Homeಮುಖಪುಟಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

ಮೊರ್ಬಿಗೆ ಭೇಟಿಗೆ 30 ಕೋಟಿ ರೂ ಖರ್ಚು ಟ್ವೀಟ್: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ

- Advertisement -
- Advertisement -

ಗುಜರಾತ್‌ ತೂಗು ಸೇತುವೆ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೆಲವು ಗಂಟೆಗಳ ಕಾಲ ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಸಾಕೇತ್‌ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

“ಈ ಕುರಿತು ಆರ್‌ಟಿಐ ಅಡಿ ಮಾಹಿತಿ ಬಹಿರಂಗವಾಗಿದೆ” ಎಂದು ಗೋಖಲೆ ಭಾನುವಾರ ಟ್ವೀಟ್ ಮಾಡಿದ್ದರು.

130ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಇತ್ತೀಚಿನ ಸೇತುವೆ ಕುಸಿತದ ದುರಂತದ ನಂತರ ಪ್ರಧಾನಿ ಮೋದಿಯವರು ಅಕ್ಟೋಬರ್ 30ರಂದು ಗುಜರಾತ್ ರಾಜ್ಯದ ಮೊರ್ಬಿ ನಗರಕ್ಕೆ ಭೇಟಿ ನೀಡಿದ್ದರು. ಅದಕ್ಕಾಗಿ 30 ಕೋಟಿ ರೂಪಾಯಿ ವೆಚ್ಚವಾಗಿದೆ. ಅದರಲ್ಲಿ 5.5 ಕೋಟಿ ರೂಪಾಯಿಗಳು ‘ಸ್ವಾಗತ, ಕಾರ್ಯಕ್ರಮ ನಿರ್ವಹಣೆ ಮತ್ತು ಫೋಟೋಗ್ರಫಿ’ಗೆ ಖರ್ಚಾಗಿದೆ ಎಂದು ಗೋಖಲೆ ದೂರಿದ್ದರು.

ಮೋರ್ಬಿ ದುರಂತದ 135 ಸಂತ್ರಸ್ತರಿಗೆ ತಲಾ 4 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಆದರೆ ಪ್ರಧಾನ ಮೋದಿಯವರ ಭೇಟಿಗೆ ಹೆಚ್ಚಿನ ಖರ್ಚಾಗಿದೆ ಎಂದು ಹೋಲಿಕೆ ಮಾಡಿದ್ದ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.

“ಮೋರ್ಬಿಗೆ ಮೋದಿಯವರ ಕೆಲವು ಗಂಟೆಗಳ ಭೇಟಿಗೆ ₹ 30 ಕೋಟಿ ವೆಚ್ಚವಾಗಿದೆ ಎಂದು ಆರ್‌ಟಿಐ ಬಹಿರಂಗಪಡಿಸುತ್ತದೆ. ಇದರಲ್ಲಿ ₹ 5.5 ಕೋಟಿ ಕೇವಲ ‘ಸ್ವಾಗತ, ಈವೆಂಟ್ ಮ್ಯಾನೇಜ್‌ಮೆಂಟ್ ಮತ್ತು ಫೋಟೋಗ್ರಫಿ’ಗಾಗಿ ಖರ್ಚಾಗಿದೆ” ಎಂದು ಗೋಖಲೆ ಟ್ವೀಟ್‌ ಮಾಡಿದ್ದು, ಪತ್ರಿಕಾ ತುಣುಕುಗಳನ್ನು ಲಗತ್ತಿಸಿದ್ದರು.

“ಮೃತಪಟ್ಟ 135 ಸಂತ್ರಸ್ತರಿಗೆ ತಲಾ ₹ 4 ಲಕ್ಷ ಪರಿಹಾರ, ಅಂದರೆ ₹ 5 ಕೋಟಿ ಸಿಕ್ಕಿದೆ. ಕೇವಲ ಮೋದಿಯವರ ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪಬ್ಲಿಕ್‌ ಪಿಆರ್‌‌ ಕೆಲಸಕ್ಕಾಗಿ 135 ಜನರ ಜೀವನಕ್ಕಿಂತ ಹೆಚ್ಚು ವೆಚ್ಚ ಮಾಡಲಾಗಿದೆ” ಎಂದು ಅವರು ಆರೋಪಿಸಿದ್ದರು.

ಈ ಕುರಿತು ಯಾವುದೇ ಆರ್‌ಟಿಐ ಮಾಹಿತಿಯನ್ನು ನೀಡಲಾಗಿಲ್ಲ. ಈ ಸುದ್ದಿಯು ಸುಳ್ಳು ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಟ್ವೀಟ್ ಮಾಡಿತ್ತು.

“ಈ ಪ್ರತಿಪಾದನೆ ನಕಲಿಯಾಗಿದೆ. ಅಂತಹ ಯಾವುದೇ ಆರ್‌ಟಿಐ ಪ್ರತಿಕ್ರಿಯೆಯನ್ನು ನೀಡಲಾಗಿಲ್ಲ” ಎಂದು ಪಿಐಬಿ ಸ್ಪಷ್ಟಪಡಿಸಿತ್ತು. ಆದರೆ ನಿಜಕ್ಕೂ ಎಷ್ಟು ಹಣ ಖರ್ಚಾಗಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿಲ್ಲ.

ಟ್ವೀಟ್ ಹಿನ್ನೆಲೆಯಲ್ಲಿ ಗೋಖಲೆಯವರ ಬಂಧನವಾಗಿದೆ.

ಸಾಕೇತ್ ಗೋಖಲೆ ಅವರು ಸೋಮವಾರ ರಾತ್ರಿ ನವದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದರು. ಅಲ್ಲಿಂದ ಅವರನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಟಿಎಂಸಿಯ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...