Homeಮುಖಪುಟಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ರಾಜ್ಯದಲ್ಲಿ 'ಲವ್ ಜಿಹಾದ್' ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆದಿತ್ತು.

- Advertisement -
- Advertisement -

“ಜೋಯಿಸ್ನಾ ಮೇರಿ ಜೋಸೆಫ್ ಅವರು ತಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಮಹಿಳೆ” ಎಂದು ಕೇರಳ ಹೈಕೋರ್ಟ್ ಹೇಳಿದೆ. ಜೋಯಿಸ್ನಾ ತಂದೆ ಜೋಸೆಫ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಕೇರಳ ಹೈಕೋರ್ಟ್ ಮಹತ್ವದ ಸೂಚನೆಗಳನ್ನು ನೀಡಿದೆ.

ಕೇರಳದ ಕ್ರಿಶ್ಚಿಯನ್ ಮಹಿಳೆ ಜೋಯಿಸ್ನಾ ಅವರು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ನಾಯಕ ಶೆಜಿನ್ ಅವರನ್ನು ಹೂಮಾಲೆ ವಿನಿಮಯ ಮಾಡಿಕೊಳ್ಳುವ ಮೂಲಕ ವಿವಾಹವಾದರು. ಇದನ್ನು ವಿರೋಧಿಸಿದ ಜೋಯಿಸ್ನಾ ತಂದೆ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಿದರು. (ಹೇಬಿಯಸ್ ಕಾರ್ಪಸ್ ಎನ್ನುವುದು ನ್ಯಾಯಾಲಯದ ಮುಂದೆ ನಿರ್ದಿಷ್ಟ ವ್ಯಕ್ತಿಯ ಹಾಜರಾತಿಗೆ ಸೂಚನೆ ನೀಡುವ ಅರ್ಜಿಯಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ, ಏಪ್ರಿಲ್ 19 ರಂದು ಜೋಯಿಸ್ನಾ ಅವರ ಪ್ರತಿಕ್ರಿಯೆಯನ್ನು ಆಲಿಸಿದ ಕೇರಳ ಹೈಕೋರ್ಟ್, ಜೋಯಿಸ್ನಾ ಮತ್ತು ಶೆಜಿನ್ ಒಟ್ಟಿಗೆ ಇರಲು ಅನುಮತಿ ನೀಡಿತು. ಶನಿವಾರ ನ್ಯಾಯಾಲಯದಿಂದ ಸಮನ್ಸ್ ಪಡೆದ ಜೋಯಿಸ್ನಾ ಅವರು ನ್ಯಾಯಮೂರ್ತಿಗಳಾದ ವಿಜಿ ಅರುಣ್, ಸಿಎಸ್ ಸುಧಾ ಅವರ ವಿಭಾಗೀಯ ಪೀಠದ ಮುಂದೆ ಹಾಜರಾಗಿದ್ದರು. ಪೀಠವು ನೇರವಾಗಿ ಜೋಯಿಸ್ನಾ ಅವರೊಂದಿಗೆ ಮಾತನಾಡಿತು. ತನ್ನ ಸ್ವಂತ ಇಚ್ಛೆಯಿಂದಲೇ ಮದುವೆಯಾಗಿದ್ದೇನೆ. ತನ್ನ ಮೇಲೆ ಯಾವುದೇ ಒತ್ತಡವಿಲ್ಲ ಎಂದು ನ್ಯಾಯಾಲಯಕ್ಕೆ ಜೋಯಿಸ್ನಾ ಸ್ಪಷ್ಟಪಡಿಸಿದರು.

“ಆಕೆಯನ್ನು ಅಪಹರಿಸಲಾಗಿದೆ. ಶೆಜಿನ್ ಮತ್ತು ಜೋಯಿಸ್ನಾ ದೇಶವನ್ನು ತೊರೆಯುವ ಸಾಧ್ಯತೆಯಿದೆ” ಎಂದು ಜೋಯಿಸ್ನಾ ತಂದೆ ಜೋಸೆಫ್ ನ್ಯಾಯಾಲಯಕ್ಕೆ ತಿಳಿಸಿದ್ದರು.

