Homeಕರ್ನಾಟಕಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

- Advertisement -
- Advertisement -

ರಾಜ್ಯದ್ಯಂತ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ರಾಯಚೂರಿನಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಭಾನುವಾರ (ಫೆ.28) ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #StopIllegalLiquorSale, #ImplementHCOrder ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.

ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಬಕಾರಿ ಇಲಾಖೆ ಯಾವುದೇ ಮಾತುಕತೆಗೆ ಮುಂದಾಗಿರದ ಕಾರಣ ಪ್ರತಿಭಟನಾ ನಿರತರು ಟ್ವಿಟರ್ ಅಭಿಯಾನ ಕೈಗೊಂಡಿದ್ದಾರೆ.

ಹಕ್ಕೊತ್ತಾಯಗಳೇನು?

1. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
2. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ಅಭಿಯಾನದಲ್ಲಿ ನೂರಾರು ಮಂದಿ ಟ್ವೀಟ್ ಮಾಡುವ ಮೂಲಕ ಭಾಗಿಯಾಗಿದ್ದಾರೆ.  ಅನೇಕ ಸಂಘ ಸಂಸ್ಥೆಗಳು, ಯುಜನರು ಈ ಅಭಿಯಾನದ ಭಾಗವಾಗಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಈ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸಲು, ಹೈಕೋರ್ಟ್ ಆದೇಶ ಅನುಷ್ಟಾನ ಮಾಡುವಂತಹ ಮೂಲಭೂತವಾದದ್ದನ್ನು ಕೇಳಲು ಅಥವಾ ಮಹಿಳಾ ನಿಯೋಗವನ್ನು ಸಿಎಂ ಭೇಟಿ ಮಾಡಬೇಕೆಂದು ಒತ್ತಾಯಿಸುವುದಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ ಬೇಕೇ..? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

 

ರಾಜ್ಯ ಸರ್ಕಾರವು  ಸಂವಿಧಾನದ ಮದ್ಯಪಾನ ತಡೆ ಕಾಯ್ದೆ 47 ರ  ನೀತಿಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಅವುಗಳ ಆಶಯದ ಕಡೆಗೆ ಹೆಜ್ಜೆಹಾಕಬೇಕು. ಮದ್ಯಮಾರಾಟವನ್ನು ನಿಲ್ಲಿಸುವ ಕುರಿತು ಗ್ರಾಮಸಭೆಗಳ ನಿರ್ಣಯ, ಪರವಾನಗಿ ಹೊಂದಿರುವ ಮಳಿಗೆಗಳಿಗೂ ಸೇರಿದಂತೆ ಅಂತಿಮವಾಗಬೇಕು. 5 ರಿಂದ 7 ಮಹಿಳೆಯರ ಕಾವಲು ಪಡೆಯನ್ನು ಪ್ರತಿ ಹಳ್ಳಿಗಳಲ್ಲಿ ರಚಿಸುವ ಮೂಲಕ ಅಕ್ರಮ ಮದ್ಯ‌ ಮಾರಾಟವನ್ನು ತಡೆಯಬೇಕು ಎಂದು ಟ್ವಿಟರ್‌ ಅಭಿಯಾನದಲ್ಲಿ ಮದ್ಯ ನಿಷೇದ ಆಂದೋಲನ ಕರ್ನಾಟಕ ಹೇಳಿದೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಮತ್ತೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಕಳೆದ 6 ವರ್ಷಗಳಿಂದ ಕರ್ನಾಟಕದ ಗ್ರಾಮೀಣ ಮಹಿಳೆಯರು ಅಕ್ರಮ ಮದ್ಯ ಮಾರಾಟವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ಹೊರತಾಗಿಯೂ, ಸರ್ಕಾರವು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುತ್ತಿಲ್ಲ. ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಸಾಕಷ್ಟು ಯುವಜನತೆ ಕೂಡ ಮದ್ಯ ನಿಷೇದ ಆಂದೋಲನಕ್ಕೆ ಸಾಥ್ ನೀಡಿದ್ದು, ತಮ್ಮ ಟ್ವಿಟರ್‌ ಅಕೌಂಟ್‌ಗಳಲ್ಲಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಯಾಕೆ ಮುಖ್ಯಮಂತ್ರಿಗಳು ಮಹಿಳಾ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಮತ್ತು ಪ್ರಧಾನಿಯವರನ್ನು ಟ್ಯಾಗ್ ಮಾಡಿ ಫಣೀಶ್ ಕೃಷ್ಣ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...