Homeಮುಖಪುಟಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

ಟ್ವಿಟರ್ V/s ಕೇಂದ್ರ: ಕುಂದುಕೊರತೆ ನಿವಾರಣೆಗೆ ಭಾರತದ ಅಧಿಕಾರಿಯನ್ನು ನೇಮಿಸಿದ ಟ್ವಿಟರ್

- Advertisement -
- Advertisement -

ಟ್ವಿಟರ್ ಇಂಡಿಯಾ ದೇಶದ ಹೊಸ ಐಟಿ ನಿಯಮಗಳ ಅಡಿಯಲ್ಲಿ ಅಗತ್ಯವಿರುವ ಕುಂದುಕೊರತೆಗಳ ಪರಿಹಾರಕ್ಕಾಗಿ ಭಾರತೀಯ ಅಧಿಕಾರಿಯನ್ನು ತನ್ನ ಸ್ಥಾನಿಕ ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿದೆ. ಟ್ವಿಟರ್ ತನ್ನ ವೆಬ್‌ಸೈಟ್‌ನಲ್ಲಿ ವಿನಯ್ ಪ್ರಕಾಶ್‌ರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿ ಎಂದು ತಿಳಿಸಿದೆ.

ಭಾರತದಲ್ಲಿ ಹೊಸ ಐಟಿ ನಿಯಮಗಳು ಜಾರಿಗೆ ಬರುತ್ತಿದ್ದಂತೆ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಸಾಕಷ್ಟು ಸಂಘರ್ಷ ನಡೆದಿದೆ. ಟ್ವಿಟರ್‌ ಇಂಡಿಯಾದ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸಿ, ಟ್ವಿಟರ್‌ ಎಂಡಿಯನ್ನು ಎರಡು -ಮೂರು ಬಾರಿ ವಿಚಾರಣೆ ನಡೆಸಲಾಗಿದೆ.

“ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ನಿಯಮ 4 (1) (ಡಿ) ಗೆ ಅನುಸಾರವಾಗಿ, 2021 ರ ಮೇ 11 ರಿಂದ ಜೂನ್ 25, 2021 ರವರೆಗಿನ ಪ್ರಾಥಮಿಕ ವರದಿಯನ್ನು ಜುಲೈ 11, 2021 ರಂದು ನಮ್ಮ ಪ್ರಕಟಿಸಿದ್ದೇವೆ” ಎಂದು ಟ್ವಿಟರ್‌ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ಐಟಿ ನಿಯಮದ ಪ್ರಕಾರ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

ಈ ತಿಂಗಳ ಆರಂಭದಲ್ಲಿ, ಶೀಘ್ರದಲ್ಲೇ ಹೊಸ ಐಟಿ ನಿಯಮಗಳನ್ನು ಅನುಸರಿಸಲು ಇತರ ಇಬ್ಬರು ಅಧಿಕಾರಿಗಳನ್ನು ತಾತ್ಕಾಲಿಕವಾಗಿ ನೇಮಿಸುವುದಾಗಿ ಟ್ವಿಟರ್‌ ಹೇಳಿತ್ತು. ದೇಶದಲ್ಲಿ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲು ದೆಹಲಿ ಹೈಕೋರ್ಟ್‌ನಿಂದ ಎಂಟು ವಾರಗಳ ಕಾಲಾವಕಾಶ ಕೋರಿತ್ತು. ಜುಲೈ 11 ರೊಳಗೆ ತನ್ನ ಪ್ರಾಥಮಿಕ ವರದಿಯನ್ನು ಸಾರ್ವಜನಿಕಗೊಳಿಸುವುದಾಗಿ ತಿಳಿಸಿತ್ತು. ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಗುರುವಾರ ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಭಾರತದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸದಿದ್ದರೆ ಟ್ವಿಟರ್‌ಗೆ ಕಾನೂನು ರಕ್ಷಣೆ ಸಿಗುವುದಿಲ್ಲ ಎಂದು ತಿಳಿಸಿತ್ತು.

ಜೂನ್‌ನಲ್ಲಿ, ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಮಕ್ಕಳ ಅಶ್ಲೀಲ ವಿಷಯದ ಕುರಿತ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಗಾಜಿಯಾಬಾದ್, ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಟ್ವಿಟರ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಬಿಜೆಪಿ ನಾಯಕರು ಮಾಡಿದ್ದ “ಕಾಂಗ್ರೆಸ್ ಟೂಲ್‌ಕಿಟ್” ಟ್ವೀಟ್‌ಗಳನ್ನು ಟ್ವಿಟರ್‌ “ತಿರುಚಿದ ಮಾಧ್ಯಮ” (manipulated media) ಎಂದು ಕರೆದಿತ್ತು. ಅದರ ಬಳಿಕ ಒಕ್ಕೂಟ ಸರ್ಕಾರ ಮತ್ತು ಟ್ವಿಟರ್‌ ನಡುವೆ ಘರ್ಷಣೆ ನಡೆಯುತ್ತಲೆ ಇದೆ.


ಇದನ್ನೂ ಓದಿ: ಮುಸ್ಲಿಂ ವೃದ್ಧರ ಮೇಲೆ ಹಲ್ಲೆ ಪ್ರಕರಣ: ಟ್ವಿಟರ್‌ ಇಂಡಿಯಾ ಎಂಡಿಗೆ ಯುಪಿ ಪೊಲೀಸರ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...