Homeಮುಖಪುಟಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ 'ಮಿಡ್‌ನೈಟ್‌' ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25...

ಗ್ರಹಾಂ ಸ್ಟೇನ್ಸ್ ಮತ್ತು ಇಬ್ಬರು ಮಕ್ಕಳ ‘ಮಿಡ್‌ನೈಟ್‌’ ಮರ್ಡರ್‌ : ಬಲಪಂಥೀಯ ಕ್ರೌರ್ಯಕ್ಕೆ 25 ವರ್ಷ!

- Advertisement -
- Advertisement -

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಮನೋಹರಪುರ ಹಳ್ಳಿಯ ನಿವಾಸಿಗಳು ಮಾನವೀಯತೆಯನ್ನು ಅಣಕಿಸಿರುವ ಆಸ್ಟ್ರೇಲಿಯಾದ ಮಿಷನರಿ ‘ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರರ’ ಜೀವಂತ ದಹನದ ನೆನಪಿನಲ್ಲಿ 25ನೇ ಪುಣ್ಯತಿಥಿಯನ್ನು ಆಚರಿಸಿದ್ದಾರೆ.

ಜನವರಿ 22, 1999ರ ರಾತ್ರಿ ಮನೋಹರಪುರದಲ್ಲಿ ಜಂಗಲ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಲಾಗಿತ್ತು. ಬಿಜೆಪಿಯ ಸಂಬಂಧ ಹೊಂದಿರುವ ಬಲಪಂಥೀಯ ಬಜರಂಗದಳದ ಕಾರ್ಯಕರ್ತರ ಗುಂಪು ಈ ಕೃತ್ಯವನ್ನು ಎಸಗಿತ್ತು.

ಜಂಗಲ್ ಶಿಬಿರವು ಈ ಪ್ರದೇಶದ ಕ್ರಿಶ್ಚಿಯನ್ನರಿಗೆ ಸಾಮಾಜಿಕ ವೇದಿಕೆಯಾಗಿ ಕಾರ್ಯನಿರ್ವಹಿಸಿತ್ತು. ಭೀಕರ ಘಟನೆಯ ಸಮಯದಲ್ಲಿ ಅವರು ವ್ಯಾನ್‌ನಲ್ಲಿ ಮಲಗಿದ್ದರು. ಬಲಪಂಥೀಯ ಗುಂಪುಗಳು ಸ್ಟೇನ್ಸ್ ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿತ್ತು.

ಘಟನೆ ನಡೆದು 25 ವರ್ಷಗಳು ಕಳೆದರೂ ಈ ಘಟನೆಯು ನಮ್ಮ ಸ್ಮರಣೆಯಿಂದ ಎಂದಿಗೂ ಅಳಿಸಿಹೋಗುವುದಿಲ್ಲ. ಆದರೆ ಜನವರಿ 22 ನಮಗೆ ಚಿಂತನಶೀಲ ದಿನವಾಗಿದೆ. ಸ್ಟೇನ್ಸ್ ತನ್ನ ಜೀವಿತಾವಧಿಯಲ್ಲಿ ಅಭ್ಯಾಸ ಮಾಡಿದ ಮಾನವೀಯತೆಯ ತತ್ವಶಾಸ್ತ್ರವನ್ನು ಮುಂದುವರಿಸಲು ನಾವು ನಿರ್ಧರಿಸುತ್ತೇವೆ ಎಂದು 40 ವರ್ಷದ ಜೊಹಾನ್ ಮುರ್ಮು ಹೇಳಿದ್ದಾರೆ.

ಒಡಿಶಾದ ರಾಜಧಾನಿ ಭುವನೇಶ್ವರದಿಂದ 200 ಕಿಮೀ ದೂರದಲ್ಲಿರುವ ಮನೋಹರಪುರದಲ್ಲಿ 260 ಕುಟುಂಬಗಳಿವೆ. ಅದರಲ್ಲಿ 45 ಕುಟುಂಬಗಳು ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಿದ್ದಾರೆ. ಜನವರಿ 23ರ ಮಧ್ಯರಾತ್ರಿ ಈ ಕೊಲೆ ನಡೆದಿತ್ತು. ಅದು ರಾತ್ರಿಯ ಸಮಯವಾದ್ದರಿಂದ ಮನೋಹರಪುರವು ಪ್ರತಿ ವರ್ಷ ಜನವರಿ 22ರಂದು ಮರಣ ವಾರ್ಷಿಕೋತ್ಸವವನ್ನು ಆಚರಿಸುತ್ತದೆ ಆದರೆ ಜನವರಿ 23ರಂದು ಮಯೂರ್ಭಂಜ್ ಜಿಲ್ಲೆಯ ಜಿಲ್ಲಾ ಕೇಂದ್ರ ಪಟ್ಟಣವಾದ ಬರಿಪಾಡಾದಲ್ಲಿ ಸ್ಮರಣಾರ್ಥ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಅಲ್ಲಿ ಈ ಮಿಷನರಿಗಳು ಕುಷ್ಠ ರೋಗಿಗಳಿಗೆ ಸೇವೆ ಸಲ್ಲಿಸುತ್ತಿದ್ದರು.

