Homeಚಳವಳಿ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ...

’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಪಕ್ಷಪಾತಿಯಾಗಿವೆಯೇ? ಹಣಕ್ಕಾಗಿ ಕೆಲವರ ಹಿತಾಸಕ್ತಿ ಕಾಪಾಡಲು ಮಾತ್ರ ಕೆಲಸ ಮಾಡುತ್ತಿವೆಯೇ? ಜಾತಿವಾದಿಯಾಗಿ ಮತ್ತು ಕೋಮುವಾದಿಯಾಗಿ ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆಗಳು ಎದುರಾದರೆ ಅದಕ್ಕಿರುವ ಒಂದೇ ಉತ್ತರ ’ಹೌದು’ ಆಗಿರುತ್ತದೆ.

ಹೌದು ನಾವಂದೂಕೊಂಡಿರುವ ಈ ಸೋಷಿಯಲ್‌ ಸ್ಪೇಸ್‌ಗಳು ಕೂಡ ಜಾತಿ, ಧರ್ಮದಿಂದ ಮುಕ್ತವಾಗಿಲ್ಲ. ಅಲ್ಲದೇ ನಿಷ್ಪಕ್ಷಪಾತವಾಗಿಲ್ಲ. ಏಕೆಂದರೆ ಎಲ್ಲರಿಗೂ ಅವರದೇ ಆದ ಹಿತಾಸಕ್ತಿಯಿರುವಂತೆ ಟ್ವಿಟ್ಟರ್‌ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳ ನಿರ್ವಾಹಕರಿಗೂ ತಮ್ಮದೇ ಆದ ಹಿತಾಸಕ್ತಿಗಳಿರುವುದು ಸ್ಪಷ್ಟ. ಇವುಗಳ ಮುಖ್ಯಸ್ಥರು ಹಣಕ್ಕಾಗಿ ಕೆಲ ಖಾಸಗಿ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ, ವ್ಯಾಪಾರಿ ಕಂಪನಿಗಳಿಗೆ ಮಾರಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಇದರ ಕುರಿತು ಹಲವು ಕೋರ್ಟ್‌ ಕೇಸುಗಳನ್ನು ಸಹ ಎದುರಿಸುತ್ತಿದ್ದಾರೆ.

ಇನ್ನು ಇವು ಜಾತಿವಾದಿಯೇ? ಕೋಮುವಾದಿಯೇ ಎಂದರೆ ಅದು ಸಹ ಸತ್ಯ. ಸ್ವತಃ ಈ ಕಂಪನಿಗಳ ಮುಖ್ಯಸ್ಥರು ಜಾತಿವಾದಿ, ಕೋಮುವಾದಿ ಅಲ್ಲದಿದ್ದರೂ ಈ ಸಂಸ್ಥೆಗಳ ಆಯಾಕಟ್ಟಿನ ಜಾಗದಲ್ಲಿ ಕೂತಿರುವ ಸಾವಿರಾರು ಉದ್ಯೋಗಿಗಳು ಮಾತ್ರ ತಮ್ಮ ತಲೆಯಲ್ಲಿ ಜಾತಿ ಕೋಮು ವಿಷವನ್ನು ತುಂಬಿಕೊಂಡಿರುವುದು ದುರಂತ.

