Homeಚಳವಳಿ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ...

’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಪಕ್ಷಪಾತಿಯಾಗಿವೆಯೇ? ಹಣಕ್ಕಾಗಿ ಕೆಲವರ ಹಿತಾಸಕ್ತಿ ಕಾಪಾಡಲು ಮಾತ್ರ ಕೆಲಸ ಮಾಡುತ್ತಿವೆಯೇ? ಜಾತಿವಾದಿಯಾಗಿ ಮತ್ತು ಕೋಮುವಾದಿಯಾಗಿ ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆಗಳು ಎದುರಾದರೆ ಅದಕ್ಕಿರುವ ಒಂದೇ ಉತ್ತರ ’ಹೌದು’ ಆಗಿರುತ್ತದೆ.

ಹೌದು ನಾವಂದೂಕೊಂಡಿರುವ ಈ ಸೋಷಿಯಲ್‌ ಸ್ಪೇಸ್‌ಗಳು ಕೂಡ ಜಾತಿ, ಧರ್ಮದಿಂದ ಮುಕ್ತವಾಗಿಲ್ಲ. ಅಲ್ಲದೇ ನಿಷ್ಪಕ್ಷಪಾತವಾಗಿಲ್ಲ. ಏಕೆಂದರೆ ಎಲ್ಲರಿಗೂ ಅವರದೇ ಆದ ಹಿತಾಸಕ್ತಿಯಿರುವಂತೆ ಟ್ವಿಟ್ಟರ್‌ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳ ನಿರ್ವಾಹಕರಿಗೂ ತಮ್ಮದೇ ಆದ ಹಿತಾಸಕ್ತಿಗಳಿರುವುದು ಸ್ಪಷ್ಟ. ಇವುಗಳ ಮುಖ್ಯಸ್ಥರು ಹಣಕ್ಕಾಗಿ ಕೆಲ ಖಾಸಗಿ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ, ವ್ಯಾಪಾರಿ ಕಂಪನಿಗಳಿಗೆ ಮಾರಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಇದರ ಕುರಿತು ಹಲವು ಕೋರ್ಟ್‌ ಕೇಸುಗಳನ್ನು ಸಹ ಎದುರಿಸುತ್ತಿದ್ದಾರೆ.

ಇನ್ನು ಇವು ಜಾತಿವಾದಿಯೇ? ಕೋಮುವಾದಿಯೇ ಎಂದರೆ ಅದು ಸಹ ಸತ್ಯ. ಸ್ವತಃ ಈ ಕಂಪನಿಗಳ ಮುಖ್ಯಸ್ಥರು ಜಾತಿವಾದಿ, ಕೋಮುವಾದಿ ಅಲ್ಲದಿದ್ದರೂ ಈ ಸಂಸ್ಥೆಗಳ ಆಯಾಕಟ್ಟಿನ ಜಾಗದಲ್ಲಿ ಕೂತಿರುವ ಸಾವಿರಾರು ಉದ್ಯೋಗಿಗಳು ಮಾತ್ರ ತಮ್ಮ ತಲೆಯಲ್ಲಿ ಜಾತಿ ಕೋಮು ವಿಷವನ್ನು ತುಂಬಿಕೊಂಡಿರುವುದು ದುರಂತ.

