Homeಚಳವಳಿ’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ...

’ಜೈಭೀಮ್‌ ಟ್ವಿಟ್ಟರ್‌’ ಮೊಳಗಿದ ಘೋಷಗಳು: ಟ್ವಿಟ್ಟರ್‌ನ ಜಾತೀಯತೆಗೆ ಭಾರೀ ಪ್ರತಿರೋಧ…

- Advertisement -
- Advertisement -

ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಪಕ್ಷಪಾತಿಯಾಗಿವೆಯೇ? ಹಣಕ್ಕಾಗಿ ಕೆಲವರ ಹಿತಾಸಕ್ತಿ ಕಾಪಾಡಲು ಮಾತ್ರ ಕೆಲಸ ಮಾಡುತ್ತಿವೆಯೇ? ಜಾತಿವಾದಿಯಾಗಿ ಮತ್ತು ಕೋಮುವಾದಿಯಾಗಿ ನಡೆದುಕೊಳ್ಳುತ್ತಿವೆಯೇ ಎಂಬ ಪ್ರಶ್ನೆಗಳು ಎದುರಾದರೆ ಅದಕ್ಕಿರುವ ಒಂದೇ ಉತ್ತರ ’ಹೌದು’ ಆಗಿರುತ್ತದೆ.

ಹೌದು ನಾವಂದೂಕೊಂಡಿರುವ ಈ ಸೋಷಿಯಲ್‌ ಸ್ಪೇಸ್‌ಗಳು ಕೂಡ ಜಾತಿ, ಧರ್ಮದಿಂದ ಮುಕ್ತವಾಗಿಲ್ಲ. ಅಲ್ಲದೇ ನಿಷ್ಪಕ್ಷಪಾತವಾಗಿಲ್ಲ. ಏಕೆಂದರೆ ಎಲ್ಲರಿಗೂ ಅವರದೇ ಆದ ಹಿತಾಸಕ್ತಿಯಿರುವಂತೆ ಟ್ವಿಟ್ಟರ್‌ ಫೇಸ್‌ಬುಕ್‌ಗಳಂತಹ ಸಾಮಾಜಿಕ ಜಾಲತಾಣಗಳ ನಿರ್ವಾಹಕರಿಗೂ ತಮ್ಮದೇ ಆದ ಹಿತಾಸಕ್ತಿಗಳಿರುವುದು ಸ್ಪಷ್ಟ. ಇವುಗಳ ಮುಖ್ಯಸ್ಥರು ಹಣಕ್ಕಾಗಿ ಕೆಲ ಖಾಸಗಿ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ, ವ್ಯಾಪಾರಿ ಕಂಪನಿಗಳಿಗೆ ಮಾರಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಮತ್ತು ಇದರ ಕುರಿತು ಹಲವು ಕೋರ್ಟ್‌ ಕೇಸುಗಳನ್ನು ಸಹ ಎದುರಿಸುತ್ತಿದ್ದಾರೆ.

ಇನ್ನು ಇವು ಜಾತಿವಾದಿಯೇ? ಕೋಮುವಾದಿಯೇ ಎಂದರೆ ಅದು ಸಹ ಸತ್ಯ. ಸ್ವತಃ ಈ ಕಂಪನಿಗಳ ಮುಖ್ಯಸ್ಥರು ಜಾತಿವಾದಿ, ಕೋಮುವಾದಿ ಅಲ್ಲದಿದ್ದರೂ ಈ ಸಂಸ್ಥೆಗಳ ಆಯಾಕಟ್ಟಿನ ಜಾಗದಲ್ಲಿ ಕೂತಿರುವ ಸಾವಿರಾರು ಉದ್ಯೋಗಿಗಳು ಮಾತ್ರ ತಮ್ಮ ತಲೆಯಲ್ಲಿ ಜಾತಿ ಕೋಮು ವಿಷವನ್ನು ತುಂಬಿಕೊಂಡಿರುವುದು ದುರಂತ.

