Homeಮುಖಪುಟಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ...

ಟಿವಿಕೆ ರ‍್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್; ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ

- Advertisement -
- Advertisement -

ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಸೆಪ್ಟೆಂಬರ್ 27ರಂದು ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರ ಪೀಠವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ತಮಿಳುನಾಡು ಮೂಲದವರಲ್ಲದ, ಆದರೆ ತಮಿಳುನಾಡು ಕೇಡರ್‌ನ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಕಾಲ್ತುಳಿತ ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟಿವಿಕೆ ಪ್ರಧಾನ ಕಾರ್ಯದರ್ಶಿ (ಚುನಾವಣಾ ಕಾರ್ಯತಂತ್ರ) ಆಧವ್ ಅರ್ಜುನ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದ್ದ ಆದೇಶವನ್ನು ಪ್ರಕಟಿಸಿದೆ.

ಇತರ ಅರ್ಜಿದಾರರಾದ ಕಾಲ್ತುಳಿತದಲ್ಲಿ ಪತ್ನಿಯನ್ನು ಕಳೆದುಕೊಂಡ ಎಮುರ್ ಪುತ್ತೂರಿನ ಪಿ. ಸೆಲ್ವರಾಜ್, ಒಂಬತ್ತು ವರ್ಷದ ಮಗನನ್ನು ಕಳೆದುಕೊಂಡ ಅಲಮರತುಪಟ್ಟಿಯ ಪಿ. ಪನ್ನೀರ್‌ಸೆಲ್ವಂ ಮತ್ತು ಬಿಜೆಪಿಯ ತಮಿಳುನಾಡು ಕಾನೂನು ಘಟಕದ ಉಪಾಧ್ಯಕ್ಷ ಜಿ.ಎಸ್. ಮಣಿ ಕೂಡ ಸಿಬಿಐ ತನಿಖೆಯನ್ನು ಕೋರಿದ್ದರು.

ಶುಕ್ರವಾರದ ವಿಚಾರಣೆಯ ಸಂದರ್ಭದಲ್ಲಿ, ಕರೂರಿನಲ್ಲಿ ಟಿವಿಕೆಗೆ ರೋಡ್ ಶೋ ನಡೆಸಲು ಅನುಮತಿ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ರಾಜಕೀಯ ಸಭೆಗಳಿಗೆ ಸರ್ಕಾರ ಇನ್ನೂ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (ಎಸ್‌ಒಪಿ) ಅಂತಿಮಗೊಳಿಸುತ್ತಿದೆ ಎಂಬ ಕಾರಣಕ್ಕೆ ಎಐಎಡಿಎಂಕೆಗೆ ಇದೇ ರೀತಿಯ ಅನುಮತಿಯನ್ನು ನಿರಾಕರಿಸಲಾಗಿದೆ ಎಂಬುವುದನ್ನು ಗಮನಿಸಿತ್ತು. ಎಸ್‌ಒಪಿ ಸಂಬಂಧಿತ ಗೊಂದಲಗಳನ್ನು ಪರಿಹರಿಸುವ ಬದಲು, ಮದ್ರಾಸ್ ಹೈಕೋರ್ಟ್ ಎಸ್‌ಐಟಿ ರಚಿಸಿದೆ ಎಂದು ಟೀಕಿಸಿತ್ತು.

ಸರ್ಕಾರವು ಮಧ್ಯರಾತ್ರಿ ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಬೆಳಿಗ್ಗೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅರ್ಜಿದಾರರೊಬ್ಬರು ವಾದಿಸಿದಾಗ, ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಪಿ. ವಿಲ್ಸನ್, ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಇಂತಹ ಆರೋಪಗಳನ್ನು ಮಾಡಿರುವುದು ಇದೇ ಮೊದಲು ಸರ್ಕಾರ ಈ ಸಂಬಂಧ ವಿವರವಾದ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದ್ದರು.

