Homeಕರ್ನಾಟಕಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

- Advertisement -
- Advertisement -

ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ’ಈ ದಿನ’ ನ್ಯೂಸ್ ವೆಬ್ಸೈಟ್ ವರದಿ ಬಿತ್ತರಿಸಿದ್ದು, ಶಾಂತಿನಗರದಲ್ಲಿ ಅಶಾಂತಿ ಸೃಷ್ಟಿಗೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಎನ್ನುವ ವ್ಯಕ್ತಿ ಎಂದು ವರದಿ ಹೇಳಿದೆ.

ಶಿವಮೊಗ್ಗ ನಗರದ ಶಾಂತಿನಗರ (ರಾಗಿಗುಡ್ಡ) ಬಡಾವಣೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ತೂರಿ ಬಂದ ಕಲ್ಲೊಂದು ಉಭಯ ಸಮುದಾಯಗಳ ನಡುವೆ ಗಲಭೆಗೆ ಕಾರಣವಾಗಿತ್ತು.

ಈ ಕಾರ್ಯಕ್ರಮದ ಮೆರವಣಿಗೆ ಮೇಲೆ ಕಲ್ಲು ಬಿದ್ದ ಬಳಿಕ ಉದ್ರಿಕ್ತರಾದ ಮುಸ್ಲಿಂ ಯುವಕರು ತಾವು ಕೂಡ ಕಲ್ಲೆಸೆದು ಪ್ರತಿಕ್ರಿಯಿಸಿದ್ದಾರೆ.

ಈದ್ ಮಿಲಾದ್ ಹಬ್ಬದ ಸಂಭ್ರಮ ಕೆಡಿಸಿ ಪ್ರಚೋದಿಸಲೆಂದು ಕಲ್ಲು ಎಸೆಯಲಾಗಿತ್ತು. ಆದರೆ ಕಲ್ಲು ಎಸೆದದ್ದು ಯಾರೆಂಬುದು ಆರಂಭದಲ್ಲಿ ಪತ್ತೆಯಾಗಿರಲಿಲ್ಲ. ಹಾಗಾಗಿ ಬಿಜೆಪಿ ನಾಯಕರು ಹಾಗೂ ಬಹುತೇಕ ಮಾಧ್ಯಮಗಳು ಇದು ಮುಸ್ಲಿಮ್ ಸಮುದಾಯದವರು ಸೃಷ್ಟಿಸಿದ ಸಂಘರ್ಷ ಎಂದು ಬಿಂಬಿಸಲಾಗಿತ್ತು.

ಈ ಬಗ್ಗೆ ‘ಈ ದಿನ.ಕಾಂ’ಗೆ ಇದೀಗ ಲಭ್ಯವಾಗಿರುವ ಬಲ್ಲಮೂಲಗಳ ಪ್ರಕಾರ ಬಜರಂಗದಳದ ಮುಖಂಡ, ಶಾಂತಿನಗರದ ನಿವಾಸಿ ’ರೋಹನ್ ಅಲಿಯಾಸ್ ರೋಯಾ’ ಎಂಬಾತನೇ ಮೊದಲು ಕಲ್ಲು ಎಸೆದಿದ್ದು ಎಂಬುದು ಖಚಿತವಾಗಿದೆ.

ಸಧ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದ್ದು, ರಾಗಿಗುಡ್ಡ ಶಾಂತವಾಗಿದೆ. ಸೆಕ್ಷನ್ 144 ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಈವರೆಗೆ 60 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬಜರಂಗದಳದವರೂ ಇದ್ದಾರೆ. ಮುಸ್ಲಿಂ ಸಂಘಟನೆಯ ಕೆಲವು ಯುವಕರು ಬಂಧಿತರಾಗಿದ್ದಾರೆ. ಈವರೆಗೆ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್ ರೋಯಾ’ ಕಲ್ಲು ಎಸೆದ ಬಳಿಕ ಗಲಭೆ ಶುರುವಾಯಿತು. ಉದ್ರಿಕ್ತ ಯುವಕರ ಗುಂಪು ಪ್ರತಿಕ್ರಿಯಿಸಿ ಮತ್ತೊಂದು ಕೋಮಿನ ಮನೆಗಳತ್ತ ಕಲ್ಲು ಎಸೆಯಿತು. ಗಲಭೆಯಲ್ಲಿ ಮೂರೂ ಧರ್ಮಗಳವರ ಮನೆಗಳಿಗೂ ಹಾನಿಯಾಗಿದೆ ಹೇಳಲಾಗಿದೆ.

