Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...