Homeಮುಖಪುಟಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ...

ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ

- Advertisement -
- Advertisement -

ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಸೆಪ್ಟೆಂಬರ್ 27ರಂದು ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರ ಪೀಠವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ತಮಿಳುನಾಡು ಮೂಲದವರಲ್ಲದ, ಆದರೆ ತಮಿಳುನಾಡು ಕೇಡರ್‌ನ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಕಾಲ್ತುಳಿತ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟಿವಿಕೆ ಪ್ರಧಾನ ಕಾರ್ಯದರ್ಶಿ (ಚುನಾವಣಾ ಕಾರ್ಯತಂತ್ರ) ಆಧವ್ ಅರ್ಜುನ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದೆ.

ಇತರ ಅರ್ಜಿದಾರರಾದ ಕಾಲ್ತುಳಿತದಲ್ಲಿ ಪತ್ನಿಯನ್ನು ಕಳೆದುಕೊಂಡ ಎಮುರ್ ಪುತ್ತೂರಿನ ಪಿ. ಸೆಲ್ವರಾಜ್, ಒಂಬತ್ತು ವರ್ಷದ ಮಗನನ್ನು ಕಳೆದುಕೊಂಡ ಅಲಮರತುಪಟ್ಟಿಯ ಪಿ. ಪನ್ನೀರ್‌ಸೆಲ್ವಂ ಮತ್ತು ಬಿಜೆಪಿಯ ತಮಿಳುನಾಡು ಕಾನೂನು ಘಟಕದ ಉಪಾಧ್ಯಕ್ಷ ಜಿ.ಎಸ್. ಮಣಿ ಕೂಡ ಸಿಬಿಐ ತನಿಖೆಯನ್ನು ಕೋರಿದ್ದರು.

ಶುಕ್ರವಾರದ ವಿಚಾರಣೆಯ ಸಂದರ್ಭದಲ್ಲಿ, ಕರೂರಿನಲ್ಲಿ ಟಿವಿಕೆಗೆ ರೋಡ್ ಶೋ ನಡೆಸಲು ಅನುಮತಿ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ರಾಜಕೀಯ ಸಭೆಗಳಿಗೆ ಸರ್ಕಾರ ಇನ್ನೂ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (ಎಸ್‌ಒಪಿ) ಅಂತಿಮಗೊಳಿಸುತ್ತಿದೆ ಎಂಬ ಕಾರಣಕ್ಕೆ ಎಐಎಡಿಎಂಕೆಗೆ ಇದೇ ರೀತಿಯ ಅನುಮತಿಯನ್ನು ನಿರಾಕರಿಸಲಾಗಿದೆ ಎಂಬುವುದನ್ನು ಗಮನಿಸಿತ್ತು. ಎಸ್‌ಒಪಿ ಸಂಬಂಧಿತ ಗೊಂದಲಗಳನ್ನು ಪರಿಹರಿಸುವ ಬದಲು, ಮದ್ರಾಸ್ ಹೈಕೋರ್ಟ್ ಎಸ್‌ಐಟಿ ರಚಿಸಿದೆ ಎಂದು ಟೀಕಿಸಿತ್ತು.

ಸರ್ಕಾರವು ಮಧ್ಯರಾತ್ರಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಬೆಳಿಗ್ಗೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅರ್ಜಿದಾರರೊಬ್ಬರು ವಾದಿಸಿದಾಗ, ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಪಿ. ವಿಲ್ಸನ್, ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಇಂತಹ ಆರೋಪಗಳನ್ನು ಮಾಡಿರುವುದು ಇದೇ ಮೊದಲು ಸರ್ಕಾರ ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದ್ದರು.

