Homeಮುಖಪುಟಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

- Advertisement -
- Advertisement -

ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಕಂಪನಿ ತ್ಯಜಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರ ಮತ್ತೆ ಟ್ವಿಟರ್ ವಿರುದ್ಧ ಮುಗಿ ಬೀಳುವ ಸಾಧ್ಯತೆಗಳಿವೆ.

ಹೊಸ ಐಟಿ ನಿಯಮಗಳ ಪ್ರಕಾರ, ಭಾರತೀಯ ಬಳಕೆದಾರರಿಂದ ದೂರುಗಳನ್ನು ಪರಿಹರಿಸಲು ಮೈಕ್ರೊ-ಬ್ಲಾಗಿಂಗ್ ತಾಣಗಳು ಒಬ್ಬ ಕುಂದುಕೊರತೆ ಪರಿಶೀಲನಾ ಅಧಿಕಾರಿಯನ್ನು ಹೊಂದಿರಬೇಕು. ಈಗ  ಟ್ವಿಟರ್‌ನ ಈ ಅಧಿಕಾರಿ ಪದತ್ಯಾಗ ಮಾಡಿದ ಕಾರಣಕ್ಕೆ ಟ್ವಿಟರ್ ಇಂಡಿಯಾದಲ್ಲಿ ಆ ಸ್ಥಾನ ಖಾಲಿ ಉಳಿದಿದೆ ಎಂದು ಮೂಲವೊಂದನ್ನು ಉಲ್ಲೇಖಿಸಿ ದಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿಯಾಗಿ ನೇಮಕಗೊಂಡಿದ್ದ ಧರ್ಮೇಂದ್ರ ಚತುರ್ ಅವರು ಈ ಹುದ್ದೆ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳು-2021ರ ಪ್ರಕಾರ ಕಂಪನಿಯ ವೆಬ್‌ಸೈಟ್ ಇನ್ನು ಮುಂದೆ ಅವರ ಹೆಸರನ್ನು ತೋರಿಸುವಂತಿಲ್ಲ.

ಈ ಬೆಳವಣಿಗೆ ಬಗ್ಗೆ ಟ್ವಿಟರ್ ಪ್ರತಿಕ್ರಿಯಿಸಲು ನಿರಾಕರಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಕುರಿತಂತೆ ಸರ್ಕಾರ ಮತ್ತು ಟ್ವಿಟರ್  ನಡುವೆ ಸಂಘರ್ಷ ನಡೆಯುತ್ತಿರುವ  ಸಮಯದಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೊಸ ಐಟಿ ನಿಯಮಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ಧಿಕ್ಕರಿಸುತ್ತಿದೆ ಮತ್ತು ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಸರ್ಕಾರ ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಮೇ 25ರಿಂದ ಜಾರಿಗೆ ಬಂದ ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪನಿಗಳು  ಬಳಕೆದಾರರಿಂದ ಅಥವಾ ಸಂತ್ರಸ್ತರಿಂದ ದೂರುಗಳನ್ನು ಪರಿಹರಿಸಲು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಿದೆ.

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಮಹತ್ವದ ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರರ ಅಥವಾ ಸಂತ್ರಸ್ತರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಮತ್ತು ಅಂತಹ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕು.

ಹೊಸ ಐಟಿ ನಿಯಮ ಪ್ರಕಾರ, ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸುವುದು ಕಡ್ಡಾಯವಾಗಿದ್ದು, ಇವರೆಲ್ಲರೂ ಭಾರತದಲ್ಲಿ ವಾಸವಿರಬೇಕು.

ಜೂನ್ 5ರಂದು ಸರ್ಕಾರ ನೀಡಿರುವ ಅಂತಿಮ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಟ್ವಿಟರ್, ಹೊಸ ಐಟಿ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ ಮತ್ತು ಮುಖ್ಯ ಅನುಸರಣೆ ಅಧಿಕಾರಿಯ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ಹೇಳಿದೆ. ಈ ಮಧ್ಯೆ, ಟ್ವಿಟರ್  ಧರ್ಮೇಂದ್ರ ಚತುರ್‌ರನ್ನು ಭಾರತದ ಹಂಗಾಮಿ ನಿವಾಸಿ (ರೆಸಿಡೆಂಟ್‍) ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿತ್ತು.

ಈಗ ಅವರ ಪದತ್ಯಾಗದ ನಂತರ ಕಾನೂನು ಸಮಸ್ಯೆಗಳನ್ನು ಟ್ವಿಟರ್ ಎದುರಿಸಬೇಕಾಗಬಹುದು.

ಟ್ವಿಟರ್ ಈಗ ಭಾರತದ ಕುಂದುಕೊರತೆ ಅಧಿಕಾರಿಯ ವಿವರ ತೋರಿಸಬೇಕಾದ ಸ್ಪೇಸ್‍ನಲ್ಲಿ  ಅಮೆರಿಕಾ ವಿಳಾಸ ಮತ್ತು ಇಮೇಲ್ ಐಡಿಯೊಂದಿಗೆ ಕಂಪನಿ ಹೆಸರನ್ನು ಡಿಸ್‍ಪ್ಲೇ ಮಾಡುತ್ತಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕಂಪನಿಯು ಒಂದು ಹಂತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಮತ್ತು ಅದರ ಬಳಕೆದಾರರು ವೇದಿಕೆಯಲ್ಲಿ ಪೋಸ್ಟ್ ಮಾಡಿದ ಎಲ್ಲಾ ವಿಷಯಗಳಿಗೆ ಕಾನೂನುಬದ್ಧವಾಗಿ ಕಂಪನಿಯೇ ಜವಾಬ್ದಾರಿ ಹೊರಬೇಕಾಗುತ್ತದೆ.


ಇದನ್ನೂ ಓದಿ; ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...