Homeಮುಖಪುಟಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

- Advertisement -
- Advertisement -

ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಕಂಪನಿ ತ್ಯಜಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರ ಮತ್ತೆ ಟ್ವಿಟರ್ ವಿರುದ್ಧ ಮುಗಿ ಬೀಳುವ ಸಾಧ್ಯತೆಗಳಿವೆ.

ಹೊಸ ಐಟಿ ನಿಯಮಗಳ ಪ್ರಕಾರ, ಭಾರತೀಯ ಬಳಕೆದಾರರಿಂದ ದೂರುಗಳನ್ನು ಪರಿಹರಿಸಲು ಮೈಕ್ರೊ-ಬ್ಲಾಗಿಂಗ್ ತಾಣಗಳು ಒಬ್ಬ ಕುಂದುಕೊರತೆ ಪರಿಶೀಲನಾ ಅಧಿಕಾರಿಯನ್ನು ಹೊಂದಿರಬೇಕು. ಈಗ  ಟ್ವಿಟರ್‌ನ ಈ ಅಧಿಕಾರಿ ಪದತ್ಯಾಗ ಮಾಡಿದ ಕಾರಣಕ್ಕೆ ಟ್ವಿಟರ್ ಇಂಡಿಯಾದಲ್ಲಿ ಆ ಸ್ಥಾನ ಖಾಲಿ ಉಳಿದಿದೆ ಎಂದು ಮೂಲವೊಂದನ್ನು ಉಲ್ಲೇಖಿಸಿ ದಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿಯಾಗಿ ನೇಮಕಗೊಂಡಿದ್ದ ಧರ್ಮೇಂದ್ರ ಚತುರ್ ಅವರು ಈ ಹುದ್ದೆ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳು-2021ರ ಪ್ರಕಾರ ಕಂಪನಿಯ ವೆಬ್‌ಸೈಟ್ ಇನ್ನು ಮುಂದೆ ಅವರ ಹೆಸರನ್ನು ತೋರಿಸುವಂತಿಲ್ಲ.

ಈ ಬೆಳವಣಿಗೆ ಬಗ್ಗೆ ಟ್ವಿಟರ್ ಪ್ರತಿಕ್ರಿಯಿಸಲು ನಿರಾಕರಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಕುರಿತಂತೆ ಸರ್ಕಾರ ಮತ್ತು ಟ್ವಿಟರ್  ನಡುವೆ ಸಂಘರ್ಷ ನಡೆಯುತ್ತಿರುವ  ಸಮಯದಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೊಸ ಐಟಿ ನಿಯಮಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ಧಿಕ್ಕರಿಸುತ್ತಿದೆ ಮತ್ತು ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಸರ್ಕಾರ ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಮೇ 25ರಿಂದ ಜಾರಿಗೆ ಬಂದ ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪನಿಗಳು  ಬಳಕೆದಾರರಿಂದ ಅಥವಾ ಸಂತ್ರಸ್ತರಿಂದ ದೂರುಗಳನ್ನು ಪರಿಹರಿಸಲು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಿದೆ.

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಮಹತ್ವದ ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರರ ಅಥವಾ ಸಂತ್ರಸ್ತರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಮತ್ತು ಅಂತಹ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕು.

ಹೊಸ ಐಟಿ ನಿಯಮ ಪ್ರಕಾರ, ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸುವುದು ಕಡ್ಡಾಯವಾಗಿದ್ದು, ಇವರೆಲ್ಲರೂ ಭಾರತದಲ್ಲಿ ವಾಸವಿರಬೇಕು.

ಜೂನ್ 5ರಂದು ಸರ್ಕಾರ ನೀಡಿರುವ ಅಂತಿಮ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಟ್ವಿಟರ್, ಹೊಸ ಐಟಿ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ ಮತ್ತು ಮುಖ್ಯ ಅನುಸರಣೆ ಅಧಿಕಾರಿಯ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ಹೇಳಿದೆ. ಈ ಮಧ್ಯೆ, ಟ್ವಿಟರ್  ಧರ್ಮೇಂದ್ರ ಚತುರ್‌ರನ್ನು ಭಾರತದ ಹಂಗಾಮಿ ನಿವಾಸಿ (ರೆಸಿಡೆಂಟ್‍) ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿತ್ತು.

ಈಗ ಅವರ ಪದತ್ಯಾಗದ ನಂತರ ಕಾನೂನು ಸಮಸ್ಯೆಗಳನ್ನು ಟ್ವಿಟರ್ ಎದುರಿಸಬೇಕಾಗಬಹುದು.

ಟ್ವಿಟರ್ ಈಗ ಭಾರತದ ಕುಂದುಕೊರತೆ ಅಧಿಕಾರಿಯ ವಿವರ ತೋರಿಸಬೇಕಾದ ಸ್ಪೇಸ್‍ನಲ್ಲಿ  ಅಮೆರಿಕಾ ವಿಳಾಸ ಮತ್ತು ಇಮೇಲ್ ಐಡಿಯೊಂದಿಗೆ ಕಂಪನಿ ಹೆಸರನ್ನು ಡಿಸ್‍ಪ್ಲೇ ಮಾಡುತ್ತಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕಂಪನಿಯು ಒಂದು ಹಂತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಮತ್ತು ಅದರ ಬಳಕೆದಾರರು ವೇದಿಕೆಯಲ್ಲಿ ಪೋಸ್ಟ್ ಮಾಡಿದ ಎಲ್ಲಾ ವಿಷಯಗಳಿಗೆ ಕಾನೂನುಬದ್ಧವಾಗಿ ಕಂಪನಿಯೇ ಜವಾಬ್ದಾರಿ ಹೊರಬೇಕಾಗುತ್ತದೆ.


ಇದನ್ನೂ ಓದಿ; ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...