Homeಚಳವಳಿಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಇಂದು ಟ್ವಿಟ್ಟರ್ ಅಭಿಯಾನ

ಪ್ರೊ. ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಇಂದು ಟ್ವಿಟ್ಟರ್ ಅಭಿಯಾನ

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

- Advertisement -
- Advertisement -

ಪ್ರಾಧ್ಯಾಪಕ ಹಾಗೂ ಸಾಮಾಜಿಕ ಹೋರಾಟಗಾರ ಡಾ. ಆನಂದ್ ತೇಲ್ತುಂಬ್ಡೆ ಅವರ ಬಂಧನವನ್ನು ವಿರೋಧಿಸಿ “ಕರ್ನಾಟಕ ಜನಶಕ್ತಿ” ಸಂಘಟನೆಯು ಇಂದು ಮಧ್ಯಾಹ್ನ 3 ಗಂಟೆಯಿಂದ ಟ್ವಿಟ್ಟರ್ ಅಭಿಯಾನ ಆರಂಭಿಸಿದೆ.

ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು. 2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ, 200 ವರ್ಷಗಳ ಹಿಂದೆ ಪೇಶ್ವಾಗಳ ವಿರುದ್ದದ ಯುದ್ದದಲ್ಲಿ ಜಯಗಳಿಸಿದ ಮಹರ್‌ ಜನಾಂಗದ 200ನೇ ವರ್ಷದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.

“ತೇಲ್ತುಂಬ್ಡೆ ಅವರೊಂದಿಗೆ ನಾವಿದ್ದೇವೆ, ಅವರ ಬಂಧನವೂ ಸಂವಿಧಾನ ತತ್ವಗಳ ಮೇಲಿನ ದಾಳಿಯಾಗಿದೆ. ಅವರ ಬಂಧನವೂ ಸರ್ಕಾರದ ಸರ್ವಾಧಿಕಾರವನ್ನು ತೋರಿಸುತ್ತದೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

ಅವರ ಬಂಧನವನ್ನು ವಿರೋಧಿಸಿ ಟ್ವಿಟ್ಟರಿನಲ್ಲಿ ಇಂದು ಸಂಜೆಗೆ #DoNotArrestAnand ಎಂಬ ಹ್ಯಾಶ್‌ಟ್ಯಾಗಲ್ಲಿ ಕರ್ನಾಟಕ ಜನಶಕ್ತಿ ಟ್ವಿಟ್ಟರ್ ಅಭಿಯಾನ ನಡೆಸಲಿದೆ.

ಹಿರಿಯ ಪ್ರಾದ್ಯಾಪಕರಾಗಿರುವ ಆನಂದ ತೇಲ್ತುಂಬ್ಡೆ ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಜಾತಿ-ವರ್ಗ ಮತ್ತು ಸಾರ್ವಜನಿಕ ನೀತಿಗಳಿಗೆ ಸಂಬಂದಿಸಿದಂತೆ ಅತ್ಯಂತ ಮಹತ್ವದ ಚಿಂತಕರಾದ ಆನಂದ ತೇಲ್ತುಂಬ್ಡೆ ಅವರು ಪ್ರಜಾಪ್ರಭುತ್ವ ಮತ್ತು ಶಿಕ್ಷಣ ಹಕ್ಕುಗಳ ಪರವಾದ ಹೋರಾಟಗಾರರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...