Homeಚಳವಳಿ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ...

’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಪಕ್ಷಪಾತಿಯಾಗಿವೆಯೇ? ಹಣಕ್ಕಾಗಿ ಕೆಲವರ ಹಿತಾಸಕ್ತಿ ಕಾಪಾಡಲು ಮಾತ್ರ ಕೆಲಸ ಮಾಡುತ್ತಿವೆಯೇ? ಜಾತಿವಾದಿಯಾಗಿ ಮತ್ತು ಕೋಮುವಾದಿಯಾಗಿ ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆಗಳು ಎದುರಾದರೆ ಅದಕ್ಕಿರುವ ಒಂದೇ ಉತ್ತರ ’ಹೌದು’ ಆಗಿರುತ್ತದೆ.

ಹೌದು ನಾವಂದೂಕೊಂಡಿರುವ ಈ ಸೋಷಿಯಲ್‌ ಸ್ಪೇಸ್‌ಗಳು ಕೂಡ ಜಾತಿ, ಧರ್ಮದಿಂದ ಮುಕ್ತವಾಗಿಲ್ಲ. ಅಲ್ಲದೇ ನಿಷ್ಪಕ್ಷಪಾತವಾಗಿಲ್ಲ. ಏಕೆಂದರೆ ಎಲ್ಲರಿಗೂ ಅವರದೇ ಆದ ಹಿತಾಸಕ್ತಿಯಿರುವಂತೆ ಟ್ವಿಟ್ಟರ್‌ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳ ನಿರ್ವಾಹಕರಿಗೂ ತಮ್ಮದೇ ಆದ ಹಿತಾಸಕ್ತಿಗಳಿರುವುದು ಸ್ಪಷ್ಟ. ಇವುಗಳ ಮುಖ್ಯಸ್ಥರು ಹಣಕ್ಕಾಗಿ ಕೆಲ ಖಾಸಗಿ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ, ವ್ಯಾಪಾರಿ ಕಂಪನಿಗಳಿಗೆ ಮಾರಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಇದರ ಕುರಿತು ಹಲವು ಕೋರ್ಟ್‌ ಕೇಸುಗಳನ್ನು ಸಹ ಎದುರಿಸುತ್ತಿದ್ದಾರೆ.

ಇನ್ನು ಇವು ಜಾತಿವಾದಿಯೇ? ಕೋಮುವಾದಿಯೇ ಎಂದರೆ ಅದು ಸಹ ಸತ್ಯ. ಸ್ವತಃ ಈ ಕಂಪನಿಗಳ ಮುಖ್ಯಸ್ಥರು ಜಾತಿವಾದಿ, ಕೋಮುವಾದಿ ಅಲ್ಲದಿದ್ದರೂ ಈ ಸಂಸ್ಥೆಗಳ ಆಯಾಕಟ್ಟಿನ ಜಾಗದಲ್ಲಿ ಕೂತಿರುವ ಸಾವಿರಾರು ಉದ್ಯೋಗಿಗಳು ಮಾತ್ರ ತಮ್ಮ ತಲೆಯಲ್ಲಿ ಜಾತಿ ಕೋಮು ವಿಷವನ್ನು ತುಂಬಿಕೊಂಡಿರುವುದು ದುರಂತ.

