Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...