Homeಅಂತರಾಷ್ಟ್ರೀಯತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

ತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

- Advertisement -
- Advertisement -

ಬಿಲೇನಿಯರ್‌‌ ಎಲಾನ್ ಮಸ್ಕ್‌‌ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌‌ ಅನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದಲ್ಲೆ ಕಂಪೆನಿಯ ಸುಮಾರು 7,500 ಸಿಬ್ಬಂದಿಯನ್ನು ಶುಕ್ರವಾರ ವಜಾಗೊಳಿಸಿದೆ. “ಕಂಪೆನಿಯ ಸುಮಾರು 50% ದಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ” ಎಂದು ಸುದ್ದಿ ಸಂಸ್ಥೆ ಎಎಫ್‌ಫಿ ಹೇಳಿದೆ.

ಪ್ರಪಂಚದಾದ್ಯಂತದ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅವರು ತಮ್ಮ ಹತಾಶೆಯನ್ನು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. “ಟ್ವಿಟ್ಟರ್‌ನಲ್ಲಿ ನನ್ನ ಕೆಲಸವು ಕೊನೆಗೊಂಡಿದೆ ಎಂಬ ಸುದ್ದಿಯಿಂದ ನನಗೆ ತಲುಪಿದೆ. ಈ ಬಗ್ಗೆ ನಾನು ಎದೆಗುಂದಿದ್ದು, ಇದನ್ನು ನಾನು ವಿರೋಧಿಸುತ್ತಿದ್ದೇನೆ” ಎಂದು ಟ್ವಿಟರ್‌‌ನ ಕೆನಡಾ ಮತ್ತು ಅಮರಿಕದ ಸಾರ್ವಜನಿಕ ನೀತಿ ನಿರ್ದೇಶಕ ಮಿಚೆಲ್ ಆಸ್ಟಿನ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರದೃಷ್ಟವಶಾತ್ ಕಂಪನಿಯು ದಿನಕ್ಕೆ 40 ಲಕ್ಷ ಡಾಲರ್‌‌ನಷ್ಟು ಕಳೆದುಕೊಳ್ಳುತ್ತಿರುವಾಗ ಬೇರೆ ಯಾವುದೇ ಆಯ್ಕೆಯಿಲ್ಲ” ಎಂದು ಎಲಾನ್ ಮಸ್ಕ್‌‌ ಶುಕ್ರವಾರ ಸಂಜೆ ಈ ವಿಷಯದ ಕುರಿತು ತಮ್ಮ ಮೊದಲ ಕಾಮೆಂಟ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ವಜಾಗೊಳಿಸುವ ಮುನ್ನ, ಟ್ವಿಟರ್ ವಿಶ್ವಾದ್ಯಂತ ತನ್ನ ಕಚೇರಿಗಳಿಗೆ ಪ್ರವೇಶವನ್ನು ಮುಚ್ಚಿತ್ತು ಮತ್ತು ಇಮೇಲ್ ಮೂಲಕ ತಮ್ಮ ಭವಿಷ್ಯದ ಸುದ್ದಿಗಾಗಿ ಕಾಯಲು ಉದ್ಯೋಗಿಗಳನ್ನು ಮನೆಯಲ್ಲಿಯೇ ಇರುವಂತೆ ಕೇಳಿತ್ತು.

ಇದನ್ನೂ ಓದಿ: ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

“ಜನರನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ತುಂಬಾ ಅಮಾನವೀಯವಾಗಿದೆ. ಇದು ಕೂಲಿ ಪ್ರಯತ್ನದಂತೆ ತೋರುತ್ತದೆ, ಕಂಪೆನಿಯು ಏನು ಮಾಡಿಯಾದರೂ ಹಣ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೆಸರು ಹೇಳಲಿಚ್ಛಿಸದ ವಜಾಗೊಂಡ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಶತಕೋಟಿ ಡಾಲರ್‌ಗಳನ್ನು ಸಾಲ ಪಡೆದುಕೊಂಡು ಮಾಡಿದ್ದ ಒಪ್ಪಂದದಂತೆ 44 ಶತಕೋಟಿ ಡಾಲರ್‌ಗಳ ಬೃಹತ್ ಮೊತ್ತದವನ್ನು ಪಾವತಿಸಲು ಬೇಕಾಗಿ ಎಲಾನ್ ಮಸ್ಕ್‌‌ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇದಕ್ಕಾಗಿ ಅವರು ತಮ್ಮ ಎಲೆಕ್ಟ್ರಿಕ್ ಕಾರ್ ಕಂಪನಿಯಾದ ಟೆಸ್ಲಾದ 15.5 ಶತಕೋಟಿ ಡಾಲರ್‌‌ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕಂಪೆನಿಯಲ್ಲಿ ಉಳಿದ ಉದ್ಯೋಗಿಗಳ ಮೇಲೆ ಬಿರುಸಿನ ವೇಗವನ್ನು ಎಲಾನ್ ಮಸ್ಕ್‌‌ ಅವರ ತಂಡ ಹೇರುತ್ತಿವೆ ಎಂದು ಕಂಪನಿಯ ಮೂಲಗಳು ಹೇಳಿವೆ. ಟ್ವಿಟ್ಟರ್ ಉದ್ಯೋಗಿಗಳ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಟೆಸ್ಲಾ ಡೆವಲಪರ್‌ಗಳನ್ನು ಕರೆತರುತ್ತಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಭಾರಿ ಹಣ ಪಾವತಿಸಿ ಟ್ವಿಟರ್‌ ಅನ್ನು ಕೊಂಡುಕೊಂಡಿದ್ದ ಎಲಾನ್ ಮಸ್ಕ್‌‌ ಹಣ ಸಂಪಾದಿಸಲು ಹೊಸ ಮಾರ್ಗಗಳನ್ನು ಹುಡುಕಲು ಇದನ್ನೆಲ್ಲಾ ಮಾಡುತ್ತಿದ್ದು, ಬ್ಲೂಟಿಕ್‌‌ ಬಳಕೆದಾರರಿಗೆ ತಿಂಗಳಿಗೆ 8 ಡಾಲರ್‌‌ ಶುಲ್ಕ ವಿಧಿಸುವ ಕಲ್ಪನೆ ಕೂಡಾ ಇದರಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...