HomeಮುಖಪುಟCJI ಬೋಬ್ಡೆ ಹೆಲಿಕಾಪ್ಟರ್ ಕುರಿತು ಟ್ವೀಟ್‌: ಪ್ರಶಾಂತ್‌ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಮನವಿ

CJI ಬೋಬ್ಡೆ ಹೆಲಿಕಾಪ್ಟರ್ ಕುರಿತು ಟ್ವೀಟ್‌: ಪ್ರಶಾಂತ್‌ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಮನವಿ

ಕಳೆದ ತಿಂಗಳಷ್ಟೇ ಸುಪ್ರೀಂಕೋರ್ಟ್ ಅವರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ ಅಪರಾಧಿ ಎಂದು ಒಂದು ರುಪಾಯಿ ದಂಡ ಕಟ್ಟುವಂತೆ ಆದೇಶಿಸಿತ್ತು

- Advertisement -
- Advertisement -

ಕಳೆದ ತಿಂಗಳಷ್ಟೇ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ವಿರುದ್ದ ಮತ್ತೇ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ನೀಡಬೇಕು ಎಂದು ಸುಪ್ರೀಂಕೋರ್ಟ್‌ ವಕೀಲ ಸುನಿಲ್‌ ಸಿಂಗ್‌ ಅವರು ಅಟಾರ್ನಿ ಜನರಲ್‌ ಕೆ ಕೆ ವೇಣುಗೋಪಾಲ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕಳೆದ ಬಾರಿ ಪ್ರಶಾಂತ್‌ ಭೂಷಣ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಕೊರೊನಾ ನಿಯಮಗಳನ್ನು ಮೀರಿ ರಾಜಕೀಯ ನಾಯಕನ ಬೈಕ್ ಮೇಲೆ ಕೂತಿರುವ ಫೋಟೋಗೆ ಟ್ವಿಟ್ಟರ್‌‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಇದಕ್ಕಾಗಿ ಸುಪ್ರೀಂಕೋರ್ಟ್ ಅವರ ಮೇಲೆ ನಿಂದನೆ ಪ್ರಕರಣ ದಾಖಲಿಸಿ ಅಪರಾಧಿ ಎಂದು ಒಂದು ರುಪಾಯಿ ದಂಡ ಕಟ್ಟುವಂತೆ ಆದೇಶಿಸಿತ್ತು.

ಇದೀಗ ಕನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲು, ಆ ಬಳಿಕ ನಾಗಪುರದ ತಮ್ಮ ನಿವಾಸಕ್ಕೆ ಮರಳಲು ಮಧ್ಯಪ್ರದೇಶ ಸರ್ಕಾರವು ಒದಗಿಸಿದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನ್ಯಾಯಮೂರ್ತಿ ಬೊಬ್ಡೆ ಪ್ರಯಣ ಬೆಳೆಸಿದ್ದರು. ಇದಕ್ಕಾಗಿ ಪ್ರಶಾಂತ್ ಭೂಷಣ್, “ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸುವ ಪ್ರಮುಖ ಪ್ರಕರಣವೊಂದನ್ನು ಅವರು ವಿಚಾರಣೆ ನಡೆಸಬೇಕಿದೆ. ಮಧ್ಯಪ್ರದೇಶ ಸರ್ಕಾರದ ಅಳಿವು ಉಳಿವು ಆ ಪ್ರಕರಣವನ್ನು ಅವಲಂಬಿಸಿದೆ. ಸರ್ಕಾರದ ಆತಿಥ್ಯವನ್ನು ಸಿಜೆಐ ಪಡೆದಿರುವುದು ವಾಡಿಕೆಯೇ? ಈ ಆತಿಥ್ಯವನ್ನು ಸ್ವೀಕರಿಸುವ ಮೂಲಕ ನ್ಯಾಯಾಂಗ ಮೌಲ್ಯಗಳನ್ನು ಉಲ್ಲಂಘಿಸಲಾಗಿದೆಯೇ” ಎಂಬುದಾಗಿ ಭೂಷಣ್‌ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

ಈ ಟ್ವೀಟ್ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಸುಪ್ರೀಂಕೋರ್ಟ್‌ಗೆ ಕಳಂಕ ತಂದಿರುವುದಲ್ಲದೆ, ಜನರು ನ್ಯಾಯಾಲಯದ ಬಗ್ಗೆ ಪೂರ್ವಾಗ್ರಹಪೀಡಿತಗೊಳ್ಳುತ್ತಾರೆ. ಅಲ್ಲದೆ ಈ ಟ್ವೀಟ್ ನ್ಯಾಯಾಂಗ ಪ್ರಕ್ರಿಯೆ ಮತ್ತು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಪ್ರಶಾಂತ್ ಭೂಷನ್ ವಿರುದ್ದ ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...