೆರಂಬೂರು ಶಾಸಕರಾಗಿದ್ದು, ಇನಿಗೋ ಎಸ್ ಇರುದಯರಾಜ್ ತಿರುಚ್ಚಿ ಪೂರ್ವದ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...