Homeಅಂತರಾಷ್ಟ್ರೀಯಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

ಚೀನಾದ 1.7 ಲಕ್ಷ ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟ್ಟರ್‌: ಕಾರಣವೇನು?

- Advertisement -
- Advertisement -

ಚೀನಾದ ಸರ್ಕಾರಕ್ಕೆ ಅನುಕೂಲಕರವಾಗಿ “ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡಿದ್ದಕ್ಕಾಗಿ” ಅಲ್ಲಿನ 1,70,000 ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಟ್ವಿಟ್ಟರ್ ಗುರುವಾರ ಪ್ರಕಟಿಸಿದೆ.

ಸಿಎನ್‌ಎನ್ ಪ್ರಕಾರ, ಟ್ವಿಟರ್‌ನೊಂದಿಗೆ ಕೆಲಸ ಮಾಡುವ ತಜ್ಞರು ಈ ಖಾತೆಗಳು ಹಾಂಗ್ ಕಾಂಗ್ ಪ್ರತಿಭಟನೆಗಳು, ಕೋವಿಡ್‌-19 ಮತ್ತು ಇತರ ವಿಷಯಗಳ ಸುತ್ತ ಮೋಸಗೊಳಿಸುವ ನಿರೂಪಣೆಗಳನ್ನು ನೀಡುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಖಾತೆಗಳು “ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾಕ್ಕೆ ಅನುಕೂಲಕರವಾದ ಭೌಗೋಳಿಕ ರಾಜಕೀಯ ನಿರೂಪಣೆಗಳನ್ನು ಹರಡುತ್ತಿವೆ” ಎಂದು ಕಂಪನಿ ಹೇಳಿದೆ. ಅದು ಟ್ವಿಟ್ಟರ್‌ನ ಮ್ಯಾನಿಪುಲೇಶನ್ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವುಗಳನ್ನು ತೆಗೆದುಹಾಕಲಾಗಿದೆ ಎಂದು ತಿಳಿಸಿದೆ.

ಚೀನಾದಲ್ಲಿ ಟ್ವಿಟ್ಟರ್ ಅನ್ನು ಅಧಿಕೃತವಾಗಿ ನಿರ್ಬಂಧಿಸಲಾಗಿದೆ, ಆದರೂ ದೇಶದ ಅನೇಕ ಜನರು ವಿಪಿಎನ್ ಬಳಸಿ ಅದನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.

ಚೀನಾದ ಈ ಅಭಿಯಾನದ ಗುರಿಗಳಲ್ಲಿ ಸಾಗರೋತ್ತರ ಚೀನಿಯರು ಪಕ್ಷ-ರಾಜ್ಯದ ಪ್ರಭಾವವನ್ನು ವಿಸ್ತರಿಸುವ ಸಾಮರ್ಥ್ಯವನ್ನು ಬಳಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಆಸ್ಟ್ರೇಲಿಯನ್ ಸ್ಟ್ರಾಟೆಜಿಕ್ ಪಾಲಿಸಿ ಇನ್ಸ್ಟಿಟ್ಯೂಟ್ ತಿಳಿಸಿದ್ದು, ಅದರ ಒಂದು ಗುಂಪು ಟ್ವಿಟ್ಟರ್ ಖಾತೆಗಳನ್ನು ವಿಶ್ಲೇಷಿಸಲು ಕೆಲಸ ಮಾಡಿದೆ. ಈ ಖಾತೆಗಳು ಪ್ರಧಾನವಾಗಿ ಚೀನೀ ಭಾಷೆಗಳಲ್ಲಿ ವ್ಯವಹರಿಸಿದೆ ಎಂದು ಟ್ವಿಟರ್ ಹೇಳಿದೆ.

ಸ್ಟ್ಯಾನ್‌ಫೋರ್ಡ್ ಇಂಟರ್ನೆಟ್ ಅಬ್ಸರ್ವೇಟರಿಯ ಸಂಶೋಧನಾ ವ್ಯವಸ್ಥಾಪಕ ರೆನೀ ಡಿರೆಸ್ಟಾ, ಈ ಖಾತೆಗಳನ್ನು ಜನವರಿಯಲ್ಲಿ ಸ್ಥಾಪಿಸಲಾಗಿದೆ ಮತ್ತು ಕೋವಿಡ್ -19 ಬಗ್ಗೆ ಪೋಸ್ಟ್ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. “ಈ ಖಾತೆಗಳು ಕೋವಿಡ್ -19 ವೈರಸ್‌ಗೆ ಚೀನಾದ ಪ್ರತಿಕ್ರಿಯೆಯನ್ನು ಶ್ಲಾಘಿಸಿವೆ. ಜೊತೆಗೆ ಯು.ಎಸ್ ಮತ್ತು ಹಾಂಗ್ ಕಾಂಗ್ ಕಾರ್ಯಕರ್ತರನ್ನು ದ್ವೇಷಿಸಲು ಸಾಂಕ್ರಾಮಿಕ ರೋಗವನ್ನು ಬಳಸಿಕೊಂಡಿವೆ ಎನ್ನಲಾಗಿದೆ”.

ಅವುಗಳಲ್ಲಿ 23,750 ಖಾತೆಗಳನ್ನು “ಹೆಚ್ಚು ತೊಡಗಿಸಿಕೊಂಡಿರುವ ಕೋರ್ ನೆಟ್‌ವರ್ಕ್” ಎಂದು ಗುರುತಿಸಲಾಗಿದೆ. ಇವು ಪ್ರಧಾನವಾಗಿ ಚೀನಾಕ್ಕೆ ಅನುಕೂಲಕರವಾದ ವಿಷಯವನ್ನು ಟ್ವೀಟ್ ಮಾಡುತ್ತವೆ. ಉಳಿದ ಇನ್ನೂ 150,000 ಖಾತೆಗಳು ಅವುಗಳನ್ನು ರೀಟ್ವೀಟ್‌ ಮಾಡಲು ಬಳಸಲಾಗುತ್ತಿತ್ತು ಎನ್ನಲಾಗಿದೆ.

23,750 ಖಾತೆಗಳು ಒಟ್ಟಾರೆಯಾಗಿ 3,48,608 ಬಾರಿ ಟ್ವೀಟ್ ಮಾಡಿವೆ ಎಂದು ಸ್ಟ್ಯಾನ್‌ಫೋರ್ಡ್ ಸಂಶೋಧಕರು ತಿಳಿಸಿದ್ದಾರೆ.

ಆಗಸ್ಟ್ 2019 ರಲ್ಲಿ, ಟ್ವಿಟರ್ “ಉದ್ದೇಶಪೂರ್ವಕವಾಗಿ ಮತ್ತು ನಿರ್ದಿಷ್ಟವಾಗಿ ಹಾಂಗ್ ಕಾಂಗ್‌ನಲ್ಲಿನ ರಾಜಕೀಯ ಭಿನ್ನಾಭಿಪ್ರಾಯವನ್ನು ಬಿತ್ತುವ ಪ್ರಯತ್ನಕ್ಕಾಗಿ” ಚೀನಾದ ಮುಖ್ಯ ಭೂಭಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾದ ಸುಮಾರು 1,000 ಖಾತೆಗಳನ್ನು ತೆಗೆದುಹಾಕಿತ್ತು.


ಇದನ್ನೂ ಓದಿ: ಬಾಯ್ಕಟ್ ಚೀನಾ ಎಂಬ ಮಕ್ಕಳಾಟ: ಪ್ರಪಂಚವನ್ನು ಚೀನಾ ಆವರಿಸುತ್ತಿವುದು ಬಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...