Homeಮುಖಪುಟನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಕಂಗನಾ ರಣಾವತ್ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಆರೋಪಿಸಲಾಗಿದೆ.

- Advertisement -
- Advertisement -

ತನ್ನ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಕಂಗನಾ ರಣಾವತ್ ಆರೋಪಿಸಿದ್ದು, ಈ ಹಿಂದೆ ತಾಂಡವ್ ವೆಬ್‌ ಸೀರೀಸ್ ವಿರುದ್ಧ ಹಿಂಸೆಗೆ ಕರೆ ನೀಡುವ ಪ್ರಚೋದನಾತ್ಮಕ ಟ್ವೀಟ್ ಮಾಡಿದ್ದರು. ಇದನ್ನು ಅನುಸರಿಸಿ ಟ್ವಿಟರ್ ಕಂಪನಿ ಈ ಕ್ರಮವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಅಮೇಜಾನ್ ಪ್ರೈಮ್‌‌ನಲ್ಲಿ ಬಿಡುಗಡೆಯಾದ ’ತಾಂಡವ್’ ವೆಬ್‌‌ ಸೀರಿಸ್‌‌‌ನ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ವಿವಾದಾತ್ಮಕ ನಟಿ ಕಂಗನಾ ರಾಣಾವತ್‌, “ಅವರ ತಲೆಗಳನ್ನು ಕತ್ತರಿಸುವ ಸಮಯ” ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದರು. ಕಂಗನಾ ಈ ಟ್ವೀಟನ್ನು ನಂತರ ಡಿಲೀಟ್ ಮಾಡಿದ್ದಾರಾದರೂ, ಅಷ್ಟರಲ್ಲೇ ಅದರ ಸ್ಕ್ರೀನ್ ಶಾರ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು ‌ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ಟ್ವೀಟ್ಟರ್‌ನಲ್ಲಿ ತಾಂಡವ್‌ ವೆಬ್ ಸಿರೀಸ್ ಬಗ್ಗೆ ಟ್ವೀಟ್ ಮಾಡಿದ್ದ ದಿ ಅತುಲ್ ಮಿಶ್ರಾ( @TheAtulMishra) ಎಂಬವರಿಗೆ ಪ್ರತಿಕ್ರಿಯಿಸಿದ ಕಂಗನಾ, “ಭಗವಾನ್‌ ಕೃಷ್ಣ ಶಿಶುಪಾಲ ಮಾಡಿದ್ದ 99 ಪಾಪಗಳನ್ನು ಕ್ಷಮಿಸಿದ್ದರೂ ಕೂಡಾ.. ಮೊದಲು ಶಾಂತಿ ನಂತರ ಕ್ರಾಂತಿಯಾಗಬೇಕು. ಅವರ ತಲೆಗಳನ್ನು ಕತ್ತರಿಸುವ ಸಮಯವಾಗಿದೆ, ಜೈ ಶ್ರೀ ಕೃಷ್ಣ” ಎಂದು ಹಿಂಸೆಗೆ ಕರೆ ನೀಡಿದ್ದಾರೆ. ಅವರು ಅತುಲ್ ಮಿಶ್ರ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ಮಾತ್ರವಲ್ಲದೆ, ಅದನ್ನು ರೀಟ್ವೀಟ್ ಕೂಡಾ ಮಾಡಿದ್ದರು.

ಇದಾದ ನಂತರ ಕಂಗನಾ ಅವರ ಟ್ವಿಟರ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

“ಕೆಲವು ಉದಾರವಾದಿಗಳು ತಮ್ಮ ಸಂಬಂಧಿ ಜ್ಯಾಕ್ (ಟ್ವಿಟರ್ ಸಿಇಒ) ಬಳಿ ಅತ್ತು-ಕರೆದು ನನ್ನ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಮಾಡಿದ್ದರು. ಜೊತೆಗೆ ನನ್ನ ಖಾತೆಯನ್ನು ನಿರ್ಬಂಧಿಸುವುದಾಗಿ ನನಗೆ ಬೆದರಿಕೆ ಹಾಕುತ್ತಿದ್ದಾರೆ. ಹಾಗಾಗಿ ನನ್ನ ಸಾಮಾಜಿಕ ಮಾಧ್ಯಮ ಖಾತೆ ದೇಶಕ್ಕಾಗಿ ಯಾವ ಕ್ಷಣದಲ್ಲಾದರೂ ಮಡಿಯಬಹುದು (ಹುತಾತ್ಮ) ಹೊಂದಬಹುದು. ಆದರೂ ಮತ್ತೊಮ್ಮೆ ನನ್ನ ಚಿತ್ರಗಳ ಮೂಲಕ ನನ್ನ ದೇಶಭಕ್ತಿ ಹೊರಬರಲಿದೆ. ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಈ ಮೂಲಕ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಕಂಗನಾ, ಸೇಡು ತೀರಿಸಿಕೊಳ್ಳುತ್ತೇನೆ ಎನ್ನುವಂತೆ ಟ್ವೀಟ್ ಮಾಡಿದ್ದಾರೆ.

ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿರುವ ಸೈಫ್ ಅಲಿಖಾನ್ ಮತ್ತು ಡಿಂಪಲ್ ಕಪಾಡಿಯ ನಟಿಸಿರುವ ಹೊಸ ವೆಬ್ ಸೀರೀಸ್ ಆದ‌ ‘ತಾಂಡವ್‌’ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂಬ ಆರೋಪವೆದ್ದಿದೆ. ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್, ಇದರ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ವಿರುದ್ಧ ದೂರು ದಾಖಲಿಸಿದ್ದರು. ಅಲ್ಲದೆ ಉತ್ತರ ಪ್ರದೇಶದಲ್ಲಿಯೂ ಪ್ರಕರಣ ದಾಖಲಾಗಿದ್ದು, ಬಂಧನದ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೇ ತಾಂಡವ್ ಚಿತ್ರತಂಡ ಕ್ಷಮೆಯನ್ನೂ ಕೇಳಿತ್ತು. ಜೊತೆಗೆ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿಯೂ ಹೇಳಿತ್ತು.


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...