Homeಮುಖಪುಟಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

ಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

- Advertisement -
- Advertisement -

ಟ್ವಿಟರ್ ಇಂಡಿಯಾ ದೇಶದ ಹೊಸ ಐಟಿ ನಿಯಮಗಳ ಅಡಿಯಲ್ಲಿ ಅಗತ್ಯವಿರುವ ಕುಂದುಕೊರತೆಗಳ ಪರಿಹಾರಕ್ಕಾಗಿ ಭಾರತೀಯ ಅಧಿಕಾರಿಯನ್ನು ತನ್ನ ಸ್ಥಾನಿಕ ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿದೆ. ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ವಿನಯ್ ಪ್ರಕಾಶ್‌ರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿ ಎಂದು ತಿಳಿಸಿದೆ.

ಭಾರತದಲ್ಲಿ ಹೊಸ ಐಟಿ ನಿಯಮಗಳು ಜಾರಿಗೆ ಬರುತ್ತಿದ್ದಂತೆ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಸಾಕಷ್ಟು ಸಂಘರ್ಷ ನಡೆದಿದೆ. ಟ್ವಿಟರ್‌ ಇಂಡಿಯಾದ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸಿ, ಟ್ವಿಟರ್‌ ಎಂಡಿಯನ್ನು ಎರಡು -ಮೂರು ಬಾರಿ ವಿಚಾರಣೆ ನಡೆಸಲಾಗಿದೆ.

“ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ನಿಯಮ 4 (1) (ಡಿ) ಗೆ ಅನುಸಾರವಾಗಿ, 2021 ರ ಮೇ 11 ರಿಂದ ಜೂನ್ 25, 2021 ರವರೆಗಿನ ಪ್ರಾಥಮಿಕ ವರದಿಯನ್ನು ಜುಲೈ 11, 2021 ರಂದು ನಮ್ಮ ಪ್ರಕಟಿಸಿದ್ದೇವೆ” ಎಂದು ಟ್ವಿಟರ್‌ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಐಟಿ ನಿಯಮದ ಪ್ರಕಾರ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

ಈ ತಿಂಗಳ ಆರಂಭದಲ್ಲಿ, ಶೀಘ್ರದಲ್ಲೇ ಹೊಸ ಐಟಿ ನಿಯಮಗಳನ್ನು ಅನುಸರಿಸಲು ಇತರ ಇಬ್ಬರು ಅಧಿಕಾರಿಗಳನ್ನು ತಾತ್ಕಾಲಿಕವಾಗಿ ನೇಮಿಸುವುದಾಗಿ ಟ್ವಿಟರ್‌ ಹೇಳಿತ್ತು. ದೇಶದಲ್ಲಿ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲು ದೆಹಲಿ ಹೈಕೋರ್ಟ್‌ನಿಂದ ಎಂಟು ವಾರಗಳ ಕಾಲಾವಕಾಶ ಕೋರಿತ್ತು. ಜುಲೈ 11 ರೊಳಗೆ ತನ್ನ ಪ್ರಾಥಮಿಕ ವರದಿಯನ್ನು ಸಾರ್ವಜನಿಕಗೊಳಿಸುವುದಾಗಿ ತಿಳಿಸಿತ್ತು. ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಗುರುವಾರ ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಭಾರತದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದಿದ್ದರೆ ಟ್ವಿಟರ್‌ಗೆ ಕಾನೂನು ರಕ್ಷಣೆ ಸಿಗುವುದಿಲ್ಲ ಎಂದು ತಿಳಿಸಿತ್ತು.

ಜೂನ್‌ನಲ್ಲಿ, ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಮಕ್ಕಳ ಅಶ್ಲೀಲ ವಿಷಯದ ಕುರಿತ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಗಾಜಿಯಾಬಾದ್, ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಟ್ವಿಟರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ನಾಯಕರು ಮಾಡಿದ್ದ “ಕಾಂಗ್ರೆಸ್ ಟೂಲ್‌ಕಿಟ್” ಟ್ವೀಟ್‌ಗಳನ್ನು ಟ್ವಿಟರ್‌ “ತಿರುಚಿದ ಮಾಧ್ಯಮ” (manipulated media) ಎಂದು ಕರೆದಿತ್ತು. ಅದರ ಬಳಿಕ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಘರ್ಷಣೆ ನಡೆಯುತ್ತಲೆ ಇದೆ.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...