Homeಅಂತರಾಷ್ಟ್ರೀಯಸುಳ್ಳನ್ನು ’ಫ್ಯಾಕ್ಟ್ ಚೆಕ್’ ಮಾಡಿದ ಟ್ವಿಟ್ಟರ್‌: ಜಾಲತಾಣ ಮುಚ್ಚುವುದಾಗಿ ಟ್ರಂಪ್ ಬೆದರಿಕೆ

ಸುಳ್ಳನ್ನು ’ಫ್ಯಾಕ್ಟ್ ಚೆಕ್’ ಮಾಡಿದ ಟ್ವಿಟ್ಟರ್‌: ಜಾಲತಾಣ ಮುಚ್ಚುವುದಾಗಿ ಟ್ರಂಪ್ ಬೆದರಿಕೆ

- Advertisement -
- Advertisement -

ಎರಡು ಟ್ವೀಟ್‌ಗಳನ್ನು “ಆಧಾರರಹಿತ” ಎಂದು ಲೇಬಲ್ ಮಾಡಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಟ್ವಿಟ್ಟರ್‌ ಆರೋಪಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ.

“ಜಾಲತಾಣ ಪ್ಲಾಟ್‌ಫಾರ್ಮ್‌ಗಳು ಸಂಪ್ರದಾಯವಾದಿಗಳ ಧ್ವನಿಯನ್ನು ಸಂಪೂರ್ಣವಾಗಿ ಮೌನಗೊಳಿಸುತ್ತವೆ ಎಂದು ರಿಪಬ್ಲಿಕನ್ನರು ಭಾವಿಸುತ್ತಾರೆ. ಇದನ್ನು ನಿಯಂತ್ರಿಸಲು ಅಥವಾ ಮುಚ್ಚಲು ಆಗದಿರುವಂತಹ ಸಮಯ ಬರುವುದಕ್ಕಿಂತ ಮೊದಲು, ಇದನ್ನು ನಾವು ಬಲವಾಗಿ ನಿಯಂತ್ರಿಸುತ್ತೇವೆ ಅಥವಾ ಮುಚ್ಚುತ್ತೇವೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಅಮೆರಿಕಾ ಅಧ್ಯಕ್ಷ ಟ್ರಂಪ್ ಮಂಗಳವಾರ ಪೋಸ್ಟ್ ಮಾಡಿದ ಎರಡು ಟ್ವೀಟ್‌ಗಳನ್ನು ಗುರಿಯಾಗಿಸಿದ ಟ್ವಿಟ್ಟರ್‌, ಇದರಲ್ಲಿ ಮೇಲ್-ಇನ್ ಮತದಾನವು ವಂಚನೆ ಮತ್ತು “ಕಠಿಣ ಚುನಾವಣೆಗೆ” ಕಾರಣವಾಗುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದೆ ಅವರು ವಾದಿಸಿದೆ.

ಅವರ ಟ್ವೀಟ್‌ಗಳ ಅಡಿಯಲ್ಲಿ, ಪೋಸ್ಟ್‌ಗಳನ್ನು ನಿರಾಕರಿಸುವ “ಮೇಲ್-ಇನ್ ಬ್ಯಾಲೆಟ್‌ಗಳ ಬಗ್ಗೆ ಸತ್ಯಗಳನ್ನು ಪಡೆಯಿರಿ” ಎಂದು ಬರೆದ ಲಿಂಕ್ ಅನ್ನು ಟ್ವಿಟರ್‌ ಪೋಸ್ಟ್ ಮಾಡಿದೆ.

 

ನಮ್ಮ ದೇಶದಲ್ಲಿ ದೊಡ್ಡ ಪ್ರಮಾಣದ ಮೇಲ್-ಇನ್ ಮತಪತ್ರಗಳು ಬೇರೂರಲು ನಾವು ಅನುಮತಿಸುವುದಿಲ್ಲ ಎಂದು ಟ್ರಂಪ್ ಬುಧವಾರ ಮತ್ತೆ ಹೇಳಿದ್ದಾರೆ. ಇದರಿಂದಾಗಿ ಎಲ್ಲರಿಗೂ ಮೋಸ, ಖೋಟಾ ಮತ್ತು ಮತಪತ್ರಗಳ ಕಳ್ಳತನಕ್ಕೆ ಮುಕ್ತವಾಗಿದೆ ಎಂದರು.

“ಯಾರು ಹೆಚ್ಚು ಮೋಸ ಮಾಡಿದರೂ ಗೆಲ್ಲುತ್ತಾರೆ. ಅಂತೆಯೇ, ಸೋಷಿಯಲ್ ಮೀಡಿಯಾ. ನಿಮ್ಮ ಕಾರ್ಯವನ್ನು ಸ್ವಚ್ಛಗೊಳಿಸಿ, ಈಗ !!!!” ಎಂದು ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಮಧ್ಯಪ್ರವೇಶಿಸುತ್ತಿವೆ ಎಂದು ಅಧ್ಯಕ್ಷರು ಆರೋಪಿಸಿದ್ದರು, “ಅವರು 2016 ರಲ್ಲಿ ಏನು ಮಾಡಲು ಪ್ರಯತ್ನಿಸಿದರು ಮತ್ತು ವಿಫಲರಾದರು ಎಂಬುದನ್ನು ನಾವು ನೋಡಿದ್ದೇವೆ” ಎಂದಿರುವ ಅವರು, “ಅದರ ಅತ್ಯಾಧುನಿಕ ಆವೃತ್ತಿಯನ್ನು ಮತ್ತೆ ಸಂಭವಿಸಲು ನಾವು ಅನುಮತಿಸುವುದಿಲ್ಲ.” ಎಂದು ಹೇಳಿದ್ದಾರೆ.

ಆದರೆ 2016 ಅಧ್ಯಕ್ಷೀಯ ಚುನಾವಣೆನ್ನು ಜಯಗಳಿಸಲು ಟ್ವಿಟ್ಟರ್‌, ಫೇಸ್‌ಬುಕ್ ಹಾಗೂ ಇನ್ಸ್‌ಟ್ರಾಗ್ರಾಮ್‌ ತನಗೆ ಸಹಾಯ ಮಾಡಿದೆ ಎಂದು ಸ್ವತಃ ಟ್ರಂಪ್ ಒಪ್ಪಿಕೊಂಡಿದ್ದರು. “ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮುಂತಾದವುಗಳ ಸಂಖ್ಯೆಯಲ್ಲಿ ನಾನು ಶಕ್ತಿಯನ್ನು ಹೊಂದಿದ್ದೇನೆ” ಎಂದು ಅಂದು ತಿಳಿಸಿದ್ದರು. 

2016 ರಲ್ಲಿ ಆಯ್ಕೆಯಾಗುವ ಮೊದಲು, ಅಮೆರಿಕದ ಮೊದಲ ಕಪ್ಪು ಅಧ್ಯಕ್ಷ ಬರಾಕ್ ಒಬಾಮ ಅವರು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಜನಿಸಿಲ್ಲ ಮತ್ತು ಆದ್ದರಿಂದ ಅಧ್ಯಕ್ಷರಾಗಲು ಅರ್ಹರಲ್ಲ ಎಂಬ ಸುಳ್ಳನ್ನು ಹೇಳಿದ್ದರು.


ಓದಿ: ಇದನ್ನು ನಮಸ್ತೆ ಟ್ರಂಪ್ ವೈರಸ್ ಅಂತ ಯಾಕೆ ಕರೀತಿಲ್ಲ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...