ಇಷ್ಟೇಲ್ಲಾ ವಿವರಣೆ ಏಕೆಂದರೆ ನಿನ್ನೆ ಟ್ವಿಟ್ಟರ್‌ನಲ್ಲಿ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದೂ ಜೊತೆಗೆ ಇಂದು ಜೈಭೀಮ್‌ ಟ್ವಿಟ್ಟರ್‌ ಎಂಬಂತಹ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಇನ್ನು ಸ್ಯಾಕ್ ಮನೀಶ್ ಮಹೇಶ್ವರಿ ಎಂಬ ಟ್ವಿಟ್ಟರ್‌ ಟ್ರೆಂಡಿಂಗ್‌ ಅನ್ನು ಟ್ವಿಟ್ಟರ್‌ ಕ್ಷಣಾರ್ಧದಲ್ಲಿ ಅಳಿಸಿಬಿಟ್ಟಿತ್ತು. ಇದು ಟ್ಟಿಟ್ಟರ್‌ನಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿತ್ತು. ಇದೆಲ್ಲಾ ಯಾಕಾಯಿತು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳುವುದು ಈ ಸಾಮಾಜಿಕ ಜಾಲತಾಣಗಳ ಜಾತಿರಾಜಕೀಯವನ್ನು ಅರಿಯಲು ಸುಲಭವಾಗುತ್ತದೆ.

ಕೆಲದಿನಗಳ ಹಿಂದೆ ಹಿರಿಯ ಪತ್ರಕರ್ತ ದಿಲೀಪ್ ಮಂಡಲ್ ಅವರ ಖಾತೆಯನ್ನು ಟ್ವಿಟ್ಟರ್‌ ನಿರ್ಬಂಧಿಸಿ‍ತ್ತು. ಇದಕ್ಕೆ ಕೊಟ್ಟ ಕಾರಣವೆಂದರೆ ದ್ವೇಷಪೂರಿತ ಹೇಳಿಕೆಗಳನ್ನು ತಡೆಯುವುದಕ್ಕಾಗಿ ಹಲವಾರು ಜನರ ಖಾತೆಯನ್ನು ಹೀಗೆ ನಿರ್ಭಂದಿಸುತ್ತಿದ್ದೇವೆ ಎಂದು ಟ್ವಿಟ್ಟರ್‌ ವಿವರಣೆ ನೀಡಿತ್ತು.

ಹಾಗೆ ನೋಡಿದರೆ ದಿಲೀಪ್‌ ಮಂಡಲ್‌ರವರು ಆ ರೀತಿಯ ಯಾವುದೇ ದ್ವೇಷಪೂರಿತ ಹೇಳಿಕೆಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿರಲಿಲ್ಲ. ಬದಲಿಗೆ ನಿಜವಾಗಿಯೂ ದ್ವೇಷ ಬಿತ್ತುತ್ತಿದ್ದ, ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುತ್ತಿದ್ದ ಬಹಳಷ್ಟು ಜನರ, ಪತ್ರಕರ್ತರ ಟ್ವಿಟ್ಟರ್‌ಗಳು ಹಾಗೆ ರಾರಾಜಿಸುತ್ತಿದ್ದವು. ಇದು ದಿಲೀಪ್ ಮಂಡಲ್‌ರವರಿಗೆ ಮಾತ್ರವಲ್ಲದೇ ಬಹಳಷ್ಟು ಪ್ರಗತಿಪರ ಟ್ವಿಟ್ಟರ್‌ಗಳಿಗೆ ಇದೇ ಪರಿಸ್ಥಿತಿ ಇದುರಾಗಿತ್ತು.

ಇದರಿಂದ ಕೋಪಗೊಂಡ ದಿಲೀಪ್ ಮಂಡಲ್ ಅವರು ಟ್ವಿಟ್ಟರ್‌ನ ಈ ಪಕ್ಷಪಾತವನ್ನು ಅದೇ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದರು. ಇದೆಲ್ಲದಕ್ಕೂ ಉತ್ತರ ಬೇಕೆಂದು ಆಗ್ರಹಿಸಿದರು. ಅವರು #SackManishMaheshari ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೇಳಿದರು.

