Homeಅಂತರಾಷ್ಟ್ರೀಯಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

ಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

- Advertisement -
- Advertisement -

ಚೀನಾದ ಸರ್ಕಾರಕ್ಕೆ ಅನುಕೂಲಕರವಾಗಿ “ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡಿದ್ದಕ್ಕಾಗಿ” ಅಲ್ಲಿನ 1,70,000 ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಟ್ವಿಟ್ಟರ್ ಗುರುವಾರ ಪ್ರಕಟಿಸಿದೆ.

ಸಿಎನ್‌ಎನ್ ಪ್ರಕಾರ, ಟ್ವಿಟರ್‌ನೊಂದಿಗೆ ಕೆಲಸ ಮಾಡುವ ತಜ್ಞರು ಈ ಖಾತೆಗಳು ಹಾಂಗ್ ಕಾಂಗ್ ಪ್ರತಿಭಟನೆಗಳು, ಕೋವಿಡ್‌-19 ಮತ್ತು ಇತರ ವಿಷಯಗಳ ಸುತ್ತ ಮೋಸಗೊಳಿಸುವ ನಿರೂಪಣೆಗಳನ್ನು ನೀಡುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಖಾತೆಗಳು “ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾಕ್ಕೆ ಅನುಕೂಲಕರವಾದ ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡುತ್ತಿವೆ” ಎಂದು ಕಂಪನಿ ಹೇಳಿದೆ. ಅದು ಟ್ವಿಟ್ಟರ್‌ನ ಮ್ಯಾನಿಪುಲೇಶನ್ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದೆ.

ಚೀನಾದಲ್ಲಿ ಟ್ವಿಟ್ಟರ್ ಅನ್ನು ಅಧಿಕೃತವಾಗಿ ನಿರ್ಬಂಧಿಸಲಾಗಿದೆ, ಆದರೂ ದೇಶದ ಅನೇಕ ಜನರು ವಿಪಿಎನ್ ಬಳಸಿ ಅದನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.

ಚೀನಾದ ಈ ಅಭಿಯಾನದ ಗುರಿಗಳಲ್ಲಿ ಸಾಗರೋತ್ತರ ಚೀನಿಯರು ಪಕ್ಷ-ರಾಜ್ಯದ ಪ್ರಭಾವವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಬಳಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್ಟಿಟ್ಯೂಟ್ ತಿಳಿಸಿದ್ದು, ಅದರ ಒಂದು ಗುಂಪು ಟ್ವಿಟ್ಟರ್ ಖಾತೆಗಳನ್ನು ವಿಶ್ಲೇಷಿಸಲು ಕೆಲಸ ಮಾಡಿದೆ. ಈ ಖಾತೆಗಳು ಪ್ರಧಾನವಾಗಿ ಚೀನೀ ಭಾಷೆಗಳಲ್ಲಿ ವ್ಯವಹರಿಸಿದೆ ಎಂದು ಟ್ವಿಟರ್ ಹೇಳಿದೆ.

ಸ್ಟ್ಯಾನ್‌ಫೋರ್ಡ್ ಇಂಟರ್ನೆಟ್ ಅಬ್ಸರ್ವೇಟರಿಯ ಸಂಶೋಧನಾ ವ್ಯವಸ್ಥಾಪಕ ರೆನೀ ಡಿರೆಸ್ಟಾ, ಈ ಖಾತೆಗಳನ್ನು ಜನವರಿಯಲ್ಲಿ ಸ್ಥಾಪಿಸಲಾಗಿದೆ ಮತ್ತು ಕೋವಿಡ್ -19 ಬಗ್ಗೆ ಪೋಸ್ಟ್ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. “ಈ ಖಾತೆಗಳು ಕೋವಿಡ್ -19 ವೈರಸ್‌ಗೆ ಚೀನಾದ ಪ್ರತಿಕ್ರಿಯೆಯನ್ನು ಶ್ಲಾಘಿಸಿವೆ. ಜೊತೆಗೆ ಯು.ಎಸ್ ಮತ್ತು ಹಾಂಗ್ ಕಾಂಗ್ ಕಾರ್ಯಕರ್ತರನ್ನು ದ್ವೇಷಿಸಲು ಸಾಂಕ್ರಾಮಿಕ ರೋಗವನ್ನು ಬಳಸಿಕೊಂಡಿವೆ ಎನ್ನಲಾಗಿದೆ”.

ಅವುಗಳಲ್ಲಿ 23,750 ಖಾತೆಗಳನ್ನು “ಹೆಚ್ಚು ತೊಡಗಿಸಿಕೊಂಡಿರುವ ಕೋರ್ ನೆಟ್‌ವರ್ಕ್” ಎಂದು ಗುರುತಿಸಲಾಗಿದೆ. ಇವು ಪ್ರಧಾನವಾಗಿ ಚೀನಾಕ್ಕೆ ಅನುಕೂಲಕರವಾದ ವಿಷಯವನ್ನು ಟ್ವೀಟ್ ಮಾಡುತ್ತವೆ. ಉಳಿದ ಇನ್ನೂ 150,000 ಖಾತೆಗಳು ಅವುಗಳನ್ನು ರೀಟ್ವೀಟ್‌ ಮಾಡಲು ಬಳಸಲಾಗುತ್ತಿತ್ತು ಎನ್ನಲಾಗಿದೆ.

23,750 ಖಾತೆಗಳು ಒಟ್ಟಾರೆಯಾಗಿ 3,48,608 ಬಾರಿ ಟ್ವೀಟ್ ಮಾಡಿವೆ ಎಂದು ಸ್ಟ್ಯಾನ್‌ಫೋರ್ಡ್ ಸಂಶೋಧಕರು ತಿಳಿಸಿದ್ದಾರೆ.

ಆಗಸ್ಟ್ 2019 ರಲ್ಲಿ, ಟ್ವಿಟರ್ “ಉದ್ದೇಶಪೂರ್ವಕವಾಗಿ ಮತ್ತು ನಿರ್ದಿಷ್ಟವಾಗಿ ಹಾಂಗ್ ಕಾಂಗ್‌ನಲ್ಲಿನ ರಾಜಕೀಯ ಭಿನ್ನಾಭಿಪ್ರಾಯವನ್ನು ಬಿತ್ತುವ ಪ್ರಯತ್ನಕ್ಕಾಗಿ” ಚೀನಾದ ಮುಖ್ಯ ಭೂಭಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾದ ಸುಮಾರು 1,000 ಖಾತೆಗಳನ್ನು ತೆಗೆದುಹಾಕಿತ್ತು.


ಇದನ್ನೂ ಓದಿ: ಬಾಯ್ಕಟ್ ಚೀನಾ ಎಂಬ ಮಕ್ಕಳಾಟ: ಪ್ರಪಂಚವನ್ನು ಚೀನಾ ಆವರಿಸುತ್ತಿವುದು ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...