Homeಮುಖಪುಟಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ...

ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ

- Advertisement -
- Advertisement -

ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಸೆಪ್ಟೆಂಬರ್ 27ರಂದು ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರ ಪೀಠವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ತಮಿಳುನಾಡು ಮೂಲದವರಲ್ಲದ, ಆದರೆ ತಮಿಳುನಾಡು ಕೇಡರ್‌ನ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಕಾಲ್ತುಳಿತ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟಿವಿಕೆ ಪ್ರಧಾನ ಕಾರ್ಯದರ್ಶಿ (ಚುನಾವಣಾ ಕಾರ್ಯತಂತ್ರ) ಆಧವ್ ಅರ್ಜುನ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದೆ.

ಇತರ ಅರ್ಜಿದಾರರಾದ ಕಾಲ್ತುಳಿತದಲ್ಲಿ ಪತ್ನಿಯನ್ನು ಕಳೆದುಕೊಂಡ ಎಮುರ್ ಪುತ್ತೂರಿನ ಪಿ. ಸೆಲ್ವರಾಜ್, ಒಂಬತ್ತು ವರ್ಷದ ಮಗನನ್ನು ಕಳೆದುಕೊಂಡ ಅಲಮರತುಪಟ್ಟಿಯ ಪಿ. ಪನ್ನೀರ್‌ಸೆಲ್ವಂ ಮತ್ತು ಬಿಜೆಪಿಯ ತಮಿಳುನಾಡು ಕಾನೂನು ಘಟಕದ ಉಪಾಧ್ಯಕ್ಷ ಜಿ.ಎಸ್. ಮಣಿ ಕೂಡ ಸಿಬಿಐ ತನಿಖೆಯನ್ನು ಕೋರಿದ್ದರು.

ಶುಕ್ರವಾರದ ವಿಚಾರಣೆಯ ಸಂದರ್ಭದಲ್ಲಿ, ಕರೂರಿನಲ್ಲಿ ಟಿವಿಕೆಗೆ ರೋಡ್ ಶೋ ನಡೆಸಲು ಅನುಮತಿ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ರಾಜಕೀಯ ಸಭೆಗಳಿಗೆ ಸರ್ಕಾರ ಇನ್ನೂ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (ಎಸ್‌ಒಪಿ) ಅಂತಿಮಗೊಳಿಸುತ್ತಿದೆ ಎಂಬ ಕಾರಣಕ್ಕೆ ಎಐಎಡಿಎಂಕೆಗೆ ಇದೇ ರೀತಿಯ ಅನುಮತಿಯನ್ನು ನಿರಾಕರಿಸಲಾಗಿದೆ ಎಂಬುವುದನ್ನು ಗಮನಿಸಿತ್ತು. ಎಸ್‌ಒಪಿ ಸಂಬಂಧಿತ ಗೊಂದಲಗಳನ್ನು ಪರಿಹರಿಸುವ ಬದಲು, ಮದ್ರಾಸ್ ಹೈಕೋರ್ಟ್ ಎಸ್‌ಐಟಿ ರಚಿಸಿದೆ ಎಂದು ಟೀಕಿಸಿತ್ತು.

ಸರ್ಕಾರವು ಮಧ್ಯರಾತ್ರಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಬೆಳಿಗ್ಗೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅರ್ಜಿದಾರರೊಬ್ಬರು ವಾದಿಸಿದಾಗ, ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಪಿ. ವಿಲ್ಸನ್, ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಇಂತಹ ಆರೋಪಗಳನ್ನು ಮಾಡಿರುವುದು ಇದೇ ಮೊದಲು ಸರ್ಕಾರ ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದ್ದರು.