ಬಿಜೆಪಿಯಲ್ಲಿ ಸಕ್ರಿಯನಾಗಿದ್ದ ದಾರಾ ಸಿಂಗ್ ಮತ್ತು ತಂಡ

ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಮಕ್ಕಳನ್ನು ಸುಟ್ಟು ದಹನ ಮಾಡಿದ್ದ ತಂಡದಲ್ಲಿದ್ದ ದಾರಾ ಸಿಂಗ್ ಬಿಜೆಪಿಯ ಸದಸ್ಯನಾಗಿದ್ದ. ಆತ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿದ್ದ, ಗೋ ಸುರಕ್ಷಾ ಸಮಿತಿಯ ಸಕ್ರಿಯ ಸದಸ್ಯನಾಗಿದ್ದ. ಈತ 1998ರ ಚುನಾವಣೆಯ ಸಮಯದಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ರ್ಯಾಲಿಗಳಲ್ಲಿ ತೊಡಗಿಸಿಕೊಂಡಿದ್ದ. ಇದಲ್ಲದೆ 1991ರ ಚುನಾವಣೆಯ ಸಮಯದಲ್ಲಿ ಪಾಟ್ನಾದಲ್ಲಿ ಬಿಜೆಪಿಗಾಗಿ ಕೆಲಸ ಮಾಡಿದ್ದ. ಹಿಂದುತ್ವದ ಬಲವಾದ ಪ್ರತಿಪಾದಕನಾಗಿದ್ದ.

ದನದ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ದುಷ್ಕೃತ್ಯ ನಡೆಸುತ್ತಿದ್ದ ಗಂಗಾನದಿ ಬಯಲು ಪ್ರದೇಶದ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್, ಕುಷ್ಠರೋಗದ ಸಂತ್ರಸ್ತರ ಸೇವೆ ಮಾಡುತ್ತಿದ್ದ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೈನ್ಸ್(58) ಮತ್ತು ಅವನ ಇಬ್ಬರು ಮಕ್ಕಳಾದ ಫಿಲಿಪ್ (10) ಮತ್ತು ತಿಮೋತಿ(6) ಅವರನ್ನು ಜೀವಂತ ಸುಟ್ಟು ಹಾಕಿದ್ದ. ಈ ಘಟನೆ 1999ರ ಜನವರಿ 21-22 ರಾತ್ರಿ ವೇಳೆ ನಡೆದಿದೆ. ಘಟನೆ ನಡೆದು ಇಂದಿಗೆ 25 ವರ್ಷವಾಗಿದೆ. ಪ್ರಕರಣದಲ್ಲಿ ದಾರಾ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯ ಈ ಪ್ರಕರಣದಲ್ಲಿ ಕೊಲೆಗಾರನ ಸಿದ್ದಾಂತವನ್ನು ಅರ್ಥಮಾಡಿಕೊಂಡಿಲ್ಲ ಎಂದು ಕ್ರಿಶ್ಚಿಯನ್ ಸಮುದಾಯವು ಹೇಳಿಕೊಂಡಿತ್ತು.

ಆಸ್ಟ್ರೇಲಿಯಾದಿಂದ ಒರಿಸ್ಸಾ(ಒಡಿಶಾ)ಗೆ ಬಂದು ನೆಲೆಸಿದ್ದ ಗ್ರಹನ್ ಸ್ಟೇನ್ಸ್ ಸ್ಥಳೀಯ ಭಾಷೆ ಕಲಿತು ಕುಷ್ಠರೋಗಿಗಳ ಸೇವೆ ಮಾಡುತ್ತಿದ್ದರು. ರಾಜ್ಯದ ಮಯೂರ್‌ ಬಂಜ್ ಎಂಬ ಊರಿನಲ್ಲಿ ಕುಷ್ಠರೋಗಿಗಳ ಚಿಕಿತ್ಸೆಗಾಗಿ ಒಂದು ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಇವರು ಎರಡನೇ ಮದರ್ ತೆರೇಸಾ ಎಂದು ಕೂಡ ಕರೆಯಲ್ಪಟ್ಟಿದ್ದರು. ಗ್ರಹನ್ ಸ್ಟೇನ್ಸ್ ಹತ್ಯೆಯನ್ನು ಘಟನೆಯನ್ನು ಅಂದಿನ ಭಾರತದ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ರಾಷ್ಟ್ರಕ್ಕೆ ಕಪ್ಪು ಚುಕ್ಕೆ ಎಂದು ಕರೆದಿದ್ದರು. ಇದಲ್ಲದೆ ಬಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಕೂಡ ಇದೇ ರೀತಿಯ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ.

ಒರಿಸ್ಸಾ ರಾಜ್ಯದ ಹೊಸ ಹೆಸರಾದ ಒಡಿಶಾದಲ್ಲಿ ಗ್ರಹನ್ ಸ್ಟೇನ್ಸ್ ಪತ್ನಿ ಗ್ಲಾಡಿಸ್ ಸ್ಟೇನ್ಸ್ ಇನ್ನೂ ಇದ್ದಾರೆ. ಆಕೆಯ ಬದುಕುಳಿದ ಮಗು, ಮಗಳು, ಈಗ ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿದ್ದಾರೆ. ದುಷ್ಕರ್ಮಿಗಳು ಜೀಪಿಗೆ ಬೆಂಕಿ ಹಚ್ಚಿದಾಗ ಗ್ರಹನ್ ಮತ್ತು ಅವರ ಮಕ್ಕಳು ಎಚ್ಚರಗೊಂಡು ಹೊರಬರಲು ಪ್ರಯತ್ನಿಸಿದರೂ ದಾರಾ ಸಿಂಗ್‌ನ ತಂಡ ಅವರನ್ನು ಲಾಠಿ ಬಳಸಿ ಬೆಂಕಿಗೆ ತಳ್ಳಿಹಾಕಿ ಜೀವಂತವಾಗಿ ದಹನ ಮಾಡಿತ್ತು. ತನ್ನ ಕುಟುಂಬದ ಮೇಲೆ ಅನ್ಯಾಯ ನಡೆದರೂ ಗ್ರಹನ್ ಅವರ ಪತ್ನಿ ಗ್ಲ್ಯಾಡಿಸ್ ಅವರು, ನನ್ನ ಗಂಡ ಮತ್ತು ನನ್ನ ಇಬ್ಬರು ಮಕ್ಕಳನ್ನು ಕೊಂದವರನ್ನು ನಾನು ಕ್ಷಮಿಸುತ್ತೇನೆ ಎಂದು ಹೇಳಿದ್ದರು. ತನ್ನ ಪ್ರೀತಿಯ‌ ಗಂಡ ಮತ್ತು ಇಬ್ಬರು ಕಂದಮ್ಮಗಳನ್ನು ಕೊಂದ ಆರೋಪಿಗಳನ್ನು ಕ್ಷಮಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಗ್ಲ್ಯಾಡ್ಲಿಸ್ ಧರ್ಮ ಅಂದರೆ ಏನು ಎಂದು ತೋರಿಸಿಕೊಟ್ಟರು. ಆದರೆ ಅಪರಾಧಿಗಳಿಗೆ ಕ್ಷಮೆ ನೀಡುವ ಕಾನೂನು ಭಾರತದಲ್ಲಿ ಇಲ್ಲ.

ಸಂಘ ಪರಿವಾರ ಗುಂಪುಗಳು ಭಾರತದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲೆ ಹಿಂಸಾಚಾರ ನಡೆಸುತ್ತಿದೆ ಎಂದು ಈ ವೇಳೆ ಪಾಶ್ಚಿಮಾತ್ಯ ಜಗತ್ತು ಕಳವಳ ವ್ಯಕ್ತಪಡಿಸಿತ್ತು. 2007 ಮತ್ತು 2008ರಲ್ಲಿ ಒಡಿಶಾದಲ್ಲಿ ಸಂಘ ಪರಿವಾರವು ಮತ್ತೊಮ್ಮೆ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿತ್ತು. ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು, 6,000 ಕ್ಕೂ ಹೆಚ್ಚು ಮನೆಗಳು ಮತ್ತು 300 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು ಮತ್ತು 60,000 ಜನರನ್ನು ಸ್ಥಳಾಂತರಿಸಲಾಗಿತ್ತು.

ಇದನ್ನು ಓದಿ: ಭದ್ರತೆ ಹಿಂಪಡೆದ ಬಳಿಕ ಭಯದಿಂದ ಬದುಕುತ್ತಿರುವ ಗುಜರಾತ್‌ ಗಲಭೆ ಸಾಕ್ಷಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...