ಇಷ್ಟೇಲ್ಲಾ ವಿವರಣೆ ಏಕೆಂದರೆ ನಿನ್ನೆ ಟ್ವಿಟ್ಟರ್‌ನಲ್ಲಿ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದೂ ಜೊತೆಗೆ ಇಂದು ಜೈಭೀಮ್‌ ಟ್ವಿಟ್ಟರ್‌ ಎಂಬಂತಹ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಇನ್ನು ಸ್ಯಾಕ್ ಮನೀಶ್ ಮಹೇಶ್ವರಿ ಎಂಬ ಟ್ವಿಟ್ಟರ್‌ ಟ್ರೆಂಡಿಂಗ್‌ ಅನ್ನು ಟ್ವಿಟ್ಟರ್‌ ಕ್ಷಣಾರ್ಧದಲ್ಲಿ ಅಳಿಸಿಬಿಟ್ಟಿತ್ತು. ಇದು ಟ್ಟಿಟ್ಟರ್‌ನಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿತ್ತು. ಇದೆಲ್ಲಾ ಯಾಕಾಯಿತು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳುವುದು ಈ ಸಾಮಾಜಿಕ ಜಾಲತಾಣಗಳ ಜಾತಿರಾಜಕೀಯವನ್ನು ಅರಿಯಲು ಸುಲಭವಾಗುತ್ತದೆ.

ಕೆಲದಿನಗಳ ಹಿಂದೆ ಹಿರಿಯ ಪತ್ರಕರ್ತ ದಿಲೀಪ್ ಮಂಡಲ್ ಅವರ ಖಾತೆಯನ್ನು ಟ್ವಿಟ್ಟರ್‌ ನಿರ್ಬಂಧಿಸಿ‍ತ್ತು. ಇದಕ್ಕೆ ಕೊಟ್ಟ ಕಾರಣವೆಂದರೆ ದ್ವೇಷಪೂರಿತ ಹೇಳಿಕೆಗಳನ್ನು ತಡೆಯುವುದಕ್ಕಾಗಿ ಹಲವಾರು ಜನರ ಖಾತೆಯನ್ನು ಹೀಗೆ ನಿರ್ಭಂದಿಸುತ್ತಿದ್ದೇವೆ ಎಂದು ಟ್ವಿಟ್ಟರ್‌ ವಿವರಣೆ ನೀಡಿತ್ತು.

ಹಾಗೆ ನೋಡಿದರೆ ದಿಲೀಪ್‌ ಮಂಡಲ್‌ರವರು ಆ ರೀತಿಯ ಯಾವುದೇ ದ್ವೇಷಪೂರಿತ ಹೇಳಿಕೆಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿರಲಿಲ್ಲ. ಬದಲಿಗೆ ನಿಜವಾಗಿಯೂ ದ್ವೇಷ ಬಿತ್ತುತ್ತಿದ್ದ, ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುತ್ತಿದ್ದ ಬಹಳಷ್ಟು ಜನರ, ಪತ್ರಕರ್ತರ ಟ್ವಿಟ್ಟರ್‌ಗಳು ಹಾಗೆ ರಾರಾಜಿಸುತ್ತಿದ್ದವು. ಇದು ದಿಲೀಪ್ ಮಂಡಲ್‌ರವರಿಗೆ ಮಾತ್ರವಲ್ಲದೇ ಬಹಳಷ್ಟು ಪ್ರಗತಿಪರ ಟ್ವಿಟ್ಟರ್‌ಗಳಿಗೆ ಇದೇ ಪರಿಸ್ಥಿತಿ ಇದುರಾಗಿತ್ತು.

ಇದರಿಂದ ಕೋಪಗೊಂಡ ದಿಲೀಪ್ ಮಂಡಲ್ ಅವರು ಟ್ವಿಟ್ಟರ್‌ನ ಈ ಪಕ್ಷಪಾತವನ್ನು ಅದೇ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದರು. ಇದೆಲ್ಲದಕ್ಕೂ ಉತ್ತರ ಬೇಕೆಂದು ಆಗ್ರಹಿಸಿದರು. ಅವರು #SackManishMaheshari ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೇಳಿದರು.