“ನಮ್ಮ ಮುಖ್ಯಮಂತ್ರಿ ಕರೂರಿಗೆ ವಿಮಾನದಲ್ಲಿ ತೆರಳಿದಾಗ ಜನರು ತಮ್ಮವರ ಶವಗಳಿಗಾಗಿ ಬೇಡಿಕೊಳ್ಳಲು ಪ್ರಾರಂಭಿಸಿದರು. ಹಾಗಾಗಿ, ಜಿಲ್ಲಾಧಿಕಾರಿ ಅನುಮತಿ ನೀಡಿದರು. ಹತ್ತಿರದ ಜಿಲ್ಲೆಗಳಿಂದ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರನ್ನು ಕರೆಸಲಾಗಿತ್ತು ಎಂದಿದ್ದರು.

“ನಮ್ಮ ಆರೋಗ್ಯ ಕಾರ್ಯದರ್ಶಿಯವರು ಸಮ್ಮೇಳನದಲ್ಲಿ ಭಾಗವಹಿಸಿದ್ದ 220 ವೈದ್ಯರು, 165 ದಾದಿಯರು ಮತ್ತು ಇತರ ವೈದ್ಯರನ್ನು ಸಜ್ಜುಗೊಳಿಸಿದ್ದರು ಎಂದು ವಿಲ್ಸನ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ ಮಹೇಶ್ವರಿ ಅವರು, ಅವರು ವಿಧಿವಿಜ್ಞಾನ ತಜ್ಞರೇ? ಎಂದು ಪ್ರಶ್ನಿಸಿದ್ದರು.

ದುರಂತ ನಡೆದ ಬಳಿಕ ವಿಜಯ್ ಸೇರಿದಂತೆ ಟಿವಿಕೆ ನಾಯಕರು ಜನರ ರಕ್ಷಣೆಗೆ ದಾವಿಸುವ ಬದಲು ಸ್ಥಳದಿಂದ ಪಲಾಯನ ಮಾಡಿದ್ದರು ಎಂಬ ಮದ್ರಾಸ್‌ ಹೈಕೋರ್ಟ್‌ನ ಅವಲೋಕನಗಳನ್ನು ಟಿವಿಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ ಅವಲೋಕನಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ನಮ್ಮ ನಾಯಕತ್ವಕ್ಕೆ ಅವಕಾಶ ನೀಡಿರಲಿಲ್ಲ ಎಂದು ಟಿವಿಕೆ ವಕೀಲರು ದೂರಿದ್ದರು.

ಅರ್ಜಿದಾರರಲ್ಲಿ ಒಬ್ಬರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿ. ರಾಘವಾಚಾರಿ, ಕಾಲ್ತುಳಿತವು ಸ್ವಯಂಪ್ರೇರಿತವಲ್ಲ ಎಂದಿದ್ದರು. ಆ ದಿನ ಮಧ್ಯಾಹ್ನ 3 ಗಂಟೆಯಿಂದ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಕೆಲವು ಡಿಎಂಕೆ ಸದಸ್ಯರು ಊಹಿಸಿದ್ದರು ಎಂದು ಹೇಳಿದರು. ಪೊಲೀಸರು ದುಷ್ಕರ್ಮಿಯೊಬ್ಬ ಜನಸಮೂಹದ ಮೇಲೆ ಶೂ ಎಸೆಯಲು ಅವಕಾಶ ಮಾಡಿಕೊಟ್ಟರು, ಇದರಿಂದಾಗಿ ಗದ್ದಲ ಉಂಟಾಯಿತು ಎಂದು ಅವರು ಆರೋಪಿಸಿದ್ದರು. ಈ ಹಿಂದೆ ಎಐಎಡಿಎಂಕೆಗೆ ನಿರಾಕರಿಸಲಾದ ಸ್ಥಳದಲ್ಲಿ ಟಿವಿಕೆ ರ‍್ಯಾಲಿಗೆ ಅನುಮತಿ ನೀಡಿದ ಸರ್ಕಾರದ ನಿರ್ಧಾರವನ್ನು ರಾಘವಾಚಾರಿ ಪ್ರಶ್ನಿಸಿದ್ದರು. ದುರಂತದ ಹಿಂದೆ ಪೊಲೀಸರದ್ದೇ ಸಂಪೂರ್ಣ ತಪ್ಪಿದೆ ಎಂದು ದೂರಿದ್ದರು.

ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...