Homeಕರ್ನಾಟಕಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

- Advertisement -
- Advertisement -

ರಾಜ್ಯದ್ಯಂತ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ರಾಯಚೂರಿನಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಭಾನುವಾರ (ಫೆ.28) ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #StopIllegalLiquorSale, #ImplementHCOrder ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.

ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಬಕಾರಿ ಇಲಾಖೆ ಯಾವುದೇ ಮಾತುಕತೆಗೆ ಮುಂದಾಗಿರದ ಕಾರಣ ಪ್ರತಿಭಟನಾ ನಿರತರು ಟ್ವಿಟರ್ ಅಭಿಯಾನ ಕೈಗೊಂಡಿದ್ದಾರೆ.

ಹಕ್ಕೊತ್ತಾಯಗಳೇನು?

1. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
2. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ಅಭಿಯಾನದಲ್ಲಿ ನೂರಾರು ಮಂದಿ ಟ್ವೀಟ್ ಮಾಡುವ ಮೂಲಕ ಭಾಗಿಯಾಗಿದ್ದಾರೆ.  ಅನೇಕ ಸಂಘ ಸಂಸ್ಥೆಗಳು, ಯುಜನರು ಈ ಅಭಿಯಾನದ ಭಾಗವಾಗಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಈ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸಲು, ಹೈಕೋರ್ಟ್ ಆದೇಶ ಅನುಷ್ಟಾನ ಮಾಡುವಂತಹ ಮೂಲಭೂತವಾದದ್ದನ್ನು ಕೇಳಲು ಅಥವಾ ಮಹಿಳಾ ನಿಯೋಗವನ್ನು ಸಿಎಂ ಭೇಟಿ ಮಾಡಬೇಕೆಂದು ಒತ್ತಾಯಿಸುವುದಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ ಬೇಕೇ..? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

 

ರಾಜ್ಯ ಸರ್ಕಾರವು  ಸಂವಿಧಾನದ ಮದ್ಯಪಾನ ತಡೆ ಕಾಯ್ದೆ 47 ರ  ನೀತಿಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಅವುಗಳ ಆಶಯದ ಕಡೆಗೆ ಹೆಜ್ಜೆಹಾಕಬೇಕು. ಮದ್ಯಮಾರಾಟವನ್ನು ನಿಲ್ಲಿಸುವ ಕುರಿತು ಗ್ರಾಮಸಭೆಗಳ ನಿರ್ಣಯ, ಪರವಾನಗಿ ಹೊಂದಿರುವ ಮಳಿಗೆಗಳಿಗೂ ಸೇರಿದಂತೆ ಅಂತಿಮವಾಗಬೇಕು. 5 ರಿಂದ 7 ಮಹಿಳೆಯರ ಕಾವಲು ಪಡೆಯನ್ನು ಪ್ರತಿ ಹಳ್ಳಿಗಳಲ್ಲಿ ರಚಿಸುವ ಮೂಲಕ ಅಕ್ರಮ ಮದ್ಯ‌ ಮಾರಾಟವನ್ನು ತಡೆಯಬೇಕು ಎಂದು ಟ್ವಿಟರ್‌ ಅಭಿಯಾನದಲ್ಲಿ ಮದ್ಯ ನಿಷೇದ ಆಂದೋಲನ ಕರ್ನಾಟಕ ಹೇಳಿದೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಮತ್ತೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಕಳೆದ 6 ವರ್ಷಗಳಿಂದ ಕರ್ನಾಟಕದ ಗ್ರಾಮೀಣ ಮಹಿಳೆಯರು ಅಕ್ರಮ ಮದ್ಯ ಮಾರಾಟವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ಹೊರತಾಗಿಯೂ, ಸರ್ಕಾರವು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುತ್ತಿಲ್ಲ. ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಸಾಕಷ್ಟು ಯುವಜನತೆ ಕೂಡ ಮದ್ಯ ನಿಷೇದ ಆಂದೋಲನಕ್ಕೆ ಸಾಥ್ ನೀಡಿದ್ದು, ತಮ್ಮ ಟ್ವಿಟರ್‌ ಅಕೌಂಟ್‌ಗಳಲ್ಲಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಯಾಕೆ ಮುಖ್ಯಮಂತ್ರಿಗಳು ಮಹಿಳಾ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಮತ್ತು ಪ್ರಧಾನಿಯವರನ್ನು ಟ್ಯಾಗ್ ಮಾಡಿ ಫಣೀಶ್ ಕೃಷ್ಣ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...