“ನಮ್ಮ ಮುಖ್ಯಮಂತ್ರಿ ಕರೂರಿಗೆ ವಿಮಾನದಲ್ಲಿ ತೆರಳಿದಾಗ ಜನರು ತಮ್ಮವರ ಶವಗಳಿಗಾಗಿ ಬೇಡಿಕೊಳ್ಳಲು ಪ್ರಾರಂಭಿಸಿದರು. ಹಾಗಾಗಿ, ಜಿಲ್ಲಾಧಿಕಾರಿ ಅನುಮತಿ ನೀಡಿದರು. ಹತ್ತಿರದ ಜಿಲ್ಲೆಗಳಿಂದ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರನ್ನು ಕರೆಸಲಾಗಿತ್ತು ಎಂದಿದ್ದರು.

“ನಮ್ಮ ಆರೋಗ್ಯ ಕಾರ್ಯದರ್ಶಿಯವರು ಸಮ್ಮೇಳನದಲ್ಲಿ ಭಾಗವಹಿಸಿದ್ದ 220 ವೈದ್ಯರು, 165 ದಾದಿಯರು ಮತ್ತು ಇತರ ವೈದ್ಯರನ್ನು ಸಜ್ಜುಗೊಳಿಸಿದ್ದರು ಎಂದು ವಿಲ್ಸನ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಮೂರ್ತಿ ಮಹೇಶ್ವರಿ ಅವರು, ಅವರು ವಿಧಿವಿಜ್ಞಾನ ತಜ್ಞರೇ? ಎಂದು ಪ್ರಶ್ನಿಸಿದ್ದರು.

ದುರಂತ ನಡೆದ ಬಳಿಕ ವಿಜಯ್ ಸೇರಿದಂತೆ ಟಿವಿಕೆ ನಾಯಕರು ಜನರ ರಕ್ಷಣೆಗೆ ದಾವಿಸುವ ಬದಲು ಸ್ಥಳದಿಂದ ಪಲಾಯನ ಮಾಡಿದ್ದರು ಎಂಬ ಮದ್ರಾಸ್‌ ಹೈಕೋರ್ಟ್‌ನ ಅವಲೋಕನಗಳನ್ನು ಟಿವಿಕೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್‌ ಅವಲೋಕನಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ನಮ್ಮ ನಾಯಕತ್ವಕ್ಕೆ ಅವಕಾಶ ನೀಡಿರಲಿಲ್ಲ ಎಂದು ಟಿವಿಕೆ ವಕೀಲರು ದೂರಿದ್ದರು.

ಅರ್ಜಿದಾರರಲ್ಲಿ ಒಬ್ಬರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿ. ರಾಘವಾಚಾರಿ, ಕಾಲ್ತುಳಿತವು ಸ್ವಯಂಪ್ರೇರಿತವಲ್ಲ ಎಂದಿದ್ದರು. ಆ ದಿನ ಮಧ್ಯಾಹ್ನ 3 ಗಂಟೆಯಿಂದ ದುರಂತ ಸಂಭವಿಸುವ ಸಾಧ್ಯತೆ ಇದೆ ಎಂದು ಕೆಲವು ಡಿಎಂಕೆ ಸದಸ್ಯರು ಊಹಿಸಿದ್ದರು ಎಂದು ಹೇಳಿದರು. ಪೊಲೀಸರು ದುಷ್ಕರ್ಮಿಯೊಬ್ಬ ಜನಸಮೂಹದ ಮೇಲೆ ಶೂ ಎಸೆಯಲು ಅವಕಾಶ ಮಾಡಿಕೊಟ್ಟರು, ಇದರಿಂದಾಗಿ ಗದ್ದಲ ಉಂಟಾಯಿತು ಎಂದು ಅವರು ಆರೋಪಿಸಿದ್ದರು. ಈ ಹಿಂದೆ ಎಐಎಡಿಎಂಕೆಗೆ ನಿರಾಕರಿಸಲಾದ ಸ್ಥಳದಲ್ಲಿ ಟಿವಿಕೆ ರ‍್ಯಾಲಿಗೆ ಅನುಮತಿ ನೀಡಿದ ಸರ್ಕಾರದ ನಿರ್ಧಾರವನ್ನು ರಾಘವಾಚಾರಿ ಪ್ರಶ್ನಿಸಿದ್ದರು. ದುರಂತದ ಹಿಂದೆ ಪೊಲೀಸರದ್ದೇ ಸಂಪೂರ್ಣ ತಪ್ಪಿದೆ ಎಂದು ದೂರಿದ್ದರು.

ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...