Homeಚಳವಳಿ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ...

’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಪಕ್ಷಪಾತಿಯಾಗಿವೆಯೇ? ಹಣಕ್ಕಾಗಿ ಕೆಲವರ ಹಿತಾಸಕ್ತಿ ಕಾಪಾಡಲು ಮಾತ್ರ ಕೆಲಸ ಮಾಡುತ್ತಿವೆಯೇ? ಜಾತಿವಾದಿಯಾಗಿ ಮತ್ತು ಕೋಮುವಾದಿಯಾಗಿ ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆಗಳು ಎದುರಾದರೆ ಅದಕ್ಕಿರುವ ಒಂದೇ ಉತ್ತರ ’ಹೌದು’ ಆಗಿರುತ್ತದೆ.

ಹೌದು ನಾವಂದೂಕೊಂಡಿರುವ ಈ ಸೋಷಿಯಲ್‌ ಸ್ಪೇಸ್‌ಗಳು ಕೂಡ ಜಾತಿ, ಧರ್ಮದಿಂದ ಮುಕ್ತವಾಗಿಲ್ಲ. ಅಲ್ಲದೇ ನಿಷ್ಪಕ್ಷಪಾತವಾಗಿಲ್ಲ. ಏಕೆಂದರೆ ಎಲ್ಲರಿಗೂ ಅವರದೇ ಆದ ಹಿತಾಸಕ್ತಿಯಿರುವಂತೆ ಟ್ವಿಟ್ಟರ್‌ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳ ನಿರ್ವಾಹಕರಿಗೂ ತಮ್ಮದೇ ಆದ ಹಿತಾಸಕ್ತಿಗಳಿರುವುದು ಸ್ಪಷ್ಟ. ಇವುಗಳ ಮುಖ್ಯಸ್ಥರು ಹಣಕ್ಕಾಗಿ ಕೆಲ ಖಾಸಗಿ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ, ವ್ಯಾಪಾರಿ ಕಂಪನಿಗಳಿಗೆ ಮಾರಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಇದರ ಕುರಿತು ಹಲವು ಕೋರ್ಟ್‌ ಕೇಸುಗಳನ್ನು ಸಹ ಎದುರಿಸುತ್ತಿದ್ದಾರೆ.

ಇನ್ನು ಇವು ಜಾತಿವಾದಿಯೇ? ಕೋಮುವಾದಿಯೇ ಎಂದರೆ ಅದು ಸಹ ಸತ್ಯ. ಸ್ವತಃ ಈ ಕಂಪನಿಗಳ ಮುಖ್ಯಸ್ಥರು ಜಾತಿವಾದಿ, ಕೋಮುವಾದಿ ಅಲ್ಲದಿದ್ದರೂ ಈ ಸಂಸ್ಥೆಗಳ ಆಯಾಕಟ್ಟಿನ ಜಾಗದಲ್ಲಿ ಕೂತಿರುವ ಸಾವಿರಾರು ಉದ್ಯೋಗಿಗಳು ಮಾತ್ರ ತಮ್ಮ ತಲೆಯಲ್ಲಿ ಜಾತಿ ಕೋಮು ವಿಷವನ್ನು ತುಂಬಿಕೊಂಡಿರುವುದು ದುರಂತ.