ಮಣಿಶ್ ಮಹೇಶ್ವರಿಯವರು ಭಾರತದ ಟ್ವಿಟ್ಟರ್‌ನ ಎಂಡಿಯಾಗಿದ್ದಾರೆ. ದ್ವೇಷ ಹರಡುವ ಖಾತೆಗಳನ್ನು ಹಾಗೆ ಬಿಟ್ಟು ಜನಪರ ಪತ್ರಕರ್ತರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ವಿರೋಧಿಸಿ ಸಾವಿರಾರು ಜನರು ಅಸಮಾಧಾನಗೊಂಡಿದ್ದಾರೆ. ಮತ್ತು ಅವರೆಲ್ಲರೂ #SackManishMaheshari ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ತಮ್ಮ ಆಕ್ರೊಶವನ್ನು ಹೊರಹಾಕಿದರು.

ಶೀಘ್ರದಲ್ಲೇ ಇದು ಮೇಲ್ಭಾಗದಲ್ಲಿ ಟ್ರೆಂಡಿಂಗ್ ಆಗಿತ್ತು. ನೋಡನೋಡುತ್ತಿದ್ದಂತೆಯೇ ಭಾರತದಲ್ಲಿ ಎಂಟರಿಂದ ಮೂರನೆಯ ಸ್ಥಾನಕ್ಕೆ ಜಿಗಿಯಿತು. ಇದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತು. ಆದರೆ ಕ್ಷಣಾರ್ಧದಲ್ಲಿಯೇ ಅದು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು.

ಅಂದರೆ ಟ್ವಿಟ್ಟರ್‌ ಇಂಡಿಯಾ ಆ ಹ್ಯಾಸ್‌ಟ್ಯಾಗ್‌ ಅನ್ನು ಟ್ರೆಂಡಿಂಗ್‌ ನಿಂದ ತೆಗೆದುಹಾಕಿತ್ತು. ಇದರಿಂದ ಜಾಲತಾಣಿಗರು ಮತ್ತಷ್ಟು ಕ್ರೋಧಗೊಂಡರು. ಟ್ವಿಟರ್ ದ್ವೇಷದ ಮಾತನ್ನು ನಿಲ್ಲಿಸುವುದಿಲ್ಲ, ದ್ವೇಷಿಸುವವರಿಗೆ ಜಾಗವನ್ನು ನೀಡುತ್ತದೆ ಮತ್ತು ಟ್ವಿಟ್ಟರ್‌ನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸುವ ಜನರ ಮೇಲೆ ಮೃದುಭಾವನೆ ತಳೆಯುತ್ತದೆ ಆದರೆ ಅಂಚಿನಲ್ಲಿರುವ ವಿಭಾಗಗಳಾದ ದಲಿತರು, ಮುಸ್ಲಿಮರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಈ ಗುಂಪುಗಳ ಬಳಕೆದಾರರ ಮೇಲೆ ಅತ್ಯಂತ ಕಠಿಣ ನಿರ್ಭಂಧಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಟ್ವಿಟ್ಟರ್‌ ಬಳಕೆದಾರರು #ಕ್ಯಾಸ್ಟಿಸ್ಟ್ ಟ್ವಿಟರ್ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಅದನ್ನು ಸಹ ಟ್ರೆಂಡ್ ಮಾಡಿದ್ದಾರೆ. ವಿಚಿತ್ರವೆಂದರೆ, ಯಾವುದೇ ಉಲ್ಲಂಘನೆ ಇಲ್ಲದಿದ್ದರೂ ತಳಸಮುದಾಯಕ್ಕೆ ಸೇರಿದ ಖಾತೆಗಳನ್ನು ಟ್ವಿಟ್ಟರ್‌ ತ್ವರಿತವಾಗಿ ನಿರ್ಬಂಧಿಸಲಾಗುತ್ತದೆ. ಇದಕ್ಕೆ ಕಾರಣ ಟ್ವಿಟರ್ ಇಂಡಿಯಾದಲ್ಲಿ ಸಾಮಾಜಿಕ ಅಸಮತೋಲನವಿದೆ (ಕಂಪನಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳಲ್ಲಿ ವಿವಿಧ ಸಮುದಾಯಗಳ ಪ್ರಾತಿನಿಧ್ಯದ ಕೊರತೆ) ಅದರ ಬಗ್ಗೆ ಗಮನಹರಿಸಲು ಅದರ ಸಿಇಒಗೆ ಬಹಳಷ್ಟು ಜನರು ಒತ್ತಾಯಿಸಿದ್ದಾರೆ.

