Homeಅಂತರಾಷ್ಟ್ರೀಯಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

ಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

- Advertisement -
- Advertisement -

ಚೀನಾದ ಸರ್ಕಾರಕ್ಕೆ ಅನುಕೂಲಕರವಾಗಿ “ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡಿದ್ದಕ್ಕಾಗಿ” ಅಲ್ಲಿನ 1,70,000 ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಟ್ವಿಟ್ಟರ್ ಗುರುವಾರ ಪ್ರಕಟಿಸಿದೆ.

ಸಿಎನ್‌ಎನ್ ಪ್ರಕಾರ, ಟ್ವಿಟರ್‌ನೊಂದಿಗೆ ಕೆಲಸ ಮಾಡುವ ತಜ್ಞರು ಈ ಖಾತೆಗಳು ಹಾಂಗ್ ಕಾಂಗ್ ಪ್ರತಿಭಟನೆಗಳು, ಕೋವಿಡ್‌-19 ಮತ್ತು ಇತರ ವಿಷಯಗಳ ಸುತ್ತ ಮೋಸಗೊಳಿಸುವ ನಿರೂಪಣೆಗಳನ್ನು ನೀಡುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಖಾತೆಗಳು “ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾಕ್ಕೆ ಅನುಕೂಲಕರವಾದ ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡುತ್ತಿವೆ” ಎಂದು ಕಂಪನಿ ಹೇಳಿದೆ. ಅದು ಟ್ವಿಟ್ಟರ್‌ನ ಮ್ಯಾನಿಪುಲೇಶನ್ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದೆ.

ಚೀನಾದಲ್ಲಿ ಟ್ವಿಟ್ಟರ್ ಅನ್ನು ಅಧಿಕೃತವಾಗಿ ನಿರ್ಬಂಧಿಸಲಾಗಿದೆ, ಆದರೂ ದೇಶದ ಅನೇಕ ಜನರು ವಿಪಿಎನ್ ಬಳಸಿ ಅದನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.

ಚೀನಾದ ಈ ಅಭಿಯಾನದ ಗುರಿಗಳಲ್ಲಿ ಸಾಗರೋತ್ತರ ಚೀನಿಯರು ಪಕ್ಷ-ರಾಜ್ಯದ ಪ್ರಭಾವವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಬಳಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್ಟಿಟ್ಯೂಟ್ ತಿಳಿಸಿದ್ದು, ಅದರ ಒಂದು ಗುಂಪು ಟ್ವಿಟ್ಟರ್ ಖಾತೆಗಳನ್ನು ವಿಶ್ಲೇಷಿಸಲು ಕೆಲಸ ಮಾಡಿದೆ. ಈ ಖಾತೆಗಳು ಪ್ರಧಾನವಾಗಿ ಚೀನೀ ಭಾಷೆಗಳಲ್ಲಿ ವ್ಯವಹರಿಸಿದೆ ಎಂದು ಟ್ವಿಟರ್ ಹೇಳಿದೆ.

ಸ್ಟ್ಯಾನ್‌ಫೋರ್ಡ್ ಇಂಟರ್ನೆಟ್ ಅಬ್ಸರ್ವೇಟರಿಯ ಸಂಶೋಧನಾ ವ್ಯವಸ್ಥಾಪಕ ರೆನೀ ಡಿರೆಸ್ಟಾ, ಈ ಖಾತೆಗಳನ್ನು ಜನವರಿಯಲ್ಲಿ ಸ್ಥಾಪಿಸಲಾಗಿದೆ ಮತ್ತು ಕೋವಿಡ್ -19 ಬಗ್ಗೆ ಪೋಸ್ಟ್ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. “ಈ ಖಾತೆಗಳು ಕೋವಿಡ್ -19 ವೈರಸ್‌ಗೆ ಚೀನಾದ ಪ್ರತಿಕ್ರಿಯೆಯನ್ನು ಶ್ಲಾಘಿಸಿವೆ. ಜೊತೆಗೆ ಯು.ಎಸ್ ಮತ್ತು ಹಾಂಗ್ ಕಾಂಗ್ ಕಾರ್ಯಕರ್ತರನ್ನು ದ್ವೇಷಿಸಲು ಸಾಂಕ್ರಾಮಿಕ ರೋಗವನ್ನು ಬಳಸಿಕೊಂಡಿವೆ ಎನ್ನಲಾಗಿದೆ”.

ಅವುಗಳಲ್ಲಿ 23,750 ಖಾತೆಗಳನ್ನು “ಹೆಚ್ಚು ತೊಡಗಿಸಿಕೊಂಡಿರುವ ಕೋರ್ ನೆಟ್‌ವರ್ಕ್” ಎಂದು ಗುರುತಿಸಲಾಗಿದೆ. ಇವು ಪ್ರಧಾನವಾಗಿ ಚೀನಾಕ್ಕೆ ಅನುಕೂಲಕರವಾದ ವಿಷಯವನ್ನು ಟ್ವೀಟ್ ಮಾಡುತ್ತವೆ. ಉಳಿದ ಇನ್ನೂ 150,000 ಖಾತೆಗಳು ಅವುಗಳನ್ನು ರೀಟ್ವೀಟ್‌ ಮಾಡಲು ಬಳಸಲಾಗುತ್ತಿತ್ತು ಎನ್ನಲಾಗಿದೆ.

23,750 ಖಾತೆಗಳು ಒಟ್ಟಾರೆಯಾಗಿ 3,48,608 ಬಾರಿ ಟ್ವೀಟ್ ಮಾಡಿವೆ ಎಂದು ಸ್ಟ್ಯಾನ್‌ಫೋರ್ಡ್ ಸಂಶೋಧಕರು ತಿಳಿಸಿದ್ದಾರೆ.

ಆಗಸ್ಟ್ 2019 ರಲ್ಲಿ, ಟ್ವಿಟರ್ “ಉದ್ದೇಶಪೂರ್ವಕವಾಗಿ ಮತ್ತು ನಿರ್ದಿಷ್ಟವಾಗಿ ಹಾಂಗ್ ಕಾಂಗ್‌ನಲ್ಲಿನ ರಾಜಕೀಯ ಭಿನ್ನಾಭಿಪ್ರಾಯವನ್ನು ಬಿತ್ತುವ ಪ್ರಯತ್ನಕ್ಕಾಗಿ” ಚೀನಾದ ಮುಖ್ಯ ಭೂಭಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾದ ಸುಮಾರು 1,000 ಖಾತೆಗಳನ್ನು ತೆಗೆದುಹಾಕಿತ್ತು.


ಇದನ್ನೂ ಓದಿ: ಬಾಯ್ಕಟ್ ಚೀನಾ ಎಂಬ ಮಕ್ಕಳಾಟ: ಪ್ರಪಂಚವನ್ನು ಚೀನಾ ಆವರಿಸುತ್ತಿವುದು ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...