Homeಮುಖಪುಟಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ...

ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ

- Advertisement -
- Advertisement -

ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಸೆಪ್ಟೆಂಬರ್ 27ರಂದು ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರ ಪೀಠವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ತಮಿಳುನಾಡು ಮೂಲದವರಲ್ಲದ, ಆದರೆ ತಮಿಳುನಾಡು ಕೇಡರ್‌ನ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಕಾಲ್ತುಳಿತ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟಿವಿಕೆ ಪ್ರಧಾನ ಕಾರ್ಯದರ್ಶಿ (ಚುನಾವಣಾ ಕಾರ್ಯತಂತ್ರ) ಆಧವ್ ಅರ್ಜುನ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದೆ.

ಇತರ ಅರ್ಜಿದಾರರಾದ ಕಾಲ್ತುಳಿತದಲ್ಲಿ ಪತ್ನಿಯನ್ನು ಕಳೆದುಕೊಂಡ ಎಮುರ್ ಪುತ್ತೂರಿನ ಪಿ. ಸೆಲ್ವರಾಜ್, ಒಂಬತ್ತು ವರ್ಷದ ಮಗನನ್ನು ಕಳೆದುಕೊಂಡ ಅಲಮರತುಪಟ್ಟಿಯ ಪಿ. ಪನ್ನೀರ್‌ಸೆಲ್ವಂ ಮತ್ತು ಬಿಜೆಪಿಯ ತಮಿಳುನಾಡು ಕಾನೂನು ಘಟಕದ ಉಪಾಧ್ಯಕ್ಷ ಜಿ.ಎಸ್. ಮಣಿ ಕೂಡ ಸಿಬಿಐ ತನಿಖೆಯನ್ನು ಕೋರಿದ್ದರು.

ಶುಕ್ರವಾರದ ವಿಚಾರಣೆಯ ಸಂದರ್ಭದಲ್ಲಿ, ಕರೂರಿನಲ್ಲಿ ಟಿವಿಕೆಗೆ ರೋಡ್ ಶೋ ನಡೆಸಲು ಅನುಮತಿ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ರಾಜಕೀಯ ಸಭೆಗಳಿಗೆ ಸರ್ಕಾರ ಇನ್ನೂ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (ಎಸ್‌ಒಪಿ) ಅಂತಿಮಗೊಳಿಸುತ್ತಿದೆ ಎಂಬ ಕಾರಣಕ್ಕೆ ಎಐಎಡಿಎಂಕೆಗೆ ಇದೇ ರೀತಿಯ ಅನುಮತಿಯನ್ನು ನಿರಾಕರಿಸಲಾಗಿದೆ ಎಂಬುವುದನ್ನು ಗಮನಿಸಿತ್ತು. ಎಸ್‌ಒಪಿ ಸಂಬಂಧಿತ ಗೊಂದಲಗಳನ್ನು ಪರಿಹರಿಸುವ ಬದಲು, ಮದ್ರಾಸ್ ಹೈಕೋರ್ಟ್ ಎಸ್‌ಐಟಿ ರಚಿಸಿದೆ ಎಂದು ಟೀಕಿಸಿತ್ತು.

ಸರ್ಕಾರವು ಮಧ್ಯರಾತ್ರಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಬೆಳಿಗ್ಗೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅರ್ಜಿದಾರರೊಬ್ಬರು ವಾದಿಸಿದಾಗ, ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಪಿ. ವಿಲ್ಸನ್, ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಇಂತಹ ಆರೋಪಗಳನ್ನು ಮಾಡಿರುವುದು ಇದೇ ಮೊದಲು ಸರ್ಕಾರ ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದ್ದರು.

