Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...