ಇಷ್ಟೇಲ್ಲಾ ವಿವರಣೆ ಏಕೆಂದರೆ ನಿನ್ನೆ ಟ್ವಿಟ್ಟರ್‌ನಲ್ಲಿ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದೂ ಜೊತೆಗೆ ಇಂದು ಜೈಭೀಮ್‌ ಟ್ವಿಟ್ಟರ್‌ ಎಂಬಂತಹ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಇನ್ನು ಸ್ಯಾಕ್ ಮನೀಶ್ ಮಹೇಶ್ವರಿ ಎಂಬ ಟ್ವಿಟ್ಟರ್‌ ಟ್ರೆಂಡಿಂಗ್‌ ಅನ್ನು ಟ್ವಿಟ್ಟರ್‌ ಕ್ಷಣಾರ್ಧದಲ್ಲಿ ಅಳಿಸಿಬಿಟ್ಟಿತ್ತು. ಇದು ಟ್ಟಿಟ್ಟರ್‌ನಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿತ್ತು. ಇದೆಲ್ಲಾ ಯಾಕಾಯಿತು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳುವುದು ಈ ಸಾಮಾಜಿಕ ಜಾಲತಾಣಗಳ ಜಾತಿರಾಜಕೀಯವನ್ನು ಅರಿಯಲು ಸುಲಭವಾಗುತ್ತದೆ.

ಕೆಲದಿನಗಳ ಹಿಂದೆ ಹಿರಿಯ ಪತ್ರಕರ್ತ ದಿಲೀಪ್ ಮಂಡಲ್ ಅವರ ಖಾತೆಯನ್ನು ಟ್ವಿಟ್ಟರ್‌ ನಿರ್ಬಂಧಿಸಿ‍ತ್ತು. ಇದಕ್ಕೆ ಕೊಟ್ಟ ಕಾರಣವೆಂದರೆ ದ್ವೇಷಪೂರಿತ ಹೇಳಿಕೆಗಳನ್ನು ತಡೆಯುವುದಕ್ಕಾಗಿ ಹಲವಾರು ಜನರ ಖಾತೆಯನ್ನು ಹೀಗೆ ನಿರ್ಭಂದಿಸುತ್ತಿದ್ದೇವೆ ಎಂದು ಟ್ವಿಟ್ಟರ್‌ ವಿವರಣೆ ನೀಡಿತ್ತು.

ಹಾಗೆ ನೋಡಿದರೆ ದಿಲೀಪ್‌ ಮಂಡಲ್‌ರವರು ಆ ರೀತಿಯ ಯಾವುದೇ ದ್ವೇಷಪೂರಿತ ಹೇಳಿಕೆಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿರಲಿಲ್ಲ. ಬದಲಿಗೆ ನಿಜವಾಗಿಯೂ ದ್ವೇಷ ಬಿತ್ತುತ್ತಿದ್ದ, ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುತ್ತಿದ್ದ ಬಹಳಷ್ಟು ಜನರ, ಪತ್ರಕರ್ತರ ಟ್ವಿಟ್ಟರ್‌ಗಳು ಹಾಗೆ ರಾರಾಜಿಸುತ್ತಿದ್ದವು. ಇದು ದಿಲೀಪ್ ಮಂಡಲ್‌ರವರಿಗೆ ಮಾತ್ರವಲ್ಲದೇ ಬಹಳಷ್ಟು ಪ್ರಗತಿಪರ ಟ್ವಿಟ್ಟರ್‌ಗಳಿಗೆ ಇದೇ ಪರಿಸ್ಥಿತಿ ಇದುರಾಗಿತ್ತು.

ಇದರಿಂದ ಕೋಪಗೊಂಡ ದಿಲೀಪ್ ಮಂಡಲ್ ಅವರು ಟ್ವಿಟ್ಟರ್‌ನ ಈ ಪಕ್ಷಪಾತವನ್ನು ಅದೇ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದರು. ಇದೆಲ್ಲದಕ್ಕೂ ಉತ್ತರ ಬೇಕೆಂದು ಆಗ್ರಹಿಸಿದರು. ಅವರು #SackManishMaheshari ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೇಳಿದರು.

