Homeಮುಖಪುಟಗೋಲ್ವಾಲ್ಕರ್ ಹೇಳಿಕೆ ಉಲ್ಲೇಖಿಸಿ ಟ್ವೀಟ್: ದಿಗ್ವಿಜಯ್ ಸಿಂಗ್ ವಿರುದ್ಧ RSS ಕಾರ್ಯಕರ್ತನಿಂದ ದೂರು ದಾಖಲು

ಗೋಲ್ವಾಲ್ಕರ್ ಹೇಳಿಕೆ ಉಲ್ಲೇಖಿಸಿ ಟ್ವೀಟ್: ದಿಗ್ವಿಜಯ್ ಸಿಂಗ್ ವಿರುದ್ಧ RSS ಕಾರ್ಯಕರ್ತನಿಂದ ದೂರು ದಾಖಲು

- Advertisement -
- Advertisement -

ಆ‌ರ್‌ಎಸ್‌ಎಸ್ ಮುಖ್ಯಸ್ಥರಾಗಿದ್ದ ಎಂ.ಎಸ್‌.ಗೋಲ್ವಾಲ್ಕರ್ ಹೇಳಿದ್ದಾರೆ ಎನ್ನಲಾದ ಹೇಳಿಕೆಯ ಪೇಪರ್ ಕಟಿಂಗ್‌ನ್ನು ಟ್ವೀಟ್ ಮಾಡಿದ್ದ ಕಾರಣಕ್ಕೆ ಇದೀಗ ಕಾಂಗ್ರೆಸ್‌ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರ್‌ಎಸ್‌ಎಸ್‌ ಕಾರ್ಯಕರ್ತ ಹಾಗೂ ವಕೀಲ ರಾಜೇಶ ಜೋಶಿ ಎಂಬುವವರು, ದಿಗ್ವಿಜಯ್ ಸಿಂಗ್ ವಿರುದ್ಧ ದೂರು ನೀಡಿದ್ದು, ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಬಿತ್ತುವುದು, ಮಾನಹಾನಿ, ಸಾರ್ವಜನಿಕ ಸ್ಥಳ ದುರ್ಬಳಕೆ ಅರೋಪಗಳ ಮೇಲೆ ಪ್ರಕರಣ ದಾಖಲಾಗಿದೆ.

ದಿಗ್ವಿಜಯ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) 153 ಎ, 469, 500 ಮತ್ತು 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಯ ಟ್ವಿಟ್ ಮಾಡಿದ್ದಾರೆ. ಇದರಿಂದ ದಲಿತರು, ಹಿಂದುಳಿದ ವರ್ಗ, ಮುಸ್ಲಿಂ ಹಾಗೂ ಹಿಂದೂಗಳ ನಡುವೆ ಪರಸ್ಪರ ದ್ವೇಷ ಭಾವನೆ ಮೂಡಲಿದೆ. ಜತೆಗೆ ಹಿಂದೂಗಳ ಭಾವನೆಗೆ ಮತ್ತು ಅರ್‌ಎಸ್‌ಎಸ್‌ನ ಕಾರ್ಯಕರ್ತರ ನಂಬಿಕೆಗಳಿಗೆ ಧಕ್ಕೆ ತಂದಿದೆ ಎಂದು ಜೋಶಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿದ್ದು, ”ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರು ಮತ್ತು ರಾಷ್ಟ್ರೀಯ ನೀರು, ಅರಣ್ಯ ಮತ್ತು ನೆಲದ ಮೇಲಿನ ಗುರು ಗೋಲ್ವಾಲ್ಕರ್ ಜಿ ಅವರ ಚಿಂತನೆಗಳು ಹೀಗಿದ್ದವು” ಎಂದು ಶೀರ್ಷಿಕೆ ನೀಡಿದ್ದಾರೆ.

”ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರಿಗೆ ಸಮಾನವಾದ ಹಕ್ಕುಗಳನ್ನು ನೀಡುವುದಕ್ಕಿಂತ ಬ್ರಿಟಿಷ್ ಆಳ್ವಿಕೆಯಲ್ಲಿ ಗುಲಾಮನಾಗಿ ನಾನು ಬದುಕಲು ಬಯಸುತ್ತೇನೆ” ಎಂದಿರುವ ಗೋಲ್ವಾಲ್ಕರ್ ಹೇಳಿಕೆಯನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌ ಪ್ರಚಾರ ವಿಭಾಗದ ಮುಖ್ಯಸ್ಥ ಸುನೀಲ್‌ ಅಂಬೇಕರ್, ”ಗೋಲ್ವಾಲ್ಕರ್ ಗುರೂಜಿ ಅವರ ದೃಷ್ಟಿಯಲ್ಲಿ, ಈ ಟ್ವೀಟ್ ವಾಸ್ತವವಲ್ಲ ಮತ್ತು ಸಾಮಾಜಿಕ ಅಸಂಗತತೆಯನ್ನು ಉಂಟುಮಾಡುತ್ತದೆ. ಸುಳ್ಳು ಫೋಟೋಶಾಪ್ ಚಿತ್ರವನ್ನು ಹಾಕಲಾಗಿದೆ. ಸಂಘದ ವರ್ಚಸ್ಸಿಗೆ ಕಳಂಕ ತರುವ ಗುರಿ ಇದೆ. ಗುರೂಜಿ ಅಂತಹ ಮಾತನ್ನು ಎಂದಿಗೂ ಹೇಳಲಿಲ್ಲ. ಅವರ ಇಡೀ ಜೀವನವು ಸಾಮಾಜಿಕ ತಾರತಮ್ಯವನ್ನು ಕೊನೆಗೊಳಿಸುವಲ್ಲಿ ತೊಡಗಿಸಿಕೊಂಡಿದೆ” ಎಂದಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ವಕೀಲ ರಾಜೇಶ್ ಜೋಶಿ ಅವರು ಎಫ್‌ಐಆರ್ ದಾಖಲಿಸಿದ್ದು, ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಲು ಸಿಂಗ್ ಉದ್ದೇಶಪೂರ್ವಕವಾಗಿ ಗೋಲ್ವಾಲ್ಕರ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...