ಇಷ್ಟೇಲ್ಲಾ ವಿವರಣೆ ಏಕೆಂದರೆ ನಿನ್ನೆ ಟ್ವಿಟ್ಟರ್‌ನಲ್ಲಿ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದೂ ಜೊತೆಗೆ ಇಂದು ಜೈಭೀಮ್‌ ಟ್ವಿಟ್ಟರ್‌ ಎಂಬಂತಹ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಇನ್ನು ಸ್ಯಾಕ್ ಮನೀಶ್ ಮಹೇಶ್ವರಿ ಎಂಬ ಟ್ವಿಟ್ಟರ್‌ ಟ್ರೆಂಡಿಂಗ್‌ ಅನ್ನು ಟ್ವಿಟ್ಟರ್‌ ಕ್ಷಣಾರ್ಧದಲ್ಲಿ ಅಳಿಸಿಬಿಟ್ಟಿತ್ತು. ಇದು ಟ್ಟಿಟ್ಟರ್‌ನಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿತ್ತು. ಇದೆಲ್ಲಾ ಯಾಕಾಯಿತು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳುವುದು ಈ ಸಾಮಾಜಿಕ ಜಾಲತಾಣಗಳ ಜಾತಿರಾಜಕೀಯವನ್ನು ಅರಿಯಲು ಸುಲಭವಾಗುತ್ತದೆ.

ಕೆಲದಿನಗಳ ಹಿಂದೆ ಹಿರಿಯ ಪತ್ರಕರ್ತ ದಿಲೀಪ್ ಮಂಡಲ್ ಅವರ ಖಾತೆಯನ್ನು ಟ್ವಿಟ್ಟರ್‌ ನಿರ್ಬಂಧಿಸಿ‍ತ್ತು. ಇದಕ್ಕೆ ಕೊಟ್ಟ ಕಾರಣವೆಂದರೆ ದ್ವೇಷಪೂರಿತ ಹೇಳಿಕೆಗಳನ್ನು ತಡೆಯುವುದಕ್ಕಾಗಿ ಹಲವಾರು ಜನರ ಖಾತೆಯನ್ನು ಹೀಗೆ ನಿರ್ಭಂದಿಸುತ್ತಿದ್ದೇವೆ ಎಂದು ಟ್ವಿಟ್ಟರ್‌ ವಿವರಣೆ ನೀಡಿತ್ತು.

ಹಾಗೆ ನೋಡಿದರೆ ದಿಲೀಪ್‌ ಮಂಡಲ್‌ರವರು ಆ ರೀತಿಯ ಯಾವುದೇ ದ್ವೇಷಪೂರಿತ ಹೇಳಿಕೆಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿರಲಿಲ್ಲ. ಬದಲಿಗೆ ನಿಜವಾಗಿಯೂ ದ್ವೇಷ ಬಿತ್ತುತ್ತಿದ್ದ, ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುತ್ತಿದ್ದ ಬಹಳಷ್ಟು ಜನರ, ಪತ್ರಕರ್ತರ ಟ್ವಿಟ್ಟರ್‌ಗಳು ಹಾಗೆ ರಾರಾಜಿಸುತ್ತಿದ್ದವು. ಇದು ದಿಲೀಪ್ ಮಂಡಲ್‌ರವರಿಗೆ ಮಾತ್ರವಲ್ಲದೇ ಬಹಳಷ್ಟು ಪ್ರಗತಿಪರ ಟ್ವಿಟ್ಟರ್‌ಗಳಿಗೆ ಇದೇ ಪರಿಸ್ಥಿತಿ ಇದುರಾಗಿತ್ತು.

ಇದರಿಂದ ಕೋಪಗೊಂಡ ದಿಲೀಪ್ ಮಂಡಲ್ ಅವರು ಟ್ವಿಟ್ಟರ್‌ನ ಈ ಪಕ್ಷಪಾತವನ್ನು ಅದೇ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದರು. ಇದೆಲ್ಲದಕ್ಕೂ ಉತ್ತರ ಬೇಕೆಂದು ಆಗ್ರಹಿಸಿದರು. ಅವರು #SackManishMaheshari ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೇಳಿದರು.