“ನಮ್ಮ ಮುಖ್ಯಮಂತ್ರಿ ಕರೂರಿಗೆ ವಿಮಾನದಲ್ಲಿ ತೆರಳಿದಾಗ ಜನರು ತಮ್ಮವರ ಶವಗಳಿಗಾಗಿ ಬೇಡಿಕೊಳ್ಳಲು ಪ್ರಾರಂಭಿಸಿದರು. ಹಾಗಾಗಿ, ಜಿಲ್ಲಾಧಿಕಾರಿ ಅನುಮತಿ ನೀಡಿದರು. ಹತ್ತಿರದ ಜಿಲ್ಲೆಗಳಿಂದ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರನ್ನು ಕರೆಸಲಾಗಿತ್ತು ಎಂದಿದ್ದರು.

“ನಮ್ಮ ಆರೋಗ್ಯ ಕಾರ್ಯದರ್ಶಿಯವರು ಸಮ್ಮೇಳನದಲ್ಲಿ ಭಾಗವಹಿಸಿದ್ದ 220 ವೈದ್ಯರು, 165 ದಾದಿಯರು ಮತ್ತು ಇತರ ವೈದ್ಯರನ್ನು ಸಜ್ಜುಗೊಳಿಸಿದ್ದರು ಎಂದು ವಿಲ್ಸನ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ ಮಹೇಶ್ವರಿ ಅವರು, ಅವರು ವಿಧಿವಿಜ್ಞಾನ ತಜ್ಞರೇ? ಎಂದು ಪ್ರಶ್ನಿಸಿದ್ದರು.

ದುರಂತ ನಡೆದ ಬಳಿಕ ವಿಜಯ್ ಸೇರಿದಂತೆ ಟಿವಿಕೆ ನಾಯಕರು ಜನರ ರಕ್ಷಣೆಗೆ ದಾವಿಸುವ ಬದಲು ಸ್ಥಳದಿಂದ ಪಲಾಯನ ಮಾಡಿದ್ದರು ಎಂಬ ಮದ್ರಾಸ್‌ ಹೈಕೋರ್ಟ್‌ನ ಅವಲೋಕನಗಳನ್ನು ಟಿವಿಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ ಅವಲೋಕನಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ನಮ್ಮ ನಾಯಕತ್ವಕ್ಕೆ ಅವಕಾಶ ನೀಡಿರಲಿಲ್ಲ ಎಂದು ಟಿವಿಕೆ ವಕೀಲರು ದೂರಿದ್ದರು.

ಅರ್ಜಿದಾರರಲ್ಲಿ ಒಬ್ಬರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿ. ರಾಘವಾಚಾರಿ, ಕಾಲ್ತುಳಿತವು ಸ್ವಯಂಪ್ರೇರಿತವಲ್ಲ ಎಂದಿದ್ದರು. ಆ ದಿನ ಮಧ್ಯಾಹ್ನ 3 ಗಂಟೆಯಿಂದ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಕೆಲವು ಡಿಎಂಕೆ ಸದಸ್ಯರು ಊಹಿಸಿದ್ದರು ಎಂದು ಹೇಳಿದರು. ಪೊಲೀಸರು ದುಷ್ಕರ್ಮಿಯೊಬ್ಬ ಜನಸಮೂಹದ ಮೇಲೆ ಶೂ ಎಸೆಯಲು ಅವಕಾಶ ಮಾಡಿಕೊಟ್ಟರು, ಇದರಿಂದಾಗಿ ಗದ್ದಲ ಉಂಟಾಯಿತು ಎಂದು ಅವರು ಆರೋಪಿಸಿದ್ದರು. ಈ ಹಿಂದೆ ಎಐಎಡಿಎಂಕೆಗೆ ನಿರಾಕರಿಸಲಾದ ಸ್ಥಳದಲ್ಲಿ ಟಿವಿಕೆ ರ‍್ಯಾಲಿಗೆ ಅನುಮತಿ ನೀಡಿದ ಸರ್ಕಾರದ ನಿರ್ಧಾರವನ್ನು ರಾಘವಾಚಾರಿ ಪ್ರಶ್ನಿಸಿದ್ದರು. ದುರಂತದ ಹಿಂದೆ ಪೊಲೀಸರದ್ದೇ ಸಂಪೂರ್ಣ ತಪ್ಪಿದೆ ಎಂದು ದೂರಿದ್ದರು.

ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...