ಮಣಿಶ್ ಮಹೇಶ್ವರಿಯವರು ಭಾರತದ ಟ್ವಿಟ್ಟರ್‌ನ ಎಂಡಿಯಾಗಿದ್ದಾರೆ. ದ್ವೇಷ ಹರಡುವ ಖಾತೆಗಳನ್ನು ಹಾಗೆ ಬಿಟ್ಟು ಜನಪರ ಪತ್ರಕರ್ತರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ವಿರೋಧಿಸಿ ಸಾವಿರಾರು ಜನರು ಅಸಮಾಧಾನಗೊಂಡಿದ್ದಾರೆ. ಮತ್ತು ಅವರೆಲ್ಲರೂ #SackManishMaheshari ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ತಮ್ಮ ಆಕ್ರೊಶವನ್ನು ಹೊರಹಾಕಿದರು.

ಶೀಘ್ರದಲ್ಲೇ ಇದು ಮೇಲ್ಭಾಗದಲ್ಲಿ ಟ್ರೆಂಡಿಂಗ್ ಆಗಿತ್ತು. ನೋಡನೋಡುತ್ತಿದ್ದಂತೆಯೇ ಭಾರತದಲ್ಲಿ ಎಂಟರಿಂದ ಮೂರನೆಯ ಸ್ಥಾನಕ್ಕೆ ಜಿಗಿಯಿತು. ಇದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತು. ಆದರೆ ಕ್ಷಣಾರ್ಧದಲ್ಲಿಯೇ ಅದು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು.

ಅಂದರೆ ಟ್ವಿಟ್ಟರ್‌ ಇಂಡಿಯಾ ಆ ಹ್ಯಾಸ್‌ಟ್ಯಾಗ್‌ ಅನ್ನು ಟ್ರೆಂಡಿಂಗ್‌ ನಿಂದ ತೆಗೆದುಹಾಕಿತ್ತು. ಇದರಿಂದ ಜಾಲತಾಣಿಗರು ಮತ್ತಷ್ಟು ಕ್ರೋಧಗೊಂಡರು. ಟ್ವಿಟರ್ ದ್ವೇಷದ ಮಾತನ್ನು ನಿಲ್ಲಿಸುವುದಿಲ್ಲ, ದ್ವೇಷಿಸುವವರಿಗೆ ಜಾಗವನ್ನು ನೀಡುತ್ತದೆ ಮತ್ತು ಟ್ವಿಟ್ಟರ್‌ನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸುವ ಜನರ ಮೇಲೆ ಮೃದುಭಾವನೆ ತಳೆಯುತ್ತದೆ ಆದರೆ ಅಂಚಿನಲ್ಲಿರುವ ವಿಭಾಗಗಳಾದ ದಲಿತರು, ಮುಸ್ಲಿಮರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಈ ಗುಂಪುಗಳ ಬಳಕೆದಾರರ ಮೇಲೆ ಅತ್ಯಂತ ಕಠಿಣ ನಿರ್ಭಂಧಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಟ್ವಿಟ್ಟರ್‌ ಬಳಕೆದಾರರು #ಕ್ಯಾಸ್ಟಿಸ್ಟ್ ಟ್ವಿಟರ್ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಅದನ್ನು ಸಹ ಟ್ರೆಂಡ್ ಮಾಡಿದ್ದಾರೆ. ವಿಚಿತ್ರವೆಂದರೆ, ಯಾವುದೇ ಉಲ್ಲಂಘನೆ ಇಲ್ಲದಿದ್ದರೂ ತಳಸಮುದಾಯಕ್ಕೆ ಸೇರಿದ ಖಾತೆಗಳನ್ನು ಟ್ವಿಟ್ಟರ್‌ ತ್ವರಿತವಾಗಿ ನಿರ್ಬಂಧಿಸಲಾಗುತ್ತದೆ. ಇದಕ್ಕೆ ಕಾರಣ ಟ್ವಿಟರ್ ಇಂಡಿಯಾದಲ್ಲಿ ಸಾಮಾಜಿಕ ಅಸಮತೋಲನವಿದೆ (ಕಂಪನಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳಲ್ಲಿ ವಿವಿಧ ಸಮುದಾಯಗಳ ಪ್ರಾತಿನಿಧ್ಯದ ಕೊರತೆ) ಅದರ ಬಗ್ಗೆ ಗಮನಹರಿಸಲು ಅದರ ಸಿಇಒಗೆ ಬಹಳಷ್ಟು ಜನರು ಒತ್ತಾಯಿಸಿದ್ದಾರೆ.