ಮಣಿಶ್ ಮಹೇಶ್ವರಿಯವರು ಭಾರತದ ಟ್ವಿಟ್ಟರ್‌ನ ಎಂಡಿಯಾಗಿದ್ದಾರೆ. ದ್ವೇಷ ಹರಡುವ ಖಾತೆಗಳನ್ನು ಹಾಗೆ ಬಿಟ್ಟು ಜನಪರ ಪತ್ರಕರ್ತರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ವಿರೋಧಿಸಿ ಸಾವಿರಾರು ಜನರು ಅಸಮಾಧಾನಗೊಂಡಿದ್ದಾರೆ. ಮತ್ತು ಅವರೆಲ್ಲರೂ #SackManishMaheshari ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ತಮ್ಮ ಆಕ್ರೊಶವನ್ನು ಹೊರಹಾಕಿದರು.

ಶೀಘ್ರದಲ್ಲೇ ಇದು ಮೇಲ್ಭಾಗದಲ್ಲಿ ಟ್ರೆಂಡಿಂಗ್ ಆಗಿತ್ತು. ನೋಡನೋಡುತ್ತಿದ್ದಂತೆಯೇ ಭಾರತದಲ್ಲಿ ಎಂಟರಿಂದ ಮೂರನೆಯ ಸ್ಥಾನಕ್ಕೆ ಜಿಗಿಯಿತು. ಇದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತು. ಆದರೆ ಕ್ಷಣಾರ್ಧದಲ್ಲಿಯೇ ಅದು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು.

ಅಂದರೆ ಟ್ವಿಟ್ಟರ್‌ ಇಂಡಿಯಾ ಆ ಹ್ಯಾಸ್‌ಟ್ಯಾಗ್‌ ಅನ್ನು ಟ್ರೆಂಡಿಂಗ್‌ ನಿಂದ ತೆಗೆದುಹಾಕಿತ್ತು. ಇದರಿಂದ ಜಾಲತಾಣಿಗರು ಮತ್ತಷ್ಟು ಕ್ರೋಧಗೊಂಡರು. ಟ್ವಿಟರ್ ದ್ವೇಷದ ಮಾತನ್ನು ನಿಲ್ಲಿಸುವುದಿಲ್ಲ, ದ್ವೇಷಿಸುವವರಿಗೆ ಜಾಗವನ್ನು ನೀಡುತ್ತದೆ ಮತ್ತು ಟ್ವಿಟ್ಟರ್‌ನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸುವ ಜನರ ಮೇಲೆ ಮೃದುಭಾವನೆ ತಳೆಯುತ್ತದೆ ಆದರೆ ಅಂಚಿನಲ್ಲಿರುವ ವಿಭಾಗಗಳಾದ ದಲಿತರು, ಮುಸ್ಲಿಮರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಈ ಗುಂಪುಗಳ ಬಳಕೆದಾರರ ಮೇಲೆ ಅತ್ಯಂತ ಕಠಿಣ ನಿರ್ಭಂಧಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಟ್ವಿಟ್ಟರ್‌ ಬಳಕೆದಾರರು #ಕ್ಯಾಸ್ಟಿಸ್ಟ್ ಟ್ವಿಟರ್ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಅದನ್ನು ಸಹ ಟ್ರೆಂಡ್ ಮಾಡಿದ್ದಾರೆ. ವಿಚಿತ್ರವೆಂದರೆ, ಯಾವುದೇ ಉಲ್ಲಂಘನೆ ಇಲ್ಲದಿದ್ದರೂ ತಳಸಮುದಾಯಕ್ಕೆ ಸೇರಿದ ಖಾತೆಗಳನ್ನು ಟ್ವಿಟ್ಟರ್‌ ತ್ವರಿತವಾಗಿ ನಿರ್ಬಂಧಿಸಲಾಗುತ್ತದೆ. ಇದಕ್ಕೆ ಕಾರಣ ಟ್ವಿಟರ್ ಇಂಡಿಯಾದಲ್ಲಿ ಸಾಮಾಜಿಕ ಅಸಮತೋಲನವಿದೆ (ಕಂಪನಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳಲ್ಲಿ ವಿವಿಧ ಸಮುದಾಯಗಳ ಪ್ರಾತಿನಿಧ್ಯದ ಕೊರತೆ) ಅದರ ಬಗ್ಗೆ ಗಮನಹರಿಸಲು ಅದರ ಸಿಇಒಗೆ ಬಹಳಷ್ಟು ಜನರು ಒತ್ತಾಯಿಸಿದ್ದಾರೆ.