“ನಮ್ಮ ಮುಖ್ಯಮಂತ್ರಿ ಕರೂರಿಗೆ ವಿಮಾನದಲ್ಲಿ ತೆರಳಿದಾಗ ಜನರು ತಮ್ಮವರ ಶವಗಳಿಗಾಗಿ ಬೇಡಿಕೊಳ್ಳಲು ಪ್ರಾರಂಭಿಸಿದರು. ಹಾಗಾಗಿ, ಜಿಲ್ಲಾಧಿಕಾರಿ ಅನುಮತಿ ನೀಡಿದರು. ಹತ್ತಿರದ ಜಿಲ್ಲೆಗಳಿಂದ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರನ್ನು ಕರೆಸಲಾಗಿತ್ತು ಎಂದಿದ್ದರು.

“ನಮ್ಮ ಆರೋಗ್ಯ ಕಾರ್ಯದರ್ಶಿಯವರು ಸಮ್ಮೇಳನದಲ್ಲಿ ಭಾಗವಹಿಸಿದ್ದ 220 ವೈದ್ಯರು, 165 ದಾದಿಯರು ಮತ್ತು ಇತರ ವೈದ್ಯರನ್ನು ಸಜ್ಜುಗೊಳಿಸಿದ್ದರು ಎಂದು ವಿಲ್ಸನ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ ಮಹೇಶ್ವರಿ ಅವರು, ಅವರು ವಿಧಿವಿಜ್ಞಾನ ತಜ್ಞರೇ? ಎಂದು ಪ್ರಶ್ನಿಸಿದ್ದರು.

ದುರಂತ ನಡೆದ ಬಳಿಕ ವಿಜಯ್ ಸೇರಿದಂತೆ ಟಿವಿಕೆ ನಾಯಕರು ಜನರ ರಕ್ಷಣೆಗೆ ದಾವಿಸುವ ಬದಲು ಸ್ಥಳದಿಂದ ಪಲಾಯನ ಮಾಡಿದ್ದರು ಎಂಬ ಮದ್ರಾಸ್‌ ಹೈಕೋರ್ಟ್‌ನ ಅವಲೋಕನಗಳನ್ನು ಟಿವಿಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ ಅವಲೋಕನಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ನಮ್ಮ ನಾಯಕತ್ವಕ್ಕೆ ಅವಕಾಶ ನೀಡಿರಲಿಲ್ಲ ಎಂದು ಟಿವಿಕೆ ವಕೀಲರು ದೂರಿದ್ದರು.

ಅರ್ಜಿದಾರರಲ್ಲಿ ಒಬ್ಬರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿ. ರಾಘವಾಚಾರಿ, ಕಾಲ್ತುಳಿತವು ಸ್ವಯಂಪ್ರೇರಿತವಲ್ಲ ಎಂದಿದ್ದರು. ಆ ದಿನ ಮಧ್ಯಾಹ್ನ 3 ಗಂಟೆಯಿಂದ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಕೆಲವು ಡಿಎಂಕೆ ಸದಸ್ಯರು ಊಹಿಸಿದ್ದರು ಎಂದು ಹೇಳಿದರು. ಪೊಲೀಸರು ದುಷ್ಕರ್ಮಿಯೊಬ್ಬ ಜನಸಮೂಹದ ಮೇಲೆ ಶೂ ಎಸೆಯಲು ಅವಕಾಶ ಮಾಡಿಕೊಟ್ಟರು, ಇದರಿಂದಾಗಿ ಗದ್ದಲ ಉಂಟಾಯಿತು ಎಂದು ಅವರು ಆರೋಪಿಸಿದ್ದರು. ಈ ಹಿಂದೆ ಎಐಎಡಿಎಂಕೆಗೆ ನಿರಾಕರಿಸಲಾದ ಸ್ಥಳದಲ್ಲಿ ಟಿವಿಕೆ ರ‍್ಯಾಲಿಗೆ ಅನುಮತಿ ನೀಡಿದ ಸರ್ಕಾರದ ನಿರ್ಧಾರವನ್ನು ರಾಘವಾಚಾರಿ ಪ್ರಶ್ನಿಸಿದ್ದರು. ದುರಂತದ ಹಿಂದೆ ಪೊಲೀಸರದ್ದೇ ಸಂಪೂರ್ಣ ತಪ್ಪಿದೆ ಎಂದು ದೂರಿದ್ದರು.

ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...