ಪತ್ರಕರ್ತ ದಿಲೀಪ್‌ ಮಂಡಲ್‌ರವರ ಟ್ವಿಟ್ಟರ್‌ ಖಾತೆಯನ್ನು ವೆರಿಫೈಡ್‌ ಎಂದು ಘೋಷಿಸಿದ ಟ್ವಿಟ್ಟರ್‌ಗೆ ಹಿರಿಯ ಪತ್ರಕರ್ತ ದಿ ಪ್ರಿಂಟ್‌ನ ಶೇಖರ್‌ ಗುಪ್ತಾ ಸಹ ಛೀಮಾರಿ ಹಾಕಿದ್ದಾರೆ.

ಟ್ವಿಟ್ಟರ್‌ಗೆ ಎಲ್ಲಾ ಸಮುದಾಯದವರನ್ನು ಒಳಗೊಳ್ಳುವ ಮತ್ತು ಸಮಾನತೆಯ ಪಾಠ ಬೋಧಿಸಲು ನೆಟ್ಟಿಗರು ತೀರ್ಮಾನಿಸಿದರು. ಅದಕ್ಕಾಗಿ ಭಾರತದಲ್ಲಿ ಸಮಾನತೆಗಾಗಿ ಜೀವಮುಡಿಪಿಟ್ಟ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನೆನಪಿಸಲು ಇಂದು ಬೆಳಿಗ್ಗೆಯೇ ಜೈಭೀಮ್‌ ಟ್ವಿಟ್ಟರ್‌ ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಹರಿಯಬಿಟ್ಟರು. ಕಾಂಗ್ರೆಸ್‌ನ ದಲಿತ ವಿಭಾಗದ ಅಧ್ಯಕ್ಷ ಮತ್ತು ಶಾಸಕ ಡಾ.ನಿತಿನ್‌ ರಾವತ್‌, ಗುಜರಾತ್‌ನ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಅಲ್ಲವೇ ದಲಿತ್ ಏಕತಾ, ಬಹುಜನ್‌ಫಾರ್‌ ಇಂಡಿಯಾ, ಟ್ರೈಬಲ್‌ ಆರ್ಮಿ ಸೇರಿದಂತೆ ಸಾವಿರಾರು ಖಾತೆಗಳಿಂದ ಜೈಭೀಮ್‌ ಟ್ವಿಟ್ಟರ್‌ ಟ್ರೆಂಡ್‌ ಆಗಿದೆ.

ಅಂತೂ ಇದರಿಂದ ಟ್ವಿಟ್ಟರ್‌ ಮುಜುಗರಕ್ಕೆ ಒಳಗಾಗಿದೆ. ಇದು ಇಂದಿನ ತಳಸಮುದಾಯದ ಯುವತಲೆಮಾರಿನ ಸ್ವಾಭಿಮಾನ ಪ್ರದರ್ಶನದ ಧ್ಯೋತಕವಾಗಿದೆ. ಹೆಚ್ಚು ಹೆಚ್ಚು ಯುವಜನರು ಈ ಸಾಮಾಜಿಕ ಫ್ಲಾಟ್‌ಫಾರಂಗಳಿಗೆ ಬಂದಂತೆ ತಮ್ಮ ಅಸರ್ಸನ್‌ ಅನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಈ ವಿದ್ಯಮಾನದಿಂದ ಪಾಠ ಕಲಿಯಬೇಕಿದೆ. ಇಲ್ಲದಿದ್ದಲ್ಲಿ ಮತ್ತಷ್ಟು ಪ್ರತಿರೋಧ ವ್ಯಕ್ತವಾಗುವುದರಲ್ಲಿ ಸಂಶಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...