ಇಷ್ಟೇಲ್ಲಾ ವಿವರಣೆ ಏಕೆಂದರೆ ನಿನ್ನೆ ಟ್ವಿಟ್ಟರ್‌ನಲ್ಲಿ ಕ್ಯಾಸ್ಟಿಸ್ಟ್‌ ಟ್ವಿಟ್ಟರ್‌ ಎಂದೂ ಜೊತೆಗೆ ಇಂದು ಜೈಭೀಮ್‌ ಟ್ವಿಟ್ಟರ್‌ ಎಂಬಂತಹ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಇನ್ನು ಸ್ಯಾಕ್ ಮನೀಶ್ ಮಹೇಶ್ವರಿ ಎಂಬ ಟ್ವಿಟ್ಟರ್‌ ಟ್ರೆಂಡಿಂಗ್‌ ಅನ್ನು ಟ್ವಿಟ್ಟರ್‌ ಕ್ಷಣಾರ್ಧದಲ್ಲಿ ಅಳಿಸಿಬಿಟ್ಟಿತ್ತು. ಇದು ಟ್ಟಿಟ್ಟರ್‌ನಲ್ಲಿ ದೊಡ್ಡ ಕೋಲಾಹಲವನ್ನೇ ಎಬ್ಬಿಸಿತ್ತು. ಇದೆಲ್ಲಾ ಯಾಕಾಯಿತು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳುವುದು ಈ ಸಾಮಾಜಿಕ ಜಾಲತಾಣಗಳ ಜಾತಿರಾಜಕೀಯವನ್ನು ಅರಿಯಲು ಸುಲಭವಾಗುತ್ತದೆ.

ಕೆಲದಿನಗಳ ಹಿಂದೆ ಹಿರಿಯ ಪತ್ರಕರ್ತ ದಿಲೀಪ್ ಮಂಡಲ್ ಅವರ ಖಾತೆಯನ್ನು ಟ್ವಿಟ್ಟರ್‌ ನಿರ್ಬಂಧಿಸಿ‍ತ್ತು. ಇದಕ್ಕೆ ಕೊಟ್ಟ ಕಾರಣವೆಂದರೆ ದ್ವೇಷಪೂರಿತ ಹೇಳಿಕೆಗಳನ್ನು ತಡೆಯುವುದಕ್ಕಾಗಿ ಹಲವಾರು ಜನರ ಖಾತೆಯನ್ನು ಹೀಗೆ ನಿರ್ಭಂದಿಸುತ್ತಿದ್ದೇವೆ ಎಂದು ಟ್ವಿಟ್ಟರ್‌ ವಿವರಣೆ ನೀಡಿತ್ತು.

ಹಾಗೆ ನೋಡಿದರೆ ದಿಲೀಪ್‌ ಮಂಡಲ್‌ರವರು ಆ ರೀತಿಯ ಯಾವುದೇ ದ್ವೇಷಪೂರಿತ ಹೇಳಿಕೆಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಪ್ರಕಟಿಸಿರಲಿಲ್ಲ. ಬದಲಿಗೆ ನಿಜವಾಗಿಯೂ ದ್ವೇಷ ಬಿತ್ತುತ್ತಿದ್ದ, ಮುಸ್ಲಿಂ ಸಮುದಾಯದ ವಿರುದ್ಧ ಕಿಡಿಕಾರುತ್ತಿದ್ದ ಬಹಳಷ್ಟು ಜನರ, ಪತ್ರಕರ್ತರ ಟ್ವಿಟ್ಟರ್‌ಗಳು ಹಾಗೆ ರಾರಾಜಿಸುತ್ತಿದ್ದವು. ಇದು ದಿಲೀಪ್ ಮಂಡಲ್‌ರವರಿಗೆ ಮಾತ್ರವಲ್ಲದೇ ಬಹಳಷ್ಟು ಪ್ರಗತಿಪರ ಟ್ವಿಟ್ಟರ್‌ಗಳಿಗೆ ಇದೇ ಪರಿಸ್ಥಿತಿ ಇದುರಾಗಿತ್ತು.

ಇದರಿಂದ ಕೋಪಗೊಂಡ ದಿಲೀಪ್ ಮಂಡಲ್ ಅವರು ಟ್ವಿಟ್ಟರ್‌ನ ಈ ಪಕ್ಷಪಾತವನ್ನು ಅದೇ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದರು. ಇದೆಲ್ಲದಕ್ಕೂ ಉತ್ತರ ಬೇಕೆಂದು ಆಗ್ರಹಿಸಿದರು. ಅವರು #SackManishMaheshari ಎಂಬ ಹ್ಯಾಶ್‌ಟ್ಯಾಗ್ ಬಳಸಿ ತಮ್ಮ ಪ್ರಶ್ನೆಗಳನ್ನು ಕೇಳಿದರು.

