Homeಕರ್ನಾಟಕಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

- Advertisement -
- Advertisement -

ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ’ಈ ದಿನ’ ನ್ಯೂಸ್ ವೆಬ್ಸೈಟ್ ವರದಿ ಬಿತ್ತರಿಸಿದ್ದು, ಶಾಂತಿನಗರದಲ್ಲಿ ಅಶಾಂತಿ ಸೃಷ್ಟಿಗೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಎನ್ನುವ ವ್ಯಕ್ತಿ ಎಂದು ವರದಿ ಹೇಳಿದೆ.

ಶಿವಮೊಗ್ಗ ನಗರದ ಶಾಂತಿನಗರ (ರಾಗಿಗುಡ್ಡ) ಬಡಾವಣೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ತೂರಿ ಬಂದ ಕಲ್ಲೊಂದು ಉಭಯ ಸಮುದಾಯಗಳ ನಡುವೆ ಗಲಭೆಗೆ ಕಾರಣವಾಗಿತ್ತು.

ಈ ಕಾರ್ಯಕ್ರಮದ ಮೆರವಣಿಗೆ ಮೇಲೆ ಕಲ್ಲು ಬಿದ್ದ ಬಳಿಕ ಉದ್ರಿಕ್ತರಾದ ಮುಸ್ಲಿಂ ಯುವಕರು ತಾವು ಕೂಡ ಕಲ್ಲೆಸೆದು ಪ್ರತಿಕ್ರಿಯಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಸಂಭ್ರಮ ಕೆಡಿಸಿ ಪ್ರಚೋದಿಸಲೆಂದು ಕಲ್ಲು ಎಸೆಯಲಾಗಿತ್ತು. ಆದರೆ ಕಲ್ಲು ಎಸೆದದ್ದು ಯಾರೆಂಬುದು ಆರಂಭದಲ್ಲಿ ಪತ್ತೆಯಾಗಿರಲಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಬಹುತೇಕ ಮಾಧ್ಯಮಗಳು ಇದು ಮುಸ್ಲಿಮ್ ಸಮುದಾಯದವರು ಸೃಷ್ಟಿಸಿದ ಸಂಘರ್ಷ ಎಂದು ಬಿಂಬಿಸಲಾಗಿತ್ತು.

ಈ ಬಗ್ಗೆ ‘ಈ ದಿನ.ಕಾಂ’ಗೆ ಇದೀಗ ಲಭ್ಯವಾಗಿರುವ ಬಲ್ಲಮೂಲಗಳ ಪ್ರಕಾರ ಬಜರಂಗದಳದ ಮುಖಂಡ, ಶಾಂತಿನಗರದ ನಿವಾಸಿ ’ರೋಹನ್ ಅಲಿಯಾಸ್ ರೋಯಾ’ ಎಂಬಾತನೇ ಮೊದಲು ಕಲ್ಲು ಎಸೆದಿದ್ದು ಎಂಬುದು ಖಚಿತವಾಗಿದೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರಾಗಿಗುಡ್ಡ ಶಾಂತವಾಗಿದೆ. ಸೆಕ್ಷನ್ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಈವರೆಗೆ 60 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಜರಂಗದಳದವರೂ ಇದ್ದಾರೆ. ಮುಸ್ಲಿಂ ಸಂಘಟನೆಯ ಕೆಲವು ಯುವಕರು ಬಂಧಿತರಾಗಿದ್ದಾರೆ. ಈವರೆಗೆ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಕಲ್ಲು ಎಸೆದ ಬಳಿಕ ಗಲಭೆ ಶುರುವಾಯಿತು. ಉದ್ರಿಕ್ತ ಯುವಕರ ಗುಂಪು ಪ್ರತಿಕ್ರಿಯಿಸಿ ಮತ್ತೊಂದು ಕೋಮಿನ ಮನೆಗಳತ್ತ ಕಲ್ಲು ಎಸೆಯಿತು. ಗಲಭೆಯಲ್ಲಿ ಮೂರೂ ಧರ್ಮಗಳವರ ಮನೆಗಳಿಗೂ ಹಾನಿಯಾಗಿದೆ ಹೇಳಲಾಗಿದೆ.