ಪತ್ರಕರ್ತ ದಿಲೀಪ್‌ ಮಂಡಲ್‌ರವರ ಟ್ವಿಟ್ಟರ್‌ ಖಾತೆಯನ್ನು ವೆರಿಫೈಡ್‌ ಎಂದು ಘೋಷಿಸಿದ ಟ್ವಿಟ್ಟರ್‌ಗೆ ಹಿರಿಯ ಪತ್ರಕರ್ತ ದಿ ಪ್ರಿಂಟ್‌ನ ಶೇಖರ್‌ ಗುಪ್ತಾ ಸಹ ಛೀಮಾರಿ ಹಾಕಿದ್ದಾರೆ.

ಟ್ವಿಟ್ಟರ್‌ಗೆ ಎಲ್ಲಾ ಸಮುದಾಯದವರನ್ನು ಒಳಗೊಳ್ಳುವ ಮತ್ತು ಸಮಾನತೆಯ ಪಾಠ ಬೋಧಿಸಲು ನೆಟ್ಟಿಗರು ತೀರ್ಮಾನಿಸಿದರು. ಅದಕ್ಕಾಗಿ ಭಾರತದಲ್ಲಿ ಸಮಾನತೆಗಾಗಿ ಜೀವಮುಡಿಪಿಟ್ಟ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನೆನಪಿಸಲು ಇಂದು ಬೆಳಿಗ್ಗೆಯೇ ಜೈಭೀಮ್‌ ಟ್ವಿಟ್ಟರ್‌ ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಹರಿಯಬಿಟ್ಟರು. ಕಾಂಗ್ರೆಸ್‌ನ ದಲಿತ ವಿಭಾಗದ ಅಧ್ಯಕ್ಷ ಮತ್ತು ಶಾಸಕ ಡಾ.ನಿತಿನ್‌ ರಾವತ್‌, ಗುಜರಾತ್‌ನ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಅಲ್ಲವೇ ದಲಿತ್ ಏಕತಾ, ಬಹುಜನ್‌ಫಾರ್‌ ಇಂಡಿಯಾ, ಟ್ರೈಬಲ್‌ ಆರ್ಮಿ ಸೇರಿದಂತೆ ಸಾವಿರಾರು ಖಾತೆಗಳಿಂದ ಜೈಭೀಮ್‌ ಟ್ವಿಟ್ಟರ್‌ ಟ್ರೆಂಡ್‌ ಆಗಿದೆ.

ಅಂತೂ ಇದರಿಂದ ಟ್ವಿಟ್ಟರ್‌ ಮುಜುಗರಕ್ಕೆ ಒಳಗಾಗಿದೆ. ಇದು ಇಂದಿನ ತಳಸಮುದಾಯದ ಯುವತಲೆಮಾರಿನ ಸ್ವಾಭಿಮಾನ ಪ್ರದರ್ಶನದ ಧ್ಯೋತಕವಾಗಿದೆ. ಹೆಚ್ಚು ಹೆಚ್ಚು ಯುವಜನರು ಈ ಸಾಮಾಜಿಕ ಫ್ಲಾಟ್‌ಫಾರಂಗಳಿಗೆ ಬಂದಂತೆ ತಮ್ಮ ಅಸರ್ಸನ್‌ ಅನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಈ ವಿದ್ಯಮಾನದಿಂದ ಪಾಠ ಕಲಿಯಬೇಕಿದೆ. ಇಲ್ಲದಿದ್ದಲ್ಲಿ ಮತ್ತಷ್ಟು ಪ್ರತಿರೋಧ ವ್ಯಕ್ತವಾಗುವುದರಲ್ಲಿ ಸಂಶಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...