Homeಅಂತರಾಷ್ಟ್ರೀಯಸುಳ್ಳನ್ನು ’ಫ್ಯಾಕ್ಟ್ ಚೆಕ್’ ಮಾಡಿದ ಟ್ವಿಟ್ಟರ್‌: ಜಾಲತಾಣ ಮುಚ್ಚುವುದಾಗಿ ಟ್ರಂಪ್ ಬೆದರಿಕೆ

ಸುಳ್ಳನ್ನು ’ಫ್ಯಾಕ್ಟ್ ಚೆಕ್’ ಮಾಡಿದ ಟ್ವಿಟ್ಟರ್‌: ಜಾಲತಾಣ ಮುಚ್ಚುವುದಾಗಿ ಟ್ರಂಪ್ ಬೆದರಿಕೆ

- Advertisement -
- Advertisement -

ಎರಡು ಟ್ವೀಟ್‌ಗಳನ್ನು “ಆಧಾರರಹಿತ” ಎಂದು ಲೇಬಲ್ ಮಾಡಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಟ್ವಿಟ್ಟರ್‌ ಆರೋಪಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ.

“ಜಾಲತಾಣ ಪ್ಲಾಟ್‌ಫಾರ್ಮ್‌ಗಳು ಸಂಪ್ರದಾಯವಾದಿಗಳ ಧ್ವನಿಯನ್ನು ಸಂಪೂರ್ಣವಾಗಿ ಮೌನಗೊಳಿಸುತ್ತವೆ ಎಂದು ರಿಪಬ್ಲಿಕನ್ನರು ಭಾವಿಸುತ್ತಾರೆ. ಇದನ್ನು ನಿಯಂತ್ರಿಸಲು ಅಥವಾ ಮುಚ್ಚಲು ಆಗದಿರುವಂತಹ ಸಮಯ ಬರುವುದಕ್ಕಿಂತ ಮೊದಲು, ಇದನ್ನು ನಾವು ಬಲವಾಗಿ ನಿಯಂತ್ರಿಸುತ್ತೇವೆ ಅಥವಾ ಮುಚ್ಚುತ್ತೇವೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಅಮೆರಿಕಾ ಅಧ್ಯಕ್ಷ ಟ್ರಂಪ್ ಮಂಗಳವಾರ ಪೋಸ್ಟ್ ಮಾಡಿದ ಎರಡು ಟ್ವೀಟ್‌ಗಳನ್ನು ಗುರಿಯಾಗಿಸಿದ ಟ್ವಿಟ್ಟರ್‌, ಇದರಲ್ಲಿ ಮೇಲ್-ಇನ್ ಮತದಾನವು ವಂಚನೆ ಮತ್ತು “ಕಠಿಣ ಚುನಾವಣೆಗೆ” ಕಾರಣವಾಗುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದೆ ಅವರು ವಾದಿಸಿದೆ.

ಅವರ ಟ್ವೀಟ್‌ಗಳ ಅಡಿಯಲ್ಲಿ, ಪೋಸ್ಟ್‌ಗಳನ್ನು ನಿರಾಕರಿಸುವ “ಮೇಲ್-ಇನ್ ಬ್ಯಾಲೆಟ್‌ಗಳ ಬಗ್ಗೆ ಸತ್ಯಗಳನ್ನು ಪಡೆಯಿರಿ” ಎಂದು ಬರೆದ ಲಿಂಕ್ ಅನ್ನು ಟ್ವಿಟರ್‌ ಪೋಸ್ಟ್ ಮಾಡಿದೆ.

 

ನಮ್ಮ ದೇಶದಲ್ಲಿ ದೊಡ್ಡ ಪ್ರಮಾಣದ ಮೇಲ್-ಇನ್ ಮತಪತ್ರಗಳು ಬೇರೂರಲು ನಾವು ಅನುಮತಿಸುವುದಿಲ್ಲ ಎಂದು ಟ್ರಂಪ್ ಬುಧವಾರ ಮತ್ತೆ ಹೇಳಿದ್ದಾರೆ. ಇದರಿಂದಾಗಿ ಎಲ್ಲರಿಗೂ ಮೋಸ, ಖೋಟಾ ಮತ್ತು ಮತಪತ್ರಗಳ ಕಳ್ಳತನಕ್ಕೆ ಮುಕ್ತವಾಗಿದೆ ಎಂದರು.

“ಯಾರು ಹೆಚ್ಚು ಮೋಸ ಮಾಡಿದರೂ ಗೆಲ್ಲುತ್ತಾರೆ. ಅಂತೆಯೇ, ಸೋಷಿಯಲ್ ಮೀಡಿಯಾ. ನಿಮ್ಮ ಕಾರ್ಯವನ್ನು ಸ್ವಚ್ಛಗೊಳಿಸಿ, ಈಗ !!!!” ಎಂದು ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಮಧ್ಯಪ್ರವೇಶಿಸುತ್ತಿವೆ ಎಂದು ಅಧ್ಯಕ್ಷರು ಆರೋಪಿಸಿದ್ದರು, “ಅವರು 2016 ರಲ್ಲಿ ಏನು ಮಾಡಲು ಪ್ರಯತ್ನಿಸಿದರು ಮತ್ತು ವಿಫಲರಾದರು ಎಂಬುದನ್ನು ನಾವು ನೋಡಿದ್ದೇವೆ” ಎಂದಿರುವ ಅವರು, “ಅದರ ಅತ್ಯಾಧುನಿಕ ಆವೃತ್ತಿಯನ್ನು ಮತ್ತೆ ಸಂಭವಿಸಲು ನಾವು ಅನುಮತಿಸುವುದಿಲ್ಲ.” ಎಂದು ಹೇಳಿದ್ದಾರೆ.

ಆದರೆ 2016 ಅಧ್ಯಕ್ಷೀಯ ಚುನಾವಣೆನ್ನು ಜಯಗಳಿಸಲು ಟ್ವಿಟ್ಟರ್‌, ಫೇಸ್‌ಬುಕ್ ಹಾಗೂ ಇನ್ಸ್‌ಟ್ರಾಗ್ರಾಮ್‌ ತನಗೆ ಸಹಾಯ ಮಾಡಿದೆ ಎಂದು ಸ್ವತಃ ಟ್ರಂಪ್ ಒಪ್ಪಿಕೊಂಡಿದ್ದರು. “ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮುಂತಾದವುಗಳ ಸಂಖ್ಯೆಯಲ್ಲಿ ನಾನು ಶಕ್ತಿಯನ್ನು ಹೊಂದಿದ್ದೇನೆ” ಎಂದು ಅಂದು ತಿಳಿಸಿದ್ದರು. 

2016 ರಲ್ಲಿ ಆಯ್ಕೆಯಾಗುವ ಮೊದಲು, ಅಮೆರಿಕದ ಮೊದಲ ಕಪ್ಪು ಅಧ್ಯಕ್ಷ ಬರಾಕ್ ಒಬಾಮ ಅವರು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಜನಿಸಿಲ್ಲ ಮತ್ತು ಆದ್ದರಿಂದ ಅಧ್ಯಕ್ಷರಾಗಲು ಅರ್ಹರಲ್ಲ ಎಂಬ ಸುಳ್ಳನ್ನು ಹೇಳಿದ್ದರು.


ಓದಿ: ಇದನ್ನು ನಮಸ್ತೆ ಟ್ರಂಪ್ ವೈರಸ್ ಅಂತ ಯಾಕೆ ಕರೀತಿಲ್ಲ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...