Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...