ಹಿಂದೂ ಮಹಾಗಣಪತಿ ಮೆರವಣಿಗೆಯ ವೇಳೆ ವಾರಾಣಸಿಯ ‘ವಿವಾದಿತ’ ಗ್ಯಾನವಾಪಿ ಮಸೀದಿ ಶಿವನ ಮಹಾದ್ವಾರ, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಇಲ್ಯಾಸ್ ನಗರದತ್ತ ಶ್ರೀರಾಮನು ಬಾಣ ಬಿಡುತ್ತಿದ್ದಾನೆ ಎಂಬಂತೆ ನಿರ್ಮಿಸಲಾದ ದ್ವಾರ, ಮುಸಲ್ಮಾನರಂತೆ ಗಡ್ಡಧಾರಿ ಹಾಗೂ ಹಸಿರು ಬಣ್ಣದ ಪಂಚೆ ತೊಟ್ಟ ಹಿರಣ್ಯಕಶ್ಯಪುವಿನ ಕರುಳು ಬಗೆಯುತ್ತಿರುವಂತೆ ನಿರ್ಮಿಸಲಾದ ನರಸಿಂಹನ ಕಲಾಕೃತಿ – ಇತ್ಯಾದಿಗಳನ್ನು ಪ್ರದರ್ಶಿಸಲಾಗಿತ್ತು. ಆದರೆ ಅಲ್ಪಸಂಖ್ಯಾತರು ಶಾಂತಿ ರೀತಿಯಲ್ಲಿ ವರ್ತಿಸಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ತಾವು ಕೂಡ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದರು.

ಅದೇ ರೀತಿಯಲ್ಲಿ ಭಾನುವಾರ ನಗರಾದ್ಯಂತ ಈದ್ ಹಬ್ಬವನ್ನು ನಗರದಾದ್ಯಂತ್ಯ ಆಯೋಜನೆಯಾಗಿತ್ತು. ಈ ವೇಳೆ ಹಿಂದೂಗಳೂ ಸಹಕರಿಸಿ ಸಂಭ್ರಮಿಸಿದ್ದರು. ಆದರೆ, ಶಾಂತಿನಗರದಲ್ಲಿ ಮಾತ್ರ ಕಲ್ಲು ತೂರಿ ಪ್ರಚೋದಿಸುವ ಮೂಲಕ ಅಶಾಂತಿ ಸೃಷ್ಟಿಸಲಾಯಿತು. ಮೊದಮೊದಲು ಈ ಕಲ್ಲು ತೂರಾಟದ ಹಿಂದೆ ಯಾರಿದ್ದಾರೆಂಬುದು ತಿಳಿದಿರಲಿಲ್ಲ.

ಈ ಮಧ್ಯೆ ಮೊದಲ ಕಲ್ಲು ಎಲ್ಲಿಂದ ಬಂದಿತು ಎಂಬುದಕ್ಕೆ ಈಗ ಸದ್ಯ ರೋಹನ್‌ ಕಡೆಗೆ ಬೆರಳು ಮಾಡಿ ತೋರಿಸಿದೆ. ಕಲ್ಲು ತೂರಿದ ಬಳಿಕ ಭಾನುವಾರ ಸಂಜೆ 5.45ರ ವೇಳೆಯಲ್ಲಿ ಬಜರಂಗದಳದ ಒಂದು ಗುಂಪು ಮರದ ದೊಣ್ಣೆಗಳನ್ನು ಹಿಡಿದು ಓಡಾಡುತ್ತಾ ಗಲಭೆಗೆ ಪ್ರಚೋದಿಸುತ್ತಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಪ್ರಚೋದನೆಯ ಕೃತ್ಯವನ್ನು ತಡೆಯಲು ಪೊಲೀಸ್ ಅಧಿಕಾರಿಗಳು ನಡೆಸಿರುವ ಪ್ರಯತ್ನವನ್ನೂ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್‌ ಆಗಿದೆ.

