Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...