Homeಮುಖಪುಟನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಕಂಗನಾ ರಣಾವತ್ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಆರೋಪಿಸಲಾಗಿದೆ.

- Advertisement -
- Advertisement -

ತನ್ನ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಕಂಗನಾ ರಣಾವತ್ ಆರೋಪಿಸಿದ್ದು, ಈ ಹಿಂದೆ ತಾಂಡವ್ ವೆಬ್‌ ಸೀರೀಸ್ ವಿರುದ್ಧ ಹಿಂಸೆಗೆ ಕರೆ ನೀಡುವ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದರು. ಇದನ್ನು ಅನುಸರಿಸಿ ಟ್ವಿಟರ್ ಕಂಪನಿ ಈ ಕ್ರಮವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಅಮೇಜಾನ್ ಪ್ರೈಮ್‌‌ನಲ್ಲಿ ಬಿಡುಗಡೆಯಾದ ’ತಾಂಡವ್’ ವೆಬ್‌‌ ಸೀರಿಸ್‌‌‌ನ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ವಿವಾದಾತ್ಮಕ ನಟಿ ಕಂಗನಾ ರಾಣಾವತ್‌, “ಅವರ ತಲೆಗಳನ್ನು ಕತ್ತರಿಸುವ ಸಮಯ” ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದರು. ಕಂಗನಾ ಈ ಟ್ವೀಟನ್ನು ನಂತರ ಡಿಲೀಟ್ ಮಾಡಿದ್ದಾರಾದರೂ, ಅಷ್ಟರಲ್ಲೇ ಅದರ ಸ್ಕ್ರೀನ್ ಶಾರ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು ‌ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ಟ್ವೀಟ್ಟರ್‌ನಲ್ಲಿ ತಾಂಡವ್‌ ವೆಬ್ ಸಿರೀಸ್ ಬಗ್ಗೆ ಟ್ವೀಟ್ ಮಾಡಿದ್ದ ದಿ ಅತುಲ್ ಮಿಶ್ರಾ( @TheAtulMishra) ಎಂಬವರಿಗೆ ಪ್ರತಿಕ್ರಿಯಿಸಿದ ಕಂಗನಾ, “ಭಗವಾನ್‌ ಕೃಷ್ಣ ಶಿಶುಪಾಲ ಮಾಡಿದ್ದ 99 ಪಾಪಗಳನ್ನು ಕ್ಷಮಿಸಿದ್ದರೂ ಕೂಡಾ.. ಮೊದಲು ಶಾಂತಿ ನಂತರ ಕ್ರಾಂತಿಯಾಗಬೇಕು. ಅವರ ತಲೆಗಳನ್ನು ಕತ್ತರಿಸುವ ಸಮಯವಾಗಿದೆ, ಜೈ ಶ್ರೀ ಕೃಷ್ಣ” ಎಂದು ಹಿಂಸೆಗೆ ಕರೆ ನೀಡಿದ್ದಾರೆ. ಅವರು ಅತುಲ್ ಮಿಶ್ರ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ಮಾತ್ರವಲ್ಲದೆ, ಅದನ್ನು ರೀಟ್ವೀಟ್ ಕೂಡಾ ಮಾಡಿದ್ದರು.

ಇದಾದ ನಂತರ ಕಂಗನಾ ಅವರ ಟ್ವಿಟರ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

“ಕೆಲವು ಉದಾರವಾದಿಗಳು ತಮ್ಮ ಸಂಬಂಧಿ ಜ್ಯಾಕ್ (ಟ್ವಿಟರ್ ಸಿಇಒ) ಬಳಿ ಅತ್ತು-ಕರೆದು ನನ್ನ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಮಾಡಿದ್ದರು. ಜೊತೆಗೆ ನನ್ನ ಖಾತೆಯನ್ನು ನಿರ್ಬಂಧಿಸುವುದಾಗಿ ನನಗೆ ಬೆದರಿಕೆ ಹಾಕುತ್ತಿದ್ದಾರೆ. ಹಾಗಾಗಿ ನನ್ನ ಸಾಮಾಜಿಕ ಮಾಧ್ಯಮ ಖಾತೆ ದೇಶಕ್ಕಾಗಿ ಯಾವ ಕ್ಷಣದಲ್ಲಾದರೂ ಮಡಿಯಬಹುದು (ಹುತಾತ್ಮ) ಹೊಂದಬಹುದು. ಆದರೂ ಮತ್ತೊಮ್ಮೆ ನನ್ನ ಚಿತ್ರಗಳ ಮೂಲಕ ನನ್ನ ದೇಶಭಕ್ತಿ ಹೊರಬರಲಿದೆ. ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಈ ಮೂಲಕ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಕಂಗನಾ, ಸೇಡು ತೀರಿಸಿಕೊಳ್ಳುತ್ತೇನೆ ಎನ್ನುವಂತೆ ಟ್ವೀಟ್ ಮಾಡಿದ್ದಾರೆ.

ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿರುವ ಸೈಫ್ ಅಲಿಖಾನ್ ಮತ್ತು ಡಿಂಪಲ್ ಕಪಾಡಿಯ ನಟಿಸಿರುವ ಹೊಸ ವೆಬ್ ಸೀರೀಸ್ ಆದ‌ ‘ತಾಂಡವ್‌’ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂಬ ಆರೋಪವೆದ್ದಿದೆ. ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್, ಇದರ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ವಿರುದ್ಧ ದೂರು ದಾಖಲಿಸಿದ್ದರು. ಅಲ್ಲದೆ ಉತ್ತರ ಪ್ರದೇಶದಲ್ಲಿಯೂ ಪ್ರಕರಣ ದಾಖಲಾಗಿದ್ದು, ಬಂಧನದ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೇ ತಾಂಡವ್ ಚಿತ್ರತಂಡ ಕ್ಷಮೆಯನ್ನೂ ಕೇಳಿತ್ತು. ಜೊತೆಗೆ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿಯೂ ಹೇಳಿತ್ತು.


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...