ಮಣಿಶ್ ಮಹೇಶ್ವರಿಯವರು ಭಾರತದ ಟ್ವಿಟ್ಟರ್‌ನ ಎಂಡಿಯಾಗಿದ್ದಾರೆ. ದ್ವೇಷ ಹರಡುವ ಖಾತೆಗಳನ್ನು ಹಾಗೆ ಬಿಟ್ಟು ಜನಪರ ಪತ್ರಕರ್ತರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ವಿರೋಧಿಸಿ ಸಾವಿರಾರು ಜನರು ಅಸಮಾಧಾನಗೊಂಡಿದ್ದಾರೆ. ಮತ್ತು ಅವರೆಲ್ಲರೂ #SackManishMaheshari ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ತಮ್ಮ ಆಕ್ರೊಶವನ್ನು ಹೊರಹಾಕಿದರು.

ಶೀಘ್ರದಲ್ಲೇ ಇದು ಮೇಲ್ಭಾಗದಲ್ಲಿ ಟ್ರೆಂಡಿಂಗ್ ಆಗಿತ್ತು. ನೋಡನೋಡುತ್ತಿದ್ದಂತೆಯೇ ಭಾರತದಲ್ಲಿ ಎಂಟರಿಂದ ಮೂರನೆಯ ಸ್ಥಾನಕ್ಕೆ ಜಿಗಿಯಿತು. ಇದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತು. ಆದರೆ ಕ್ಷಣಾರ್ಧದಲ್ಲಿಯೇ ಅದು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು.

ಅಂದರೆ ಟ್ವಿಟ್ಟರ್‌ ಇಂಡಿಯಾ ಆ ಹ್ಯಾಸ್‌ಟ್ಯಾಗ್‌ ಅನ್ನು ಟ್ರೆಂಡಿಂಗ್‌ ನಿಂದ ತೆಗೆದುಹಾಕಿತ್ತು. ಇದರಿಂದ ಜಾಲತಾಣಿಗರು ಮತ್ತಷ್ಟು ಕ್ರೋಧಗೊಂಡರು. ಟ್ವಿಟರ್ ದ್ವೇಷದ ಮಾತನ್ನು ನಿಲ್ಲಿಸುವುದಿಲ್ಲ, ದ್ವೇಷಿಸುವವರಿಗೆ ಜಾಗವನ್ನು ನೀಡುತ್ತದೆ ಮತ್ತು ಟ್ವಿಟ್ಟರ್‌ನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸುವ ಜನರ ಮೇಲೆ ಮೃದುಭಾವನೆ ತಳೆಯುತ್ತದೆ ಆದರೆ ಅಂಚಿನಲ್ಲಿರುವ ವಿಭಾಗಗಳಾದ ದಲಿತರು, ಮುಸ್ಲಿಮರು, ಹಿಂದುಳಿದವರು, ಬುಡಕಟ್ಟು ಜನಾಂಗದವರು ಮತ್ತು ಈ ಗುಂಪುಗಳ ಬಳಕೆದಾರರ ಮೇಲೆ ಅತ್ಯಂತ ಕಠಿಣ ನಿರ್ಭಂಧಗಳನ್ನು ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಾದ ಸ್ವಲ್ಪ ಸಮಯದಲ್ಲಿಯೇ ಟ್ವಿಟ್ಟರ್‌ ಬಳಕೆದಾರರು #ಕ್ಯಾಸ್ಟಿಸ್ಟ್ ಟ್ವಿಟರ್ ಎಂಬ ಹ್ಯಾಷ್‌ಟ್ಯಾಗ್‌ ಬಳಸಿ ಅದನ್ನು ಸಹ ಟ್ರೆಂಡ್ ಮಾಡಿದ್ದಾರೆ. ವಿಚಿತ್ರವೆಂದರೆ, ಯಾವುದೇ ಉಲ್ಲಂಘನೆ ಇಲ್ಲದಿದ್ದರೂ ತಳಸಮುದಾಯಕ್ಕೆ ಸೇರಿದ ಖಾತೆಗಳನ್ನು ಟ್ವಿಟ್ಟರ್‌ ತ್ವರಿತವಾಗಿ ನಿರ್ಬಂಧಿಸಲಾಗುತ್ತದೆ. ಇದಕ್ಕೆ ಕಾರಣ ಟ್ವಿಟರ್ ಇಂಡಿಯಾದಲ್ಲಿ ಸಾಮಾಜಿಕ ಅಸಮತೋಲನವಿದೆ (ಕಂಪನಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳಲ್ಲಿ ವಿವಿಧ ಸಮುದಾಯಗಳ ಪ್ರಾತಿನಿಧ್ಯದ ಕೊರತೆ) ಅದರ ಬಗ್ಗೆ ಗಮನಹರಿಸಲು ಅದರ ಸಿಇಒಗೆ ಬಹಳಷ್ಟು ಜನರು ಒತ್ತಾಯಿಸಿದ್ದಾರೆ.

