Homeಮುಖಪುಟಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

ಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

- Advertisement -
- Advertisement -

ಟ್ವಿಟರ್ ಇಂಡಿಯಾ ದೇಶದ ಹೊಸ ಐಟಿ ನಿಯಮಗಳ ಅಡಿಯಲ್ಲಿ ಅಗತ್ಯವಿರುವ ಕುಂದುಕೊರತೆಗಳ ಪರಿಹಾರಕ್ಕಾಗಿ ಭಾರತೀಯ ಅಧಿಕಾರಿಯನ್ನು ತನ್ನ ಸ್ಥಾನಿಕ ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿದೆ. ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ವಿನಯ್ ಪ್ರಕಾಶ್‌ರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿ ಎಂದು ತಿಳಿಸಿದೆ.

ಭಾರತದಲ್ಲಿ ಹೊಸ ಐಟಿ ನಿಯಮಗಳು ಜಾರಿಗೆ ಬರುತ್ತಿದ್ದಂತೆ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಸಾಕಷ್ಟು ಸಂಘರ್ಷ ನಡೆದಿದೆ. ಟ್ವಿಟರ್‌ ಇಂಡಿಯಾದ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸಿ, ಟ್ವಿಟರ್‌ ಎಂಡಿಯನ್ನು ಎರಡು -ಮೂರು ಬಾರಿ ವಿಚಾರಣೆ ನಡೆಸಲಾಗಿದೆ.

“ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ನಿಯಮ 4 (1) (ಡಿ) ಗೆ ಅನುಸಾರವಾಗಿ, 2021 ರ ಮೇ 11 ರಿಂದ ಜೂನ್ 25, 2021 ರವರೆಗಿನ ಪ್ರಾಥಮಿಕ ವರದಿಯನ್ನು ಜುಲೈ 11, 2021 ರಂದು ನಮ್ಮ ಪ್ರಕಟಿಸಿದ್ದೇವೆ” ಎಂದು ಟ್ವಿಟರ್‌ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಐಟಿ ನಿಯಮದ ಪ್ರಕಾರ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

ಈ ತಿಂಗಳ ಆರಂಭದಲ್ಲಿ, ಶೀಘ್ರದಲ್ಲೇ ಹೊಸ ಐಟಿ ನಿಯಮಗಳನ್ನು ಅನುಸರಿಸಲು ಇತರ ಇಬ್ಬರು ಅಧಿಕಾರಿಗಳನ್ನು ತಾತ್ಕಾಲಿಕವಾಗಿ ನೇಮಿಸುವುದಾಗಿ ಟ್ವಿಟರ್‌ ಹೇಳಿತ್ತು. ದೇಶದಲ್ಲಿ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲು ದೆಹಲಿ ಹೈಕೋರ್ಟ್‌ನಿಂದ ಎಂಟು ವಾರಗಳ ಕಾಲಾವಕಾಶ ಕೋರಿತ್ತು. ಜುಲೈ 11 ರೊಳಗೆ ತನ್ನ ಪ್ರಾಥಮಿಕ ವರದಿಯನ್ನು ಸಾರ್ವಜನಿಕಗೊಳಿಸುವುದಾಗಿ ತಿಳಿಸಿತ್ತು. ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಗುರುವಾರ ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಭಾರತದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದಿದ್ದರೆ ಟ್ವಿಟರ್‌ಗೆ ಕಾನೂನು ರಕ್ಷಣೆ ಸಿಗುವುದಿಲ್ಲ ಎಂದು ತಿಳಿಸಿತ್ತು.

ಜೂನ್‌ನಲ್ಲಿ, ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಮಕ್ಕಳ ಅಶ್ಲೀಲ ವಿಷಯದ ಕುರಿತ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಗಾಜಿಯಾಬಾದ್, ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಟ್ವಿಟರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ನಾಯಕರು ಮಾಡಿದ್ದ “ಕಾಂಗ್ರೆಸ್ ಟೂಲ್‌ಕಿಟ್” ಟ್ವೀಟ್‌ಗಳನ್ನು ಟ್ವಿಟರ್‌ “ತಿರುಚಿದ ಮಾಧ್ಯಮ” (manipulated media) ಎಂದು ಕರೆದಿತ್ತು. ಅದರ ಬಳಿಕ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಘರ್ಷಣೆ ನಡೆಯುತ್ತಲೆ ಇದೆ.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...