Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ‌ರವರ ಕೊರೊನ ಬಗೆಗಿನ ಟ್ವೀಟ್‌ಗಳನ್ನು ಅಳಿಸಿದ ಟ್ವಿಟ್ಟರ್‌!

- Advertisement -
- Advertisement -

ಕೊರೊನಾ ವೈರಸ್ ನಿರ್ಬಂಧಿತ ಕ್ರಮಗಳನ್ನು ಪ್ರಶ್ನಿಸಿದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಎರಡು ಟ್ವೀಟ್‌ಗಳನ್ನು ಅವರು ಸಾಮಾಜಿಕ ಜಾಲತಾಣದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಟ್ವಿಟ್ಟರ್‌ ತೆಗೆದುಹಾಕಿದೆ

ತೀವ್ರ ಬಲಪಂಥೀಯ ನಾಯಕನಾದ ಬೋಲ್ಸನಾರೊ ಹಲವಾರು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಅವರು ತಮ್ಮ ಸರ್ಕಾರದ ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಮುರಿದು ಬ್ರೆಸಿಲಿಯಾದ ಬೀದಿಗಳಲ್ಲಿ ಬೆಂಬಲಿಗರೊಂದಿಗೆ ಬೆರೆತು ಆರ್ಥಿಕತೆಯನ್ನು ಮುಂದುವರೆಸುವಂತೆ ಒತ್ತಾಯಿಸಿದ್ದರು.

ಎರಡು ಪೋಸ್ಟ್‌ಗಳನ್ನು ತೆಗೆದುಹಾಕಿದೆಯಲ್ಲದೆ ಅವುಗಳನ್ನು ಏಕೆ ತೆಗೆದುಹಾಕಲಾಗಿದೆ ಎಂಬುದನ್ನು ವಿವರಿಸುವ ನೋಟೀಸ್‌ ಅನ್ನು ಟ್ವಿಟ್ಟರ್‌ ನೀಡಿದೆ.

ಅಧಿಕೃತ ಮೂಲಗಳ ಪ್ರಕಾರ ಟ್ವಿಟ್ಟರ್‌ ಸಾರ್ವಜನಿಕ ಆರೋಗ್ಯ ಮಾಹಿತಿಗೆ ವಿರುದ್ಧವಾದ ವಿಷಯವನ್ನು ನಿರ್ವಹಿಸುವ ಕುರಿತು ತನ್ನ ಜಾಗತಿಕ ನಿಯಮಗಳನ್ನು ಇತ್ತೀಚೆಗೆ ವಿಸ್ತರಿಸಿದೆ. ಜನರು ಒಂದೆಡೆ ಸೇರುವುದರಿಂದ ಕೊರೊನಾ ಹರಡುವ ಹೆಚ್ಚಿನ ಅಪಾಯವಿದೆ ಎಂದು ಟ್ವಿಟರ್ ಹೇಳಿಕೆಯಲ್ಲಿ ವಿವರಿಸಿದೆ.

ಅಳಿಸಿದ ವೀಡಿಯೊವೊಂದರಲ್ಲಿ, ಬೋಲ್ಸನಾರೊ ಒಬ್ಬ ಬೀದಿ ಮಾರಾಟಗಾರನಿಗೆ, “ನಾನು ಜನರಿಂದ ಕೇಳುತ್ತಿರುವುದು ಅವರು ಕೆಲಸ ಮಾಡಲು ಬಯಸುತ್ತಾರೆ”. “ನಾನು ಮೊದಲಿನಿಂದಲೂ ಹೇಳಿದ್ದು, ‘ನಾವು ಜಾಗರೂಕರಾಗಿರುತ್ತೇವೆ, 65 ವರ್ಷಕ್ಕಿಂತ ಮೇಲ್ಪಟ್ಟವರು ಮನೆಯಲ್ಲಿಯೇ ಇರುತ್ತಾರೆ’ ಎಂದು ಅವರು ಹೇಳಿದ್ದರು.

“ನಾವು ಇನ್ನೂ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲ, ಭಯವಿದೆ, ಯಾಕೆಂದರೆ ನೀವು ರೋಗದಿಂದ ಸಾಯದಿದ್ದರೆ, ನೀವು ಹಸಿವಿನಿಂದ ಬಳಲುತ್ತಿದ್ದೀರಿ” ಎಂದು ಮಾರಾಟಗಾರ ಬೋಲ್ಸೊನಾರೊಗೆ ಹೇಳುತ್ತಾರೆ. ಆಗ ಅವರು ಪ್ರತಿಕ್ರಿಯಿಸುತ್ತಾ “ನೀವು ಸಾಯುವುದಿಲ್ಲ!” ಎನ್ನುತ್ತಾರೆ.

