Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...