“ಅವರು ವಿದೇಶಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಆಕೆಗೆ ಬಿಟ್ಟದ್ದು” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಬ್ಬರು ವ್ಯಕ್ತಿಗಳು ಮದುವೆಯಾಗಲು ನಿರ್ಧರಿಸಿದಾಗ ಅದರ ಮಧ್ಯಸ್ಥಿಕೆ ವಹಿಸಲು ನ್ಯಾಯಾಲಯಕ್ಕೆ ಮಿತಿಗಳಿವೆ. ಜೋಯಿಸ್ನಾರನ್ನು ಬಲವಂತಪಡಿಸಲಾಗಿದೆ ಎಂದು ಹೇಳಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾದ ದಂಪತಿಗಳು ಮುಂದೆ ಏನು ಮಾಡಬೇಕೆಂದು ನಿರ್ಧರಿಸಲಿ. ಜೋಯಿಸ್ನಾ ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಮಹಿಳೆ. ಆಕೆಗೆ 26 ವರ್ಷ ವಯಸ್ಸು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಒಪ್ಪಿಕೊಂಡು ಮದುವೆಯಾಗಲು ನಿರ್ಧರಿಸಿದರೆ, ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಶೆಜಿನ್ ಮತ್ತು ಜೋಯಿಸ್ನಾ ಏಪ್ರಿಲ್ 12ರಂದು ಹೂಮಾಲೆಗಳನ್ನು ವಿನಿಮಯ ಮಾಡಿಕೊಂಡಿದ್ದರು. ಮದುವೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದರು. ಜೋಯಿಸ್ನಾರನ್ನು ಆಕೆಯ ತಾಯಿಯ ಮನೆಗೆ ಕರೆತರುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಆಕೆಯ ತಂದೆ ಜೋಸೆಫ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯದಲ್ಲಿ ‘ಲವ್ ಜಿಹಾದ್’ ನಡೆಯುತ್ತಿದೆ ಎಂದು ಹೇಳಿದ ಸಿಪಿಐ(ಎಂ) ನಾಯಕರೊಬ್ಬರು ಜೋಯಿಸ್ನಾ ವಿವಾಹವನ್ನು ಉಲ್ಲೇಖಿಸಿದ ನಂತರ ಪ್ರಕರಣವು ಮಾಧ್ಯಮಗಳ ಗಮನ ಸೆಳೆಯಿತು.

‘ಲವ್-ಜಿಹಾದ್’ ಎಂಬುದು ಬಲಪಂಥೀಯರು ಹರಡಿರುವ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಹಿಂದೂ ಯುವತಿಯರನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಮಾಡುತ್ತಾರೆಂದು ಹಬ್ಬಿಸಲಾಗಿದೆ. ಜೋಯಿಸ್ನಾ ವಿಚಾರದಲ್ಲಿಯೂ ಹೀಗೆಯೇ ಆಗಿದ್ದು, ಆದರೆ ಜೋಯಿಸ್ನಾ ತನ್ನ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದು ಸ್ಪಷ್ಟವಾಗಿದೆ.

ಜೋಯಿಸ್ನಾ ಅವರೊಂದಿಗೆ ಓಡಿಹೋಗುವ ಮೂಲಕ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವಿನ “ಕೋಮು ಸೌಹಾರ್ದತೆಯನ್ನು ಕದಡುವ” ಶೆಜಿನ್ ವಿರುದ್ಧ ಪಕ್ಷವು ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಪಿಐ (ಎಂ) ಕೋಯಿಕೋಡ್‌‌ ಜಿಲ್ಲಾ ಕಾರ್ಯದರ್ಶಿ ಜಾರ್ಜ್ ಎಂ ಥಾಮಸ್ ಹೇಳಿದಾಗ ವಿಷಯ ವಿವಾದದ ಸ್ವರೂಪ ಪಡೆಯಿತು.

“ಇಬ್ಬರು ಪ್ರೀತಿಸುತ್ತಿದ್ದರೆ, ಶೆಜಿನ್ ಪಕ್ಷಕ್ಕೆ ತಿಳಿಸಬೇಕಾಗಿತ್ತು, ಆದರೆ ಆತ ಹಾಗೆ ಮಾಡದೆ ಜೋಯಿಸ್ನಾ ಜೊತೆ ಓಡಿಹೋದನು. ಇದು ಕೋಮು ಸೌಹಾರ್ದತೆಗೆ ಭಂಗ ತರಬಹುದು” ಎಂದಿದ್ದ ಜಾರ್ಜ್, “ಲವ್ ಜಿಹಾದ್ ನಡೆಯುತ್ತಿದೆ” ಎಂದೂ ಪ್ರತಿಪಾದಿಸಿದ್ದರು. ನಂತರ ಮೀಡಿಯಾ ಒನ್ ಜೊತೆ ಮಾತನಾಡಿದ ಅವರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ದೂರಿದ್ದರು.

ವರದಿ ಕೃಪೆ: ನ್ಯೂಸ್ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...