ಮತ್ತೊಂದು ವೀಡಿಯೊದಲ್ಲಿ, ಅಧ್ಯಕ್ಷರು “ಸಾಮಾನ್ಯ ಸ್ಥಿತಿಗೆ ಮರಳಬೇಕು” ಎಂದು ಹೇಳುತ್ತಾರೆ. ದಕ್ಷಿಣ ಅಮೆರಿಕಾದಾದ್ಯಂತ ಗವರ್ನರ್‌ಗಳು ಮತ್ತು ಕೆಲವು ಮೇಯರ್‌ಗಳು ವಿಧಿಸಿರುವ ಸಂಪರ್ಕತಡೆಯನ್ನು ಪ್ರಶ್ನಿಸಿದ್ದಾರೆ.

“ಇದೇ ರೀತಿ ಮುಂದುವರಿದರೆ, ನಿರುದ್ಯೋಗದ ಪ್ರಮಾಣವು ಹೆಚ್ಚಿ ಬಹಳ ಗಂಭೀರ ಸಮಸ್ಯೆಯಾಗಲಿದ್ದು, ಅದನ್ನು ಪರಿಹರಿಸಲು ವರ್ಷಗಳು ಬೇಕಾಗುತ್ತವೆ” ಎಂದು ಅವರು ಪ್ರತ್ಯೇಕತೆಯ ಕ್ರಮಗಳ ಬಗ್ಗೆ ಹೇಳಿದ್ದಾರೆ.

“ಬ್ರೆಜಿಲ್ ಅನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾವು ವೆನೆಜುವೆಲಾ ಆಗಿ ಬದಲಾಗುತ್ತೇವೆ” ಎಂದು ಬೋಲ್ಸನಾರೊ ನಂತರ ತಮ್ಮ ಅಧಿಕೃತ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬ್ರೆಜಿಲ್ ಆರೋಗ್ಯ ಸಚಿವ ಲೂಯಿಜ್ ಹೆನ್ರಿಕ್ ಮಾಂಡೆಟ್ಟಾ “ಬ್ರೆಜಿಲ್‌ನಲ್ಲಿ ಈಗಾಗಲೇ 3,904 ಜನರಿಗೆ ಸೋಂಕು ತಗುಲಿದ್ದು, 114 ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

“ವೈರಸ್ ಅನ್ನು ವಾಸ್ತವದೊಂದಿಗೆ ಎದುರಿಸೋಣ. ಇದು ಜೀವನ, ನಾವೆಲ್ಲರೂ ಒಂದು ದಿನ ಸಾಯಬೇಕು” ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ನಾಲ್ಕು ವೀಡಿಯೊಗಳಲ್ಲಿ, ಬೋಲ್ಸನಾರೊ ಅವರು ಸಣ್ಣ ಜನಸಂದಣಿಯಿಂದ ಸುತ್ತುವರೆದಿದ್ದರು. ಈ ಕಾರಣಕ್ಕಾಗಿ ಟ್ವಿಟ್ಟರ್‌ ಅವರ ಟ್ವೀಟ್‌ಗಳನ್ನು ಅಳಿಸಿಹಾಕಿದೆ.

ಬೋಲ್ಸೊನಾರೊ ಕೊರೊನ ವೈರಸ್ ಅನ್ನು “ಜ್ವರ” ಎಂದು ಬಣ್ಣಿಸಿದ್ದಾರೆ ಮತ್ತು ಶಾಲೆಗಳು ಮತ್ತು ಅಂಗಡಿಗಳನ್ನು ಪುನಃ ತೆರೆಯಬೇಕೆಂದು ಪ್ರತಿಪಾದಿಸಿದ್ದಾರೆ. ಸ್ವಯಂ-ಪ್ರತ್ಯೇಕತೆಯು 60 ಕ್ಕಿಂತಲೂ ಹೆಚ್ಚು ವಯಸ್ಸಿನವರಿಗೆ ಮಾತ್ರ ಅಗತ್ಯವಾಗಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...