Homeಮುಖಪುಟಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

- Advertisement -
- Advertisement -

ಗುಜರಾತ್‌ ತೂಗು ಸೇತುವೆ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೆಲವು ಗಂಟೆಗಳ ಕಾಲ ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಸಾಕೇತ್‌ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

“ಈ ಕುರಿತು ಆರ್‌ಟಿಐ ಅಡಿ ಮಾಹಿತಿ ಬಹಿರಂಗವಾಗಿದೆ” ಎಂದು ಗೋಖಲೆ ಭಾನುವಾರ ಟ್ವೀಟ್ ಮಾಡಿದ್ದರು.

130ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಇತ್ತೀಚಿನ ಸೇತುವೆ ಕುಸಿತದ ದುರಂತದ ನಂತರ ಪ್ರಧಾನಿ ಮೋದಿಯವರು ಅಕ್ಟೋಬರ್ 30ರಂದು ಗುಜರಾತ್ ರಾಜ್ಯದ ಮೊರ್ಬಿ ನಗರಕ್ಕೆ ಭೇಟಿ ನೀಡಿದ್ದರು. ಅದಕ್ಕಾಗಿ 30 ಕೋಟಿ ರೂಪಾಯಿ ವೆಚ್ಚವಾಗಿದೆ. ಅದರಲ್ಲಿ 5.5 ಕೋಟಿ ರೂಪಾಯಿಗಳು ‘ಸ್ವಾಗತ, ಕಾರ್ಯಕ್ರಮ ನಿರ್ವಹಣೆ ಮತ್ತು ಫೋಟೋಗ್ರಫಿ’ಗೆ ಖರ್ಚಾಗಿದೆ ಎಂದು ಗೋಖಲೆ ದೂರಿದ್ದರು.

ಮೋರ್ಬಿ ದುರಂತದ 135 ಸಂತ್ರಸ್ತರಿಗೆ ತಲಾ 4 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಆದರೆ ಪ್ರಧಾನ ಮೋದಿಯವರ ಭೇಟಿಗೆ ಹೆಚ್ಚಿನ ಖರ್ಚಾಗಿದೆ ಎಂದು ಹೋಲಿಕೆ ಮಾಡಿದ್ದ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.

“ಮೋರ್ಬಿಗೆ ಮೋದಿಯವರ ಕೆಲವು ಗಂಟೆಗಳ ಭೇಟಿಗೆ ₹ 30 ಕೋಟಿ ವೆಚ್ಚವಾಗಿದೆ ಎಂದು ಆರ್‌ಟಿಐ ಬಹಿರಂಗಪಡಿಸುತ್ತದೆ. ಇದರಲ್ಲಿ ₹ 5.5 ಕೋಟಿ ಕೇವಲ ‘ಸ್ವಾಗತ, ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಫೋಟೋಗ್ರಫಿ’ಗಾಗಿ ಖರ್ಚಾಗಿದೆ” ಎಂದು ಗೋಖಲೆ ಟ್ವೀಟ್‌ ಮಾಡಿದ್ದು, ಪತ್ರಿಕಾ ತುಣುಕುಗಳನ್ನು ಲಗತ್ತಿಸಿದ್ದರು.

“ಮೃತಪಟ್ಟ 135 ಸಂತ್ರಸ್ತರಿಗೆ ತಲಾ ₹ 4 ಲಕ್ಷ ಪರಿಹಾರ, ಅಂದರೆ ₹ 5 ಕೋಟಿ ಸಿಕ್ಕಿದೆ. ಕೇವಲ ಮೋದಿಯವರ ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪಬ್ಲಿಕ್‌ ಪಿಆರ್‌‌ ಕೆಲಸಕ್ಕಾಗಿ 135 ಜನರ ಜೀವನಕ್ಕಿಂತ ಹೆಚ್ಚು ವೆಚ್ಚ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದರು.

ಈ ಕುರಿತು ಯಾವುದೇ ಆರ್‌ಟಿಐ ಮಾಹಿತಿಯನ್ನು ನೀಡಲಾಗಿಲ್ಲ. ಈ ಸುದ್ದಿಯು ಸುಳ್ಳು ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಟ್ವೀಟ್ ಮಾಡಿತ್ತು.

“ಈ ಪ್ರತಿಪಾದನೆ ನಕಲಿಯಾಗಿದೆ. ಅಂತಹ ಯಾವುದೇ ಆರ್‌ಟಿಐ ಪ್ರತಿಕ್ರಿಯೆಯನ್ನು ನೀಡಲಾಗಿಲ್ಲ” ಎಂದು ಪಿಐಬಿ ಸ್ಪಷ್ಟಪಡಿಸಿತ್ತು. ಆದರೆ ನಿಜಕ್ಕೂ ಎಷ್ಟು ಹಣ ಖರ್ಚಾಗಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿಲ್ಲ.

ಟ್ವೀಟ್ ಹಿನ್ನೆಲೆಯಲ್ಲಿ ಗೋಖಲೆಯವರ ಬಂಧನವಾಗಿದೆ.

ಸಾಕೇತ್ ಗೋಖಲೆ ಅವರು ಸೋಮವಾರ ರಾತ್ರಿ ನವದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದರು. ಅಲ್ಲಿಂದ ಅವರನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಟಿಎಂಸಿಯ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...