Homeಮುಖಪುಟಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

- Advertisement -
- Advertisement -

ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಕಂಪನಿ ತ್ಯಜಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರ ಮತ್ತೆ ಟ್ವಿಟರ್ ವಿರುದ್ಧ ಮುಗಿ ಬೀಳುವ ಸಾಧ್ಯತೆಗಳಿವೆ.

ಹೊಸ ಐಟಿ ನಿಯಮಗಳ ಪ್ರಕಾರ, ಭಾರತೀಯ ಬಳಕೆದಾರರಿಂದ ದೂರುಗಳನ್ನು ಪರಿಹರಿಸಲು ಮೈಕ್ರೊ-ಬ್ಲಾಗಿಂಗ್ ತಾಣಗಳು ಒಬ್ಬ ಕುಂದುಕೊರತೆ ಪರಿಶೀಲನಾ ಅಧಿಕಾರಿಯನ್ನು ಹೊಂದಿರಬೇಕು. ಈಗ  ಟ್ವಿಟರ್‌ನ ಈ ಅಧಿಕಾರಿ ಪದತ್ಯಾಗ ಮಾಡಿದ ಕಾರಣಕ್ಕೆ ಟ್ವಿಟರ್ ಇಂಡಿಯಾದಲ್ಲಿ ಆ ಸ್ಥಾನ ಖಾಲಿ ಉಳಿದಿದೆ ಎಂದು ಮೂಲವೊಂದನ್ನು ಉಲ್ಲೇಖಿಸಿ ದಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿಯಾಗಿ ನೇಮಕಗೊಂಡಿದ್ದ ಧರ್ಮೇಂದ್ರ ಚತುರ್ ಅವರು ಈ ಹುದ್ದೆ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳು-2021ರ ಪ್ರಕಾರ ಕಂಪನಿಯ ವೆಬ್‌ಸೈಟ್ ಇನ್ನು ಮುಂದೆ ಅವರ ಹೆಸರನ್ನು ತೋರಿಸುವಂತಿಲ್ಲ.

ಈ ಬೆಳವಣಿಗೆ ಬಗ್ಗೆ ಟ್ವಿಟರ್ ಪ್ರತಿಕ್ರಿಯಿಸಲು ನಿರಾಕರಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಕುರಿತಂತೆ ಸರ್ಕಾರ ಮತ್ತು ಟ್ವಿಟರ್  ನಡುವೆ ಸಂಘರ್ಷ ನಡೆಯುತ್ತಿರುವ  ಸಮಯದಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೊಸ ಐಟಿ ನಿಯಮಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ಧಿಕ್ಕರಿಸುತ್ತಿದೆ ಮತ್ತು ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಸರ್ಕಾರ ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಮೇ 25ರಿಂದ ಜಾರಿಗೆ ಬಂದ ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪನಿಗಳು  ಬಳಕೆದಾರರಿಂದ ಅಥವಾ ಸಂತ್ರಸ್ತರಿಂದ ದೂರುಗಳನ್ನು ಪರಿಹರಿಸಲು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಿದೆ.

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಮಹತ್ವದ ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರರ ಅಥವಾ ಸಂತ್ರಸ್ತರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಮತ್ತು ಅಂತಹ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕು.

ಹೊಸ ಐಟಿ ನಿಯಮ ಪ್ರಕಾರ, ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸುವುದು ಕಡ್ಡಾಯವಾಗಿದ್ದು, ಇವರೆಲ್ಲರೂ ಭಾರತದಲ್ಲಿ ವಾಸವಿರಬೇಕು.

ಜೂನ್ 5ರಂದು ಸರ್ಕಾರ ನೀಡಿರುವ ಅಂತಿಮ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಟ್ವಿಟರ್, ಹೊಸ ಐಟಿ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ ಮತ್ತು ಮುಖ್ಯ ಅನುಸರಣೆ ಅಧಿಕಾರಿಯ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ಹೇಳಿದೆ. ಈ ಮಧ್ಯೆ, ಟ್ವಿಟರ್  ಧರ್ಮೇಂದ್ರ ಚತುರ್‌ರನ್ನು ಭಾರತದ ಹಂಗಾಮಿ ನಿವಾಸಿ (ರೆಸಿಡೆಂಟ್‍) ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿತ್ತು.

ಈಗ ಅವರ ಪದತ್ಯಾಗದ ನಂತರ ಕಾನೂನು ಸಮಸ್ಯೆಗಳನ್ನು ಟ್ವಿಟರ್ ಎದುರಿಸಬೇಕಾಗಬಹುದು.

ಟ್ವಿಟರ್ ಈಗ ಭಾರತದ ಕುಂದುಕೊರತೆ ಅಧಿಕಾರಿಯ ವಿವರ ತೋರಿಸಬೇಕಾದ ಸ್ಪೇಸ್‍ನಲ್ಲಿ  ಅಮೆರಿಕಾ ವಿಳಾಸ ಮತ್ತು ಇಮೇಲ್ ಐಡಿಯೊಂದಿಗೆ ಕಂಪನಿ ಹೆಸರನ್ನು ಡಿಸ್‍ಪ್ಲೇ ಮಾಡುತ್ತಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕಂಪನಿಯು ಒಂದು ಹಂತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಮತ್ತು ಅದರ ಬಳಕೆದಾರರು ವೇದಿಕೆಯಲ್ಲಿ ಪೋಸ್ಟ್ ಮಾಡಿದ ಎಲ್ಲಾ ವಿಷಯಗಳಿಗೆ ಕಾನೂನುಬದ್ಧವಾಗಿ ಕಂಪನಿಯೇ ಜವಾಬ್ದಾರಿ ಹೊರಬೇಕಾಗುತ್ತದೆ.


ಇದನ್ನೂ ಓದಿ; ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...