ಹಿಂದೂ ಮಹಾಗಣಪತಿ ಮೆರವಣಿಗೆಯ ವೇಳೆ ವಾರಾಣಸಿಯ ‘ವಿವಾದಿತ’ ಗ್ಯಾನವಾಪಿ ಮಸೀದಿ ಶಿವನ ಮಹಾದ್ವಾರ, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಲ್ಯಾಸ್ ನಗರದತ್ತ ಶ್ರೀರಾಮನು ಬಾಣ ಬಿಡುತ್ತಿದ್ದಾನೆ ಎಂಬಂತೆ ನಿರ್ಮಿಸಲಾದ ದ್ವಾರ, ಮುಸಲ್ಮಾನರಂತೆ ಗಡ್ಡಧಾರಿ ಹಾಗೂ ಹಸಿರು ಬಣ್ಣದ ಪಂಚೆ ತೊಟ್ಟ ಹಿರಣ್ಯಕಶ್ಯಪುವಿನ ಕರುಳು ಬಗೆಯುತ್ತಿರುವಂತೆ ನಿರ್ಮಿಸಲಾದ ನರಸಿಂಹನ ಕಲಾಕೃತಿ – ಇತ್ಯಾದಿಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಅಲ್ಪಸಂಖ್ಯಾತರು ಶಾಂತಿ ರೀತಿಯಲ್ಲಿ ವರ್ತಿಸಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ತಾವು ಕೂಡ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದರು.

ಅದೇ ರೀತಿಯಲ್ಲಿ ಭಾನುವಾರ ನಗರಾದ್ಯಂತ ಈದ್ ಹಬ್ಬವನ್ನು ನಗರದಾದ್ಯಂತ್ಯ ಆಯೋಜನೆಯಾಗಿತ್ತು. ಈ ವೇಳೆ ಹಿಂದೂಗಳೂ ಸಹಕರಿಸಿ ಸಂಭ್ರಮಿಸಿದ್ದರು. ಆದರೆ, ಶಾಂತಿನಗರದಲ್ಲಿ ಮಾತ್ರ ಕಲ್ಲು ತೂರಿ ಪ್ರಚೋದಿಸುವ ಮೂಲಕ ಅಶಾಂತಿ ಸೃಷ್ಟಿಸಲಾಯಿತು. ಮೊದಮೊದಲು ಈ ಕಲ್ಲು ತೂರಾಟದ ಹಿಂದೆ ಯಾರಿದ್ದಾರೆಂಬುದು ತಿಳಿದಿರಲಿಲ್ಲ.

ಈ ಮಧ್ಯೆ ಮೊದಲ ಕಲ್ಲು ಎಲ್ಲಿಂದ ಬಂದಿತು ಎಂಬುದಕ್ಕೆ ಈಗ ಸದ್ಯ ರೋಹನ್‌ ಕಡೆಗೆ ಬೆರಳು ಮಾಡಿ ತೋರಿಸಿದೆ. ಕಲ್ಲು ತೂರಿದ ಬಳಿಕ ಭಾನುವಾರ ಸಂಜೆ 5.45ರ ವೇಳೆಯಲ್ಲಿ ಬಜರಂಗದಳದ ಒಂದು ಗುಂಪು ಮರದ ದೊಣ್ಣೆಗಳನ್ನು ಹಿಡಿದು ಓಡಾಡುತ್ತಾ ಗಲಭೆಗೆ ಪ್ರಚೋದಿಸುತ್ತಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಪ್ರಚೋದನೆಯ ಕೃತ್ಯವನ್ನು ತಡೆಯಲು ಪೊಲೀಸ್ ಅಧಿಕಾರಿಗಳು ನಡೆಸಿರುವ ಪ್ರಯತ್ನವನ್ನೂ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್‌ ಆಗಿದೆ.