 

ಈ ವಿಡಿಯೋದಲ್ಲಿ ರೋಹನ್ ಜೊತೆಗೆ ಇತರರೂ ಮರದ ತಡಿಕೆಯೊಂದನ್ನು ಮುರಿದು, ಕೋಲುಗಳನ್ನು ಹಿಡಿದುಕೊಂಡು ಓಡಾಡುತ್ತಿರುವುದನ್ನು ಇಲ್ಲಿ ಕಾಣಬಹುದು. ಅದರಲ್ಲಿ ಸಿ.ಆರ್. ಎಂಬ ಅಕ್ಷರಗಳನ್ನು ಬರೆದಿರುವ ಟೀ ಶರ್ಟ್ ಧರಿಸಿರುವಾತನೇ ರೋಹನ್ ಅಲಿಯಾಸ್ ರೋಯಾ. ಈತ ಬಜರಂಗದಳದಲ್ಲಿ ಸಕ್ರಿಯನಾಗಿದ್ದಾನೆ ಎಂದು ಬಲ್ಲಮೂಲಗಳು ತಿಳಿಸಿವೆ.

ರಾಗಿಗುಡ್ಡದಲ್ಲಿ ಆಯೋಜಿಸಿದ್ದ ಈದ್ ಮಿಲಾದ್ ಮೆರವಣಿಗೆಯು ದೊಡ್ಡ ಪ್ರಮಾಣದಲ್ಲಿ ಶುರುವಾಗಿತ್ತು. ರೋಹನ್ ಮತ್ತು ಆತನ ಗುಂಪು ಮೆರವಣಿಗೆಯ ಮೇಲೆ ಕಲ್ಲು ಎಸೆಯುವ ಮೂಲಕ ಕೋಮು ವೈಮನಸ್ಯಕ್ಕೆ ಕಾರಣವಾಗಿದೆ.

”ನಗರದಲ್ಲಿ ಹಿಂದೂ ಗಣಪತಿ ಆಚರಣೆಯ ವೇಳೆ ವಿವಾದಾತ್ಮಕ ಮಹಾದ್ವಾರಗಳನ್ನು ನಗರಸಭೆ ತೆಗೆಸಬೇಕು. ಪೊಲೀಸರು ಈ ಕುರಿತು ಹೆಚ್ಚಿನ ಕ್ರಮ ಜರುಗಿಸಲು ಅಸಾಧ್ಯವಾಗಿದೆ” ಎಂದೂ ಕೆಲವು ಪೊಲೀಸರು ಅಸಹಾಯಕತೆ ತೋಡಿಕೊಂಡಿದ್ದಾರೆ ಎಂದು ಈ ದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ತಲ್ವಾರು ಹಿಡಿದು ಉತ್ತರ ಕೊಡಲು ಗೊತ್ತಿದೆ; ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಲಾ ನಿಮಗೆ ಕೊಲ್ಲಿ ರಾಷ್ಟ್ರಗಳಿಂದ ಅಷ್ಟೋಂದು ಹಣ ಬರುತ್ತಿದೆ. ಮತ್ತೇಕೆ ಹೀಗೆ ಡಿಜಿಟಲ್ ಬಿಕ್ಷೆ ಬೇಡುವಿರಿ? ಪೊಲೀಸರಿಗೇ ಸಿಗದ ಸಾಕ್ಷಿಗಳು ನಿಮಗೆ ಹೇಗೆ ಸಿಗುತ್ತಿವೆ? ನಿಮ್ಮ ಅಂಕಣಗಳು, ಲೇಖನಗಳನ್ನು ನೋಡಿದರೇ ಆ ಗೌರಿ ಲಂಕೇಶ್ ಎಂತಹವಳು ಎಂಬ ಅರಿವಾಗುತ್ತದೆ. ನಿಮ್ಮಂತಹ ಹಿಂದೂ ವಿರೋಧಿಗಳನ್ನು ಬೆಂಬಲಿಸುವ ಸರ್ಕಾರವನ್ನು ಜನತೆ ಆರಿಸಿದ ಪರಿಣಾಮ ಕರ್ನಾಟಕದಲ್ಲಿ ಮಳೆ ಇಲ್ಲದೇ ಬರ ಬಂದಿರುವುದು. ಛೀ ಥೂ ನಿಮ್ಮಗಳ ಜನ್ಮಕ್ಕೆ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...