Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...