ಪತ್ರಕರ್ತ ದಿಲೀಪ್‌ ಮಂಡಲ್‌ರವರ ಟ್ವಿಟ್ಟರ್‌ ಖಾತೆಯನ್ನು ವೆರಿಫೈಡ್‌ ಎಂದು ಘೋಷಿಸಿದ ಟ್ವಿಟ್ಟರ್‌ಗೆ ಹಿರಿಯ ಪತ್ರಕರ್ತ ದಿ ಪ್ರಿಂಟ್‌ನ ಶೇಖರ್‌ ಗುಪ್ತಾ ಸಹ ಛೀಮಾರಿ ಹಾಕಿದ್ದಾರೆ.

ಟ್ವಿಟ್ಟರ್‌ಗೆ ಎಲ್ಲಾ ಸಮುದಾಯದವರನ್ನು ಒಳಗೊಳ್ಳುವ ಮತ್ತು ಸಮಾನತೆಯ ಪಾಠ ಬೋಧಿಸಲು ನೆಟ್ಟಿಗರು ತೀರ್ಮಾನಿಸಿದರು. ಅದಕ್ಕಾಗಿ ಭಾರತದಲ್ಲಿ ಸಮಾನತೆಗಾಗಿ ಜೀವಮುಡಿಪಿಟ್ಟ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನೆನಪಿಸಲು ಇಂದು ಬೆಳಿಗ್ಗೆಯೇ ಜೈಭೀಮ್‌ ಟ್ವಿಟ್ಟರ್‌ ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಹರಿಯಬಿಟ್ಟರು. ಕಾಂಗ್ರೆಸ್‌ನ ದಲಿತ ವಿಭಾಗದ ಅಧ್ಯಕ್ಷ ಮತ್ತು ಶಾಸಕ ಡಾ.ನಿತಿನ್‌ ರಾವತ್‌, ಗುಜರಾತ್‌ನ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಅಲ್ಲವೇ ದಲಿತ್ ಏಕತಾ, ಬಹುಜನ್‌ಫಾರ್‌ ಇಂಡಿಯಾ, ಟ್ರೈಬಲ್‌ ಆರ್ಮಿ ಸೇರಿದಂತೆ ಸಾವಿರಾರು ಖಾತೆಗಳಿಂದ ಜೈಭೀಮ್‌ ಟ್ವಿಟ್ಟರ್‌ ಟ್ರೆಂಡ್‌ ಆಗಿದೆ.

ಅಂತೂ ಇದರಿಂದ ಟ್ವಿಟ್ಟರ್‌ ಮುಜುಗರಕ್ಕೆ ಒಳಗಾಗಿದೆ. ಇದು ಇಂದಿನ ತಳಸಮುದಾಯದ ಯುವತಲೆಮಾರಿನ ಸ್ವಾಭಿಮಾನ ಪ್ರದರ್ಶನದ ಧ್ಯೋತಕವಾಗಿದೆ. ಹೆಚ್ಚು ಹೆಚ್ಚು ಯುವಜನರು ಈ ಸಾಮಾಜಿಕ ಫ್ಲಾಟ್‌ಫಾರಂಗಳಿಗೆ ಬಂದಂತೆ ತಮ್ಮ ಅಸರ್ಸನ್‌ ಅನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಈ ವಿದ್ಯಮಾನದಿಂದ ಪಾಠ ಕಲಿಯಬೇಕಿದೆ. ಇಲ್ಲದಿದ್ದಲ್ಲಿ ಮತ್ತಷ್ಟು ಪ್ರತಿರೋಧ ವ್ಯಕ್ತವಾಗುವುದರಲ್ಲಿ ಸಂಶಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...