ಮಣಿಶ್ ಮಹೇಶ್ವರಿಯವರು ಭಾರತದ ಟ್ವಿಟ್ಟರ್‌ನ ಎಂಡಿಯಾಗಿದ್ದಾರೆ. ದ್ವೇಷ ಹರಡುವ ಖಾತೆಗಳನ್ನು ಹಾಗೆ ಬಿಟ್ಟು ಜನಪರ ಪತ್ರಕರ್ತರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ವಿರೋಧಿಸಿ ಸಾವಿರಾರು ಜನರು ಅಸಮಾಧಾನಗೊಂಡಿದ್ದಾರೆ. ಮತ್ತು ಅವರೆಲ್ಲರೂ #SackManishMaheshari ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ತಮ್ಮ ಆಕ್ರೊಶವನ್ನು ಹೊರಹಾಕಿದರು.

ಶೀಘ್ರದಲ್ಲೇ ಇದು ಮೇಲ್ಭಾಗದಲ್ಲಿ ಟ್ರೆಂಡಿಂಗ್ ಆಗಿತ್ತು. ನೋಡನೋಡುತ್ತಿದ್ದಂತೆಯೇ ಭಾರತದಲ್ಲಿ ಎಂಟರಿಂದ ಮೂರನೆಯ ಸ್ಥಾನಕ್ಕೆ ಜಿಗಿಯಿತು. ಇದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತು. ಆದರೆ ಕ್ಷಣಾರ್ಧದಲ್ಲಿಯೇ ಅದು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು.

ಅಂದರೆ ಟ್ವಿಟ್ಟರ್‌ ಇಂಡಿಯಾ ಆ ಹ್ಯಾಸ್‌ಟ್ಯಾಗ್‌ ಅನ್ನು ಟ್ರೆಂಡಿಂಗ್‌ ನಿಂದ ತೆಗೆದುಹಾಕಿತ್ತು. ಇದರಿಂದ ಜಾಲತಾಣಿಗರು ಮತ್ತಷ್ಟು ಕ್ರೋಧಗೊಂಡರು. ಟ್ವಿಟರ್ ದ್ವೇಷದ ಮಾತನ್ನು ನಿಲ್ಲಿಸುವುದಿಲ್ಲ, ದ್ವೇಷಿಸುವವರಿಗೆ ಜಾಗವನ್ನು ನೀಡುತ್ತದೆ ಮತ್ತು ಟ್ವಿಟ್ಟರ್‌ನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸುವ ಜನರ ಮೇಲೆ ಮೃದುಭಾವನೆ ತಳೆಯುತ್ತದೆ ಆದರೆ ಅಂಚಿನಲ್ಲಿರುವ ವಿಭಾಗಗಳಾದ ದಲಿತರು, ಮುಸ್ಲಿಮರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಈ ಗುಂಪುಗಳ ಬಳಕೆದಾರರ ಮೇಲೆ ಅತ್ಯಂತ ಕಠಿಣ ನಿರ್ಭಂಧಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಟ್ವಿಟ್ಟರ್‌ ಬಳಕೆದಾರರು #ಕ್ಯಾಸ್ಟಿಸ್ಟ್ ಟ್ವಿಟರ್ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಅದನ್ನು ಸಹ ಟ್ರೆಂಡ್ ಮಾಡಿದ್ದಾರೆ. ವಿಚಿತ್ರವೆಂದರೆ, ಯಾವುದೇ ಉಲ್ಲಂಘನೆ ಇಲ್ಲದಿದ್ದರೂ ತಳಸಮುದಾಯಕ್ಕೆ ಸೇರಿದ ಖಾತೆಗಳನ್ನು ಟ್ವಿಟ್ಟರ್‌ ತ್ವರಿತವಾಗಿ ನಿರ್ಬಂಧಿಸಲಾಗುತ್ತದೆ. ಇದಕ್ಕೆ ಕಾರಣ ಟ್ವಿಟರ್ ಇಂಡಿಯಾದಲ್ಲಿ ಸಾಮಾಜಿಕ ಅಸಮತೋಲನವಿದೆ (ಕಂಪನಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳಲ್ಲಿ ವಿವಿಧ ಸಮುದಾಯಗಳ ಪ್ರಾತಿನಿಧ್ಯದ ಕೊರತೆ) ಅದರ ಬಗ್ಗೆ ಗಮನಹರಿಸಲು ಅದರ ಸಿಇಒಗೆ ಬಹಳಷ್ಟು ಜನರು ಒತ್ತಾಯಿಸಿದ್ದಾರೆ.