ಪತ್ರಕರ್ತ ದಿಲೀಪ್‌ ಮಂಡಲ್‌ರವರ ಟ್ವಿಟ್ಟರ್‌ ಖಾತೆಯನ್ನು ವೆರಿಫೈಡ್‌ ಎಂದು ಘೋಷಿಸಿದ ಟ್ವಿಟ್ಟರ್‌ಗೆ ಹಿರಿಯ ಪತ್ರಕರ್ತ ದಿ ಪ್ರಿಂಟ್‌ನ ಶೇಖರ್‌ ಗುಪ್ತಾ ಸಹ ಛೀಮಾರಿ ಹಾಕಿದ್ದಾರೆ.

ಟ್ವಿಟ್ಟರ್‌ಗೆ ಎಲ್ಲಾ ಸಮುದಾಯದವರನ್ನು ಒಳಗೊಳ್ಳುವ ಮತ್ತು ಸಮಾನತೆಯ ಪಾಠ ಬೋಧಿಸಲು ನೆಟ್ಟಿಗರು ತೀರ್ಮಾನಿಸಿದರು. ಅದಕ್ಕಾಗಿ ಭಾರತದಲ್ಲಿ ಸಮಾನತೆಗಾಗಿ ಜೀವಮುಡಿಪಿಟ್ಟ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನೆನಪಿಸಲು ಇಂದು ಬೆಳಿಗ್ಗೆಯೇ ಜೈಭೀಮ್‌ ಟ್ವಿಟ್ಟರ್‌ ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಹರಿಯಬಿಟ್ಟರು. ಕಾಂಗ್ರೆಸ್‌ನ ದಲಿತ ವಿಭಾಗದ ಅಧ್ಯಕ್ಷ ಮತ್ತು ಶಾಸಕ ಡಾ.ನಿತಿನ್‌ ರಾವತ್‌, ಗುಜರಾತ್‌ನ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ಅಲ್ಲವೇ ದಲಿತ್ ಏಕತಾ, ಬಹುಜನ್‌ಫಾರ್‌ ಇಂಡಿಯಾ, ಟ್ರೈಬಲ್‌ ಆರ್ಮಿ ಸೇರಿದಂತೆ ಸಾವಿರಾರು ಖಾತೆಗಳಿಂದ ಜೈಭೀಮ್‌ ಟ್ವಿಟ್ಟರ್‌ ಟ್ರೆಂಡ್‌ ಆಗಿದೆ.

ಅಂತೂ ಇದರಿಂದ ಟ್ವಿಟ್ಟರ್‌ ಮುಜುಗರಕ್ಕೆ ಒಳಗಾಗಿದೆ. ಇದು ಇಂದಿನ ತಳಸಮುದಾಯದ ಯುವತಲೆಮಾರಿನ ಸ್ವಾಭಿಮಾನ ಪ್ರದರ್ಶನದ ಧ್ಯೋತಕವಾಗಿದೆ. ಹೆಚ್ಚು ಹೆಚ್ಚು ಯುವಜನರು ಈ ಸಾಮಾಜಿಕ ಫ್ಲಾಟ್‌ಫಾರಂಗಳಿಗೆ ಬಂದಂತೆ ತಮ್ಮ ಅಸರ್ಸನ್‌ ಅನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಈ ವಿದ್ಯಮಾನದಿಂದ ಪಾಠ ಕಲಿಯಬೇಕಿದೆ. ಇಲ್ಲದಿದ್ದಲ್ಲಿ ಮತ್ತಷ್ಟು ಪ್ರತಿರೋಧ ವ್ಯಕ್ತವಾಗುವುದರಲ್ಲಿ ಸಂಶಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...