Homeಕರ್ನಾಟಕಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

- Advertisement -
- Advertisement -

ರಾಜ್ಯದ್ಯಂತ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ರಾಯಚೂರಿನಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಭಾನುವಾರ (ಫೆ.28) ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #StopIllegalLiquorSale, #ImplementHCOrder ಹ್ಯಾಷ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.

ಕಳೆದ 18 ದಿನಗಳಿಂದ ಮದ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಯುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಬಕಾರಿ ಇಲಾಖೆ ಯಾವುದೇ ಮಾತುಕತೆಗೆ ಮುಂದಾಗಿರದ ಕಾರಣ ಪ್ರತಿಭಟನಾ ನಿರತರು ಟ್ವಿಟರ್ ಅಭಿಯಾನ ಕೈಗೊಂಡಿದ್ದಾರೆ.

ಹಕ್ಕೊತ್ತಾಯಗಳೇನು?

1. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
2. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ಅಭಿಯಾನದಲ್ಲಿ ನೂರಾರು ಮಂದಿ ಟ್ವೀಟ್ ಮಾಡುವ ಮೂಲಕ ಭಾಗಿಯಾಗಿದ್ದಾರೆ.  ಅನೇಕ ಸಂಘ ಸಂಸ್ಥೆಗಳು, ಯುಜನರು ಈ ಅಭಿಯಾನದ ಭಾಗವಾಗಿದ್ದಾರೆ.

ಸ್ವರಾಜ್ ಇಂಡಿಯಾದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಈ ಅಭಿಯಾನವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಮದ್ಯ ಮಾರಾಟ ನಿಲ್ಲಿಸಲು, ಹೈಕೋರ್ಟ್ ಆದೇಶ ಅನುಷ್ಟಾನ ಮಾಡುವಂತಹ ಮೂಲಭೂತವಾದದ್ದನ್ನು ಕೇಳಲು ಅಥವಾ ಮಹಿಳಾ ನಿಯೋಗವನ್ನು ಸಿಎಂ ಭೇಟಿ ಮಾಡಬೇಕೆಂದು ಒತ್ತಾಯಿಸುವುದಕ್ಕೆ ಕರ್ನಾಟಕದಲ್ಲಿ ಪ್ರತಿಭಟನೆ ಬೇಕೇ..? ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

 

ರಾಜ್ಯ ಸರ್ಕಾರವು  ಸಂವಿಧಾನದ ಮದ್ಯಪಾನ ತಡೆ ಕಾಯ್ದೆ 47 ರ  ನೀತಿಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವ ಮೂಲಕ ಅವುಗಳ ಆಶಯದ ಕಡೆಗೆ ಹೆಜ್ಜೆಹಾಕಬೇಕು. ಮದ್ಯಮಾರಾಟವನ್ನು ನಿಲ್ಲಿಸುವ ಕುರಿತು ಗ್ರಾಮಸಭೆಗಳ ನಿರ್ಣಯ, ಪರವಾನಗಿ ಹೊಂದಿರುವ ಮಳಿಗೆಗಳಿಗೂ ಸೇರಿದಂತೆ ಅಂತಿಮವಾಗಬೇಕು. 5 ರಿಂದ 7 ಮಹಿಳೆಯರ ಕಾವಲು ಪಡೆಯನ್ನು ಪ್ರತಿ ಹಳ್ಳಿಗಳಲ್ಲಿ ರಚಿಸುವ ಮೂಲಕ ಅಕ್ರಮ ಮದ್ಯ‌ ಮಾರಾಟವನ್ನು ತಡೆಯಬೇಕು ಎಂದು ಟ್ವಿಟರ್‌ ಅಭಿಯಾನದಲ್ಲಿ ಮದ್ಯ ನಿಷೇದ ಆಂದೋಲನ ಕರ್ನಾಟಕ ಹೇಳಿದೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಮತ್ತೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಬಿಜೆಪಿ ಮೈತ್ರಿ ತೊರೆದು ಕಾಂಗ್ರೆಸ್ ಮೈತ್ರಿ ಸೇರಲಿರುವ BPF ಪಕ್ಷ

ಕಳೆದ 6 ವರ್ಷಗಳಿಂದ ಕರ್ನಾಟಕದ ಗ್ರಾಮೀಣ ಮಹಿಳೆಯರು ಅಕ್ರಮ ಮದ್ಯ ಮಾರಾಟವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈಕೋರ್ಟ್ ಆದೇಶದ ಹೊರತಾಗಿಯೂ, ಸರ್ಕಾರವು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುತ್ತಿಲ್ಲ. ಮಾನವ ಜೀವನಕ್ಕಿಂತ ಮದ್ಯದಿಂದ ಬರುವ ಆದಾಯ ಮುಖ್ಯವಾದದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವ್ಯಾಲಿ ಆಫ್ ಸೈಲೆನ್ಸ್ ಸಂಸ್ಥೆ ತನ್ನ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಸಾಕಷ್ಟು ಯುವಜನತೆ ಕೂಡ ಮದ್ಯ ನಿಷೇದ ಆಂದೋಲನಕ್ಕೆ ಸಾಥ್ ನೀಡಿದ್ದು, ತಮ್ಮ ಟ್ವಿಟರ್‌ ಅಕೌಂಟ್‌ಗಳಲ್ಲಿ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಯಾಕೆ ಮುಖ್ಯಮಂತ್ರಿಗಳು ಮಹಿಳಾ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿಲ್ಲ ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಮತ್ತು ಪ್ರಧಾನಿಯವರನ್ನು ಟ್ಯಾಗ್ ಮಾಡಿ ಫಣೀಶ್ ಕೃಷ್ಣ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಜಾಬ್‌ಕಿ ಬಾತ್, ಕಿಸಾನ್ ಕಿ ಬಾತ್ ಬೇಕು: ಮೋದಿ ವಿರುದ್ಧ ಸಿಡಿದೆದ್ದ ಯುವಜನರು –…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....