ಪತ್ರಕರ್ತ ದಿಲೀಪ್‌ ಮಂಡಲ್‌ರವರ ಟ್ವಿಟ್ಟರ್‌ ಖಾತೆಯನ್ನು ವೆರಿಫೈಡ್‌ ಎಂದು ಘೋಷಿಸಿದ ಟ್ವಿಟ್ಟರ್‌ಗೆ ಹಿರಿಯ ಪತ್ರಕರ್ತ ದಿ ಪ್ರಿಂಟ್‌ನ ಶೇಖರ್‌ ಗುಪ್ತಾ ಸಹ ಛೀಮಾರಿ ಹಾಕಿದ್ದಾರೆ.

ಟ್ವಿಟ್ಟರ್‌ಗೆ ಎಲ್ಲಾ ಸಮುದಾಯದವರನ್ನು ಒಳಗೊಳ್ಳುವ ಮತ್ತು ಸಮಾನತೆಯ ಪಾಠ ಬೋಧಿಸಲು ನೆಟ್ಟಿಗರು ತೀರ್ಮಾನಿಸಿದರು. ಅದಕ್ಕಾಗಿ ಭಾರತದಲ್ಲಿ ಸಮಾನತೆಗಾಗಿ ಜೀವಮುಡಿಪಿಟ್ಟ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನೆನಪಿಸಲು ಇಂದು ಬೆಳಿಗ್ಗೆಯೇ ಜೈಭೀಮ್‌ ಟ್ವಿಟ್ಟರ್‌ ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಹರಿಯಬಿಟ್ಟರು. ಕಾಂಗ್ರೆಸ್‌ನ ದಲಿತ ವಿಭಾಗದ ಅಧ್ಯಕ್ಷ ಮತ್ತು ಶಾಸಕ ಡಾ.ನಿತಿನ್‌ ರಾವತ್‌, ಗುಜರಾತ್‌ನ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಅಲ್ಲವೇ ದಲಿತ್ ಏಕತಾ, ಬಹುಜನ್‌ಫಾರ್‌ ಇಂಡಿಯಾ, ಟ್ರೈಬಲ್‌ ಆರ್ಮಿ ಸೇರಿದಂತೆ ಸಾವಿರಾರು ಖಾತೆಗಳಿಂದ ಜೈಭೀಮ್‌ ಟ್ವಿಟ್ಟರ್‌ ಟ್ರೆಂಡ್‌ ಆಗಿದೆ.

ಅಂತೂ ಇದರಿಂದ ಟ್ವಿಟ್ಟರ್‌ ಮುಜುಗರಕ್ಕೆ ಒಳಗಾಗಿದೆ. ಇದು ಇಂದಿನ ತಳಸಮುದಾಯದ ಯುವತಲೆಮಾರಿನ ಸ್ವಾಭಿಮಾನ ಪ್ರದರ್ಶನದ ಧ್ಯೋತಕವಾಗಿದೆ. ಹೆಚ್ಚು ಹೆಚ್ಚು ಯುವಜನರು ಈ ಸಾಮಾಜಿಕ ಫ್ಲಾಟ್‌ಫಾರಂಗಳಿಗೆ ಬಂದಂತೆ ತಮ್ಮ ಅಸರ್ಸನ್‌ ಅನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಈ ವಿದ್ಯಮಾನದಿಂದ ಪಾಠ ಕಲಿಯಬೇಕಿದೆ. ಇಲ್ಲದಿದ್ದಲ್ಲಿ ಮತ್ತಷ್ಟು ಪ್ರತಿರೋಧ ವ್ಯಕ್ತವಾಗುವುದರಲ್ಲಿ ಸಂಶಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...