Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...