Homeಮುಖಪುಟಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

- Advertisement -
- Advertisement -

ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಕಂಪನಿ ತ್ಯಜಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರ ಮತ್ತೆ ಟ್ವಿಟರ್ ವಿರುದ್ಧ ಮುಗಿ ಬೀಳುವ ಸಾಧ್ಯತೆಗಳಿವೆ.

ಹೊಸ ಐಟಿ ನಿಯಮಗಳ ಪ್ರಕಾರ, ಭಾರತೀಯ ಬಳಕೆದಾರರಿಂದ ದೂರುಗಳನ್ನು ಪರಿಹರಿಸಲು ಮೈಕ್ರೊ-ಬ್ಲಾಗಿಂಗ್ ತಾಣಗಳು ಒಬ್ಬ ಕುಂದುಕೊರತೆ ಪರಿಶೀಲನಾ ಅಧಿಕಾರಿಯನ್ನು ಹೊಂದಿರಬೇಕು. ಈಗ  ಟ್ವಿಟರ್‌ನ ಈ ಅಧಿಕಾರಿ ಪದತ್ಯಾಗ ಮಾಡಿದ ಕಾರಣಕ್ಕೆ ಟ್ವಿಟರ್ ಇಂಡಿಯಾದಲ್ಲಿ ಆ ಸ್ಥಾನ ಖಾಲಿ ಉಳಿದಿದೆ ಎಂದು ಮೂಲವೊಂದನ್ನು ಉಲ್ಲೇಖಿಸಿ ದಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿಯಾಗಿ ನೇಮಕಗೊಂಡಿದ್ದ ಧರ್ಮೇಂದ್ರ ಚತುರ್ ಅವರು ಈ ಹುದ್ದೆ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳು-2021ರ ಪ್ರಕಾರ ಕಂಪನಿಯ ವೆಬ್‌ಸೈಟ್ ಇನ್ನು ಮುಂದೆ ಅವರ ಹೆಸರನ್ನು ತೋರಿಸುವಂತಿಲ್ಲ.

ಈ ಬೆಳವಣಿಗೆ ಬಗ್ಗೆ ಟ್ವಿಟರ್ ಪ್ರತಿಕ್ರಿಯಿಸಲು ನಿರಾಕರಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಕುರಿತಂತೆ ಸರ್ಕಾರ ಮತ್ತು ಟ್ವಿಟರ್  ನಡುವೆ ಸಂಘರ್ಷ ನಡೆಯುತ್ತಿರುವ  ಸಮಯದಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೊಸ ಐಟಿ ನಿಯಮಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ಧಿಕ್ಕರಿಸುತ್ತಿದೆ ಮತ್ತು ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಸರ್ಕಾರ ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಮೇ 25ರಿಂದ ಜಾರಿಗೆ ಬಂದ ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪನಿಗಳು  ಬಳಕೆದಾರರಿಂದ ಅಥವಾ ಸಂತ್ರಸ್ತರಿಂದ ದೂರುಗಳನ್ನು ಪರಿಹರಿಸಲು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಿದೆ.

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಮಹತ್ವದ ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರರ ಅಥವಾ ಸಂತ್ರಸ್ತರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಮತ್ತು ಅಂತಹ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕು.

ಹೊಸ ಐಟಿ ನಿಯಮ ಪ್ರಕಾರ, ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸುವುದು ಕಡ್ಡಾಯವಾಗಿದ್ದು, ಇವರೆಲ್ಲರೂ ಭಾರತದಲ್ಲಿ ವಾಸವಿರಬೇಕು.

ಜೂನ್ 5ರಂದು ಸರ್ಕಾರ ನೀಡಿರುವ ಅಂತಿಮ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಟ್ವಿಟರ್, ಹೊಸ ಐಟಿ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ ಮತ್ತು ಮುಖ್ಯ ಅನುಸರಣೆ ಅಧಿಕಾರಿಯ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ಹೇಳಿದೆ. ಈ ಮಧ್ಯೆ, ಟ್ವಿಟರ್  ಧರ್ಮೇಂದ್ರ ಚತುರ್‌ರನ್ನು ಭಾರತದ ಹಂಗಾಮಿ ನಿವಾಸಿ (ರೆಸಿಡೆಂಟ್‍) ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿತ್ತು.

ಈಗ ಅವರ ಪದತ್ಯಾಗದ ನಂತರ ಕಾನೂನು ಸಮಸ್ಯೆಗಳನ್ನು ಟ್ವಿಟರ್ ಎದುರಿಸಬೇಕಾಗಬಹುದು.

ಟ್ವಿಟರ್ ಈಗ ಭಾರತದ ಕುಂದುಕೊರತೆ ಅಧಿಕಾರಿಯ ವಿವರ ತೋರಿಸಬೇಕಾದ ಸ್ಪೇಸ್‍ನಲ್ಲಿ  ಅಮೆರಿಕಾ ವಿಳಾಸ ಮತ್ತು ಇಮೇಲ್ ಐಡಿಯೊಂದಿಗೆ ಕಂಪನಿ ಹೆಸರನ್ನು ಡಿಸ್‍ಪ್ಲೇ ಮಾಡುತ್ತಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕಂಪನಿಯು ಒಂದು ಹಂತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಮತ್ತು ಅದರ ಬಳಕೆದಾರರು ವೇದಿಕೆಯಲ್ಲಿ ಪೋಸ್ಟ್ ಮಾಡಿದ ಎಲ್ಲಾ ವಿಷಯಗಳಿಗೆ ಕಾನೂನುಬದ್ಧವಾಗಿ ಕಂಪನಿಯೇ ಜವಾಬ್ದಾರಿ ಹೊರಬೇಕಾಗುತ್ತದೆ.


ಇದನ್ನೂ ಓದಿ; ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...