Homeಕರ್ನಾಟಕಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

- Advertisement -
- Advertisement -

ರಾಜ್ಯದ್ಯಂತ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ರಾಯಚೂರಿನಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಭಾನುವಾರ (ಫೆ.28) ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #StopIllegalLiquorSale, #ImplementHCOrder ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.

ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಬಕಾರಿ ಇಲಾಖೆ ಯಾವುದೇ ಮಾತುಕತೆಗೆ ಮುಂದಾಗಿರದ ಕಾರಣ ಪ್ರತಿಭಟನಾ ನಿರತರು ಟ್ವಿಟರ್ ಅಭಿಯಾನ ಕೈಗೊಂಡಿದ್ದಾರೆ.

ಹಕ್ಕೊತ್ತಾಯಗಳೇನು?

1. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
2. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ಅಭಿಯಾನದಲ್ಲಿ ನೂರಾರು ಮಂದಿ ಟ್ವೀಟ್ ಮಾಡುವ ಮೂಲಕ ಭಾಗಿಯಾಗಿದ್ದಾರೆ.  ಅನೇಕ ಸಂಘ ಸಂಸ್ಥೆಗಳು, ಯುಜನರು ಈ ಅಭಿಯಾನದ ಭಾಗವಾಗಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಈ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸಲು, ಹೈಕೋರ್ಟ್ ಆದೇಶ ಅನುಷ್ಟಾನ ಮಾಡುವಂತಹ ಮೂಲಭೂತವಾದದ್ದನ್ನು ಕೇಳಲು ಅಥವಾ ಮಹಿಳಾ ನಿಯೋಗವನ್ನು ಸಿಎಂ ಭೇಟಿ ಮಾಡಬೇಕೆಂದು ಒತ್ತಾಯಿಸುವುದಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ ಬೇಕೇ..? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

 

ರಾಜ್ಯ ಸರ್ಕಾರವು  ಸಂವಿಧಾನದ ಮದ್ಯಪಾನ ತಡೆ ಕಾಯ್ದೆ 47 ರ  ನೀತಿಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಅವುಗಳ ಆಶಯದ ಕಡೆಗೆ ಹೆಜ್ಜೆಹಾಕಬೇಕು. ಮದ್ಯಮಾರಾಟವನ್ನು ನಿಲ್ಲಿಸುವ ಕುರಿತು ಗ್ರಾಮಸಭೆಗಳ ನಿರ್ಣಯ, ಪರವಾನಗಿ ಹೊಂದಿರುವ ಮಳಿಗೆಗಳಿಗೂ ಸೇರಿದಂತೆ ಅಂತಿಮವಾಗಬೇಕು. 5 ರಿಂದ 7 ಮಹಿಳೆಯರ ಕಾವಲು ಪಡೆಯನ್ನು ಪ್ರತಿ ಹಳ್ಳಿಗಳಲ್ಲಿ ರಚಿಸುವ ಮೂಲಕ ಅಕ್ರಮ ಮದ್ಯ‌ ಮಾರಾಟವನ್ನು ತಡೆಯಬೇಕು ಎಂದು ಟ್ವಿಟರ್‌ ಅಭಿಯಾನದಲ್ಲಿ ಮದ್ಯ ನಿಷೇದ ಆಂದೋಲನ ಕರ್ನಾಟಕ ಹೇಳಿದೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಮತ್ತೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಕಳೆದ 6 ವರ್ಷಗಳಿಂದ ಕರ್ನಾಟಕದ ಗ್ರಾಮೀಣ ಮಹಿಳೆಯರು ಅಕ್ರಮ ಮದ್ಯ ಮಾರಾಟವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ಹೊರತಾಗಿಯೂ, ಸರ್ಕಾರವು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುತ್ತಿಲ್ಲ. ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಸಾಕಷ್ಟು ಯುವಜನತೆ ಕೂಡ ಮದ್ಯ ನಿಷೇದ ಆಂದೋಲನಕ್ಕೆ ಸಾಥ್ ನೀಡಿದ್ದು, ತಮ್ಮ ಟ್ವಿಟರ್‌ ಅಕೌಂಟ್‌ಗಳಲ್ಲಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಯಾಕೆ ಮುಖ್ಯಮಂತ್ರಿಗಳು ಮಹಿಳಾ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಮತ್ತು ಪ್ರಧಾನಿಯವರನ್ನು ಟ್ಯಾಗ್ ಮಾಡಿ ಫಣೀಶ್ ಕೃಷ್ಣ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...