Homeಕರ್ನಾಟಕವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

- Advertisement -
- Advertisement -

ಕಳೆದ ಒಂದು ವಾರದಿಂದ ಬೆಂಗಳೂರು ಮಹಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು, ಸಿಡಿಲು ಸಹಿತ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರತಿದಿನ ಸಂಜೆ ಹೊತ್ತಿಗೆ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಅ.23) ಬೆಳಿಗ್ಗೆಯಿಂದ ಕೊಂಚ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿತ್ತು. ಆದರೆ, ಸಂಜೆ 4 ಗಂಟೆಯಿಂದ ಮಳೆ ಶುರುವಾಗಿದೆ. ಹವಾಮಾನ ಇಲಾಖೆ ಇಂದು ನಗರಕ್ಕೆ ಆರೆಂಜ್ ಅಲರ್ಟ್ ನೀಡಿದೆ.

ನಾಳೆ (ಅ.24) ಬೆಳಗ್ಗೆ 8.30ರ ತನಕದ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ, ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ. ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ

ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ 22 ವರೆಗೆ 24.1 ಸೆಂ.ಮೀ ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 11.8 ಸೆಂ.ಮೀ ಮಳೆಯಾಗುತ್ತಿತ್ತು. 1901ರಿಂದ 2024ರ ಅವಧಿಯಲ್ಲಿ ಅ.1ರಿಂದ 22ರವರೆಗೆ 2005ರಲ್ಲಿ ಮಾತ್ರ 29.1 ಸೆಂ.ಮೀ ಮಳೆಯಾಗಿತ್ತು. ಇದು ಈವರೆಗಿನ ದಾಖಲೆ. 1970ರಲ್ಲಿ 25.3 ಸೆಂ.ಮೀ ಮಳೆಯಾಗಿತ್ತು. ಅದರ ನಂತರ ಈ ಬಾರಿಯಾಗಿದೆ ಅತೀ ಹೆಚ್ಚು ಮಳೆಯಾಗಿರುವುದು.

ಕಳೆದ ಒಂದು ವಾರದಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದ ಸಂಚಾರ ಅಡಚಣೆ, ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ವಾಹನ ಸವಾರರ ಪರದಾಟ ಇತ್ಯಾದಿ ಸಮಸ್ಯೆಗಳು ಆಗುತ್ತಿತ್ತು. ಆದರೆ, ಸೋಮವಾರ (ಅ.21) ತಡರಾತ್ರಿ ಮತ್ತು ಮಂಗಳವಾರ (ಅ.22) ಮಧ್ಯಾಹ್ನ ಸುರಿದ ಮಳೆಯಿಂದ ಜನರಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟಾಗಿದೆ.

1 ಸಾವಿರಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರು

ವರದಿಗಳ ಪ್ರಕಾರ, ನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ಭಾರೀ ಮಳೆಗೆ 1 ಸಾವಿರಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ನಗರದ ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ಯಲಹಂಕ, ಯಲಹಂಕ ಉಪನಗರ ಭಾಗಗಳಲ್ಲಿ ಮನೆಗಳು ಜಲಾವೃತಗೊಂಡು ಜನರು ಸಂಕಷ್ಟಪಟ್ಟಿದ್ದಾರೆ. ಯಲಹಂಕ ಕೋಗಿಲು ಕ್ರಾಸ್ ಬಳಿಯ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನ ನೆಲ ಮಹಡಿ ಸಂಪೂರ್ಣ ಜಲಾವೃತಗೊಂಡು, ಪಾರ್ಕಿಂಗ್ ಪ್ರದೇಶದಲ್ಲಿ ಐದು ಐಡಿಗಳಷ್ಟು ನೀರು ಸಂಗ್ರವಾಗಿತ್ತು. ಅಲ್ಲಿನ ನಿವಾಸಿಗಳನ್ನು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಟ್ರ್ಯಾಕ್ಟರ್ ಮತ್ತು ಬೋಟ್‌ಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿದು 6 ಮಂದಿ ಸಾವು

ನಗರದಲ್ಲಿ ಭಾರೀ ಮಳೆಯ ನಡುವೆ ಮಂಗಳವಾರ (ಅ.22) ಸಂಜೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈ ಸುದ್ದಿಯ ಬರೆಯುವ (ಸಂಜೆ 4 ಗಂಟೆ) 6 ಕ್ಕೆ ಏರಿಕೆಯಾಗಿತ್ತು.

ಧರೆಗುರುಳಿದ ಮರ, ಸಂಚಾರ ದಟ್ಟಣೆ

ಭಾರೀ ಮಳೆಗೆ ನಗರದಲ್ಲಿ ಹಲವೆಡೆ ಮರಗಳು ಧರೆಗುರುಳಿವೆ. ಕೆಲವೆಡೆ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರ ಬಿದ್ದು ಹಾನಿ ಉಂಟಾಗಿದೆ. ಸಂಜೆ ಹೊತ್ತು ಕಚೇರಿ, ಶಾಲಾ-ಕಾಲೇಜು ಬಿಡುವ ಸಮಯದಲ್ಲಿ ಮಳೆಯಾಗುತ್ತಿರುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಬಳ್ಳಾರಿ ರಸ್ತೆಗಳಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಚರಂಡಿ, ರಸ್ತೆ ಗುಂಡಿಗಳ ಅವ್ಯವಸ್ತೆ

ನಗರದಲ್ಲಿ ಮಳೆಯಿಂದ ಹೆಚ್ಚು ಸಮಸ್ಯೆ ಉಂಟಾಗಲು ಚರಂಡಿ ಅವ್ಯವಸ್ಥೆ ಪ್ರಮುಖ ಕಾರಣವಾಗಿದೆ. ನಗರದಾದ್ಯಂತ ಎಲ್ಲೂ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲ. ಮಳೆ ಬಂದಾಗ ರಸ್ತೆಯಿಂದ ನೀರು ಹರಿದು ಚರಂಡಿಗೆ ಹೋಗುವ ಬದಲು ಚರಂಡಿ ತುಂಬಿ ರಸ್ತೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರ ಜೊತೆಗೆ ರಸ್ತೆಗಳಲ್ಲಿರುವ ಗುಂಡಿಗಳು ಜನರ ಪ್ರಾಣಕ್ಕೆ ಕುತ್ತು ತರುವಂತಿದೆ. ಮಳೆ ಬಂದು ರಸ್ತೆ ಮೇಲೆ ನೀರು ನಿಂತಾಗ ಎಲ್ಲಿ ಎಷ್ಟು ದೊಡ್ಡ ಗುಂಡಿ ಇದೆ ಎಂದು ತಿಳಿಯದೆ ಬೈಕ್‌ ಸವಾರರು ಅದರೊಳಗೆ ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ವಾಹನ ಸವಾರರನ್ನು ಬಲಿ ಪಡೆಯುವಂತಿದೆ.

ಶಾಲೆಗಳಿಗೆ ರಜೆ, ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ

ಮಳೆ ಹಿನ್ನೆಲೆ ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ. ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ತುರ್ತು ಕ್ರಮಕ್ಕ ಸೂಚನೆ

ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಿಗೆ ಮಂಗಳವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ” ಅಪಾರ್ಟ್‌ಮೆಂಟ್‌ಗಳ ನೆಲಮಹಡಿಯಲ್ಲಿ ಸಂಗ್ರಹವಾಗಿರುವ ನೀರನ್ನು ಹೊರಹಾಕಲು ಮೋಟಾರ್ ಪಂಪ್‌ಗಳ ಅವಶ್ಯಕತೆಯಿದ್ದು, ಅಧಿಕಾರಿಗಳಿಗೆ ಪಂಪ್‌ಗಳನ್ನು ಒದಗಿಸುವಂತೆ ಮನವಿ ಮಾಡಲಾಗಿದೆ. ಅಗ್ನಿಶಾಮಕದಳ ಮತ್ತು ಬಿಬಿಎಂಪಿ ಸಿಬ್ಬಂದಿ ಮೂಲಕ ನೀರನ್ನು ಹೊರಹಾಕಲಾಗುವುದು. ದೊಡ್ಡಬೊಮ್ಮಸಂದ್ರ ಕೆರೆ ಕೋಡಿ 17 ವರ್ಷಗಳ ನಂತರ ಹರಿದಿದೆ. ಇದರಿಂದ ಕೊಡಿಗೇಹಳ್ಳಿ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆ

ಬೆಂಗಳೂರು ನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು ಬಿಬಿಎಂಪಿ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಿದೆ. ಇದರ ಜೊತೆಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ಪೊಲೀಸ್ ತಂಡಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತರ ಜಿಲ್ಲೆಗಳಲ್ಲೂ ಭಾರೀ ಮಳೆ

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತಿದ್ದು, ವಿವಿಧ ರೀತಿಯ ಹಾನಿ ಸಂಭವಿಸಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 120 ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹಾಸನ, ರಾಮನಗರ ಜಿಲ್ಲೆಗಳಲ್ಲೂ ಮಳೆಹಾನಿ ಸಂಭವಿಸಿದ ಬಗ್ಗೆ ಮಾಹಿತಿ ದೊರೆತಿದೆ.

12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇಂದು (ಅ.23) ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು, ಕರಾವಳಿಯ ಉಳಿದು ಜಿಲ್ಲೆಗಳ ಹಲವೆಡೆ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲಸ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...