Homeಅಂತರಾಷ್ಟ್ರೀಯತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

ತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

- Advertisement -
- Advertisement -

ಬಿಲೇನಿಯರ್‌‌ ಎಲಾನ್ ಮಸ್ಕ್‌‌ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌‌ ಅನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದಲ್ಲೆ ಕಂಪೆನಿಯ ಸುಮಾರು 7,500 ಸಿಬ್ಬಂದಿಯನ್ನು ಶುಕ್ರವಾರ ವಜಾಗೊಳಿಸಿದೆ. “ಕಂಪೆನಿಯ ಸುಮಾರು 50% ದಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ” ಎಂದು ಸುದ್ದಿ ಸಂಸ್ಥೆ ಎಎಫ್‌ಫಿ ಹೇಳಿದೆ.

ಪ್ರಪಂಚದಾದ್ಯಂತದ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅವರು ತಮ್ಮ ಹತಾಶೆಯನ್ನು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. “ಟ್ವಿಟ್ಟರ್‌ನಲ್ಲಿ ನನ್ನ ಕೆಲಸವು ಕೊನೆಗೊಂಡಿದೆ ಎಂಬ ಸುದ್ದಿಯಿಂದ ನನಗೆ ತಲುಪಿದೆ. ಈ ಬಗ್ಗೆ ನಾನು ಎದೆಗುಂದಿದ್ದು, ಇದನ್ನು ನಾನು ವಿರೋಧಿಸುತ್ತಿದ್ದೇನೆ” ಎಂದು ಟ್ವಿಟರ್‌‌ನ ಕೆನಡಾ ಮತ್ತು ಅಮರಿಕದ ಸಾರ್ವಜನಿಕ ನೀತಿ ನಿರ್ದೇಶಕ ಮಿಚೆಲ್ ಆಸ್ಟಿನ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರದೃಷ್ಟವಶಾತ್ ಕಂಪನಿಯು ದಿನಕ್ಕೆ 40 ಲಕ್ಷ ಡಾಲರ್‌‌ನಷ್ಟು ಕಳೆದುಕೊಳ್ಳುತ್ತಿರುವಾಗ ಬೇರೆ ಯಾವುದೇ ಆಯ್ಕೆಯಿಲ್ಲ” ಎಂದು ಎಲಾನ್ ಮಸ್ಕ್‌‌ ಶುಕ್ರವಾರ ಸಂಜೆ ಈ ವಿಷಯದ ಕುರಿತು ತಮ್ಮ ಮೊದಲ ಕಾಮೆಂಟ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ವಜಾಗೊಳಿಸುವ ಮುನ್ನ, ಟ್ವಿಟರ್ ವಿಶ್ವಾದ್ಯಂತ ತನ್ನ ಕಚೇರಿಗಳಿಗೆ ಪ್ರವೇಶವನ್ನು ಮುಚ್ಚಿತ್ತು ಮತ್ತು ಇಮೇಲ್ ಮೂಲಕ ತಮ್ಮ ಭವಿಷ್ಯದ ಸುದ್ದಿಗಾಗಿ ಕಾಯಲು ಉದ್ಯೋಗಿಗಳನ್ನು ಮನೆಯಲ್ಲಿಯೇ ಇರುವಂತೆ ಕೇಳಿತ್ತು.

ಇದನ್ನೂ ಓದಿ: ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

“ಜನರನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ತುಂಬಾ ಅಮಾನವೀಯವಾಗಿದೆ. ಇದು ಕೂಲಿ ಪ್ರಯತ್ನದಂತೆ ತೋರುತ್ತದೆ, ಕಂಪೆನಿಯು ಏನು ಮಾಡಿಯಾದರೂ ಹಣ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೆಸರು ಹೇಳಲಿಚ್ಛಿಸದ ವಜಾಗೊಂಡ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಶತಕೋಟಿ ಡಾಲರ್‌ಗಳನ್ನು ಸಾಲ ಪಡೆದುಕೊಂಡು ಮಾಡಿದ್ದ ಒಪ್ಪಂದದಂತೆ 44 ಶತಕೋಟಿ ಡಾಲರ್‌ಗಳ ಬೃಹತ್ ಮೊತ್ತದವನ್ನು ಪಾವತಿಸಲು ಬೇಕಾಗಿ ಎಲಾನ್ ಮಸ್ಕ್‌‌ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇದಕ್ಕಾಗಿ ಅವರು ತಮ್ಮ ಎಲೆಕ್ಟ್ರಿಕ್ ಕಾರ್ ಕಂಪನಿಯಾದ ಟೆಸ್ಲಾದ 15.5 ಶತಕೋಟಿ ಡಾಲರ್‌‌ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕಂಪೆನಿಯಲ್ಲಿ ಉಳಿದ ಉದ್ಯೋಗಿಗಳ ಮೇಲೆ ಬಿರುಸಿನ ವೇಗವನ್ನು ಎಲಾನ್ ಮಸ್ಕ್‌‌ ಅವರ ತಂಡ ಹೇರುತ್ತಿವೆ ಎಂದು ಕಂಪನಿಯ ಮೂಲಗಳು ಹೇಳಿವೆ. ಟ್ವಿಟ್ಟರ್ ಉದ್ಯೋಗಿಗಳ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಟೆಸ್ಲಾ ಡೆವಲಪರ್‌ಗಳನ್ನು ಕರೆತರುತ್ತಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಭಾರಿ ಹಣ ಪಾವತಿಸಿ ಟ್ವಿಟರ್‌ ಅನ್ನು ಕೊಂಡುಕೊಂಡಿದ್ದ ಎಲಾನ್ ಮಸ್ಕ್‌‌ ಹಣ ಸಂಪಾದಿಸಲು ಹೊಸ ಮಾರ್ಗಗಳನ್ನು ಹುಡುಕಲು ಇದನ್ನೆಲ್ಲಾ ಮಾಡುತ್ತಿದ್ದು, ಬ್ಲೂಟಿಕ್‌‌ ಬಳಕೆದಾರರಿಗೆ ತಿಂಗಳಿಗೆ 8 ಡಾಲರ್‌‌ ಶುಲ್ಕ ವಿಧಿಸುವ ಕಲ್ಪನೆ ಕೂಡಾ ಇದರಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...