 

ಈ ವಿಡಿಯೋದಲ್ಲಿ ರೋಹನ್ ಜೊತೆಗೆ ಇತರರೂ ಮರದ ತಡಿಕೆಯೊಂದನ್ನು ಮುರಿದು, ಕೋಲುಗಳನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಇಲ್ಲಿ ಕಾಣಬಹುದು. ಅದರಲ್ಲಿ ಸಿ.ಆರ್. ಎಂಬ ಅಕ್ಷರಗಳನ್ನು ಬರೆದಿರುವ ಟೀ ಶರ್ಟ್ ಧರಿಸಿರುವಾತನೇ ರೋಹನ್ ಅಲಿಯಾಸ್ ರೋಯಾ. ಈತ ಬಜರಂಗದಳದಲ್ಲಿ ಸಕ್ರಿಯನಾಗಿದ್ದಾನೆ ಎಂದು ಬಲ್ಲಮೂಲಗಳು ತಿಳಿಸಿವೆ.

ರಾಗಿಗುಡ್ಡದಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆಯು ದೊಡ್ಡ ಪ್ರಮಾಣದಲ್ಲಿ ಶುರುವಾಗಿತ್ತು. ರೋಹನ್ ಮತ್ತು ಆತನ ಗುಂಪು ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಮೂಲಕ ಕೋಮು ವೈಮನಸ್ಯಕ್ಕೆ ಕಾರಣವಾಗಿದೆ.

”ನಗರದಲ್ಲಿ ಹಿಂದೂ ಗಣಪತಿ ಆಚರಣೆಯ ವೇಳೆ ವಿವಾದಾತ್ಮಕ ಮಹಾದ್ವಾರಗಳನ್ನು ನಗರಸಭೆ ತೆಗೆಸಬೇಕು. ಪೊಲೀಸರು ಈ ಕುರಿತು ಹೆಚ್ಚಿನ ಕ್ರಮ ಜರುಗಿಸಲು ಅಸಾಧ್ಯವಾಗಿದೆ” ಎಂದೂ ಕೆಲವು ಪೊಲೀಸರು ಅಸಹಾಯಕತೆ ತೋಡಿಕೊಂಡಿದ್ದಾರೆ ಎಂದು ಈ ದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲಾ ನಿಮಗೆ ಕೊಲ್ಲಿ ರಾಷ್ಟ್ರಗಳಿಂದ ಅಷ್ಟೋಂದು ಹಣ ಬರುತ್ತಿದೆ. ಮತ್ತೇಕೆ ಹೀಗೆ ಡಿಜಿಟಲ್ ಬಿಕ್ಷೆ ಬೇಡುವಿರಿ? ಪೊಲೀಸರಿಗೇ ಸಿಗದ ಸಾಕ್ಷಿಗಳು ನಿಮಗೆ ಹೇಗೆ ಸಿಗುತ್ತಿವೆ? ನಿಮ್ಮ ಅಂಕಣಗಳು, ಲೇಖನಗಳನ್ನು ನೋಡಿದರೇ ಆ ಗೌರಿ ಲಂಕೇಶ್ ಎಂತಹವಳು ಎಂಬ ಅರಿವಾಗುತ್ತದೆ. ನಿಮ್ಮಂತಹ ಹಿಂದೂ ವಿರೋಧಿಗಳನ್ನು ಬೆಂಬಲಿಸುವ ಸರ್ಕಾರವನ್ನು ಜನತೆ ಆರಿಸಿದ ಪರಿಣಾಮ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿರುವುದು. ಛೀ ಥೂ ನಿಮ್ಮಗಳ ಜನ್